ETV Bharat / state

ಟಿಪ್ಪು ಎಕ್ಸ್‌ಪ್ರೆಸ್ ರೈಲಿಗೆ ಕೃಷ್ಣರಾಜ ಒಡೆಯರ್ ಹೆಸರಿಡಿ: ಹಿಂದೂ ಜನ ಜಾಗೃತಿ ಸಮಿತಿ ಒತ್ತಾಯ - sri krishnaraja wodeyar

ಕಾಂಗ್ರೆಸ್ ಆಡಳಿತದಲ್ಲಿ ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ರೈಲಿಗೆ ಅಲ್ಪಸಂಖ್ಯಾತರ ಓಲೈಕೆ ದೃಷ್ಟಿಯಿಂದ ಟಿಪ್ಪು ಎಕ್ಸ್‌ಪ್ರೆಸ್‌ ಎಂದು ನಾಮಕರಣ ಮಾಡಲಾಗಿದೆ. ಈ ಹೆಸರು ಬದಲಾಯಿಸಿ ಶ್ರೀ ಕೃಷ್ಣರಾಜ ಒಡೆಯರ್ ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ಮಾಡಬೇಕು ಎಂದು ಹಿಂದೂ ಜನ ಜಾಗೃತಿ ಸದಸ್ಯರು ಒತ್ತಾಯಿಸಿದ್ದಾರೆ.

ಹಿಂದೂ ಜನ ಜಾಗೃತಿ ಸಮಿತಿ ಸದಸ್ಯರು ಪ್ರತಿಭಟನೆ ಮಾಡಿದರು.
author img

By

Published : Aug 23, 2019, 9:33 AM IST

ಶಿವಮೊಗ್ಗ: ಕಾಂಗ್ರೆಸ್ ಆಡಳಿತದಲ್ಲಿ ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ರೈಲಿಗೆ ಅಲ್ಪಸಂಖ್ಯಾತರ ಓಲೈಕೆ ದೃಷ್ಟಿಯಿಂದ ಟಿಪ್ಪು ಎಕ್ಸ್‌ಪ್ರೆಸ್ ಎಂದು ನಾಮಕರಣ ಮಾಡಲಾಗಿದೆ. ಈ ಹೆಸರನ್ನು ತಕ್ಷಣ ಬದಲಾಯಿಸಿ ಶ್ರೀ ಕೃಷ್ಣರಾಜ ಒಡೆಯರ್ ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ಮಾಡುವಂತೆ ಹಿಂದೂ ಜನ ಜಾಗೃತಿ ಸಮಿತಿ ಸದಸ್ಯರು ಪ್ರತಿಭಟಿಸಿದ್ರು.

ಹಿಂದೂ ಜನ ಜಾಗೃತಿ ಸಮಿತಿ ಸದಸ್ಯರಿಂದ ಪ್ರತಿಭಟನೆ

ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಹಿಂದೂ ಸಂಘಟನೆ ಮುಖಂಡರು ಹಾಗೂ ಕಾರ್ಯಕರ್ತರು, ಕೇಂದ್ರ ಸರ್ಕಾರ ಸಂವಿಧಾನದ 370ನೇ ವಿಧಿ ಮತ್ತು 35-ಎ ವಿಧಿಯನ್ನು ರದ್ದು ಪಡಿಸಿರುವುದನ್ನು ಸ್ವಾಗತಿಸಿದ್ರು. ಆದರೆ, 1990ರಲ್ಲಿ ಲಕ್ಷಾಂತರ ಕಾಶ್ಮೀರಿ ಹಿಂದೂ ಮೂಲನಿವಾಸಿಗಳನ್ನು ಭಯೋತ್ಪಾದಕರು ಕಣಿವೆ ರಾಜ್ಯದಿಂದ ಹೊರಹಾಕಿದ್ದರು. ಅವರೆಲ್ಲಾ ಈಗ ದೆಹಲಿ-ಹರಿಯಾಣದಲ್ಲಿ ನಿರಾಶ್ರಿತರಾಗಿ ಬದುಕುತ್ತಿದ್ದಾರೆ. ಕೇಂದ್ರ ಸರ್ಕಾರ ತಕ್ಷಣವೇ ಕಾಶ್ಮೀರದಲ್ಲಿ ಇವರೆಲ್ಲರಿಗೂ ಪುನರ್ವಸತಿ ಕಲ್ಪಿಸಬೇಕೆಂದು ಆಗ್ರಹಿಸಿದ್ರು.

ಉತ್ತರ ಪ್ರದೇಶ ಸೇರಿದಂತೆ ಹಲವೆಡೆ ಹಿಂದೂ ಸಮಾಜದ ವಿರುದ್ಧ ದ್ವೇಷ ಭಾವನೆ ಹರಡಲಾಗುತ್ತಿದೆ. ಇದನ್ನು ತಪ್ಪಿಸಬೇಕು. ಇಂತಹವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ರಾಷ್ಷ್ರಮಟ್ಟದಲ್ಲಿ ವಿಶೇಷ ತನಿಖಾದಳ ರಚಿಸಬೇಕು. ಚರ್ಚುಗಳಲ್ಲಿ ಹಗರಣಗಳು ಹೆಚ್ಚುತ್ತಿವೆ. ಲೈಂಗಿಕ ಶೋಷಣೆ ಬಹಿರಂಗವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಚರ್ಚುಗಳನ್ನು ಸರ್ಕಾರೀಕರಣಗೊಳಿಸಬೇಕು ಮತ್ತು ಹಿಂದೂ ದೇವಾಲಯಗಳ ಸರ್ಕಾರೀಕರಣವನ್ನು ಕೈಬಿಡಬೇಕು ಎಂದು ಸಂಘಟನೆ ಸದಸ್ಯರು ಪಟ್ಟುಹಿಡಿದ್ರು.

ಶಿವಮೊಗ್ಗ: ಕಾಂಗ್ರೆಸ್ ಆಡಳಿತದಲ್ಲಿ ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ರೈಲಿಗೆ ಅಲ್ಪಸಂಖ್ಯಾತರ ಓಲೈಕೆ ದೃಷ್ಟಿಯಿಂದ ಟಿಪ್ಪು ಎಕ್ಸ್‌ಪ್ರೆಸ್ ಎಂದು ನಾಮಕರಣ ಮಾಡಲಾಗಿದೆ. ಈ ಹೆಸರನ್ನು ತಕ್ಷಣ ಬದಲಾಯಿಸಿ ಶ್ರೀ ಕೃಷ್ಣರಾಜ ಒಡೆಯರ್ ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ಮಾಡುವಂತೆ ಹಿಂದೂ ಜನ ಜಾಗೃತಿ ಸಮಿತಿ ಸದಸ್ಯರು ಪ್ರತಿಭಟಿಸಿದ್ರು.

ಹಿಂದೂ ಜನ ಜಾಗೃತಿ ಸಮಿತಿ ಸದಸ್ಯರಿಂದ ಪ್ರತಿಭಟನೆ

ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಹಿಂದೂ ಸಂಘಟನೆ ಮುಖಂಡರು ಹಾಗೂ ಕಾರ್ಯಕರ್ತರು, ಕೇಂದ್ರ ಸರ್ಕಾರ ಸಂವಿಧಾನದ 370ನೇ ವಿಧಿ ಮತ್ತು 35-ಎ ವಿಧಿಯನ್ನು ರದ್ದು ಪಡಿಸಿರುವುದನ್ನು ಸ್ವಾಗತಿಸಿದ್ರು. ಆದರೆ, 1990ರಲ್ಲಿ ಲಕ್ಷಾಂತರ ಕಾಶ್ಮೀರಿ ಹಿಂದೂ ಮೂಲನಿವಾಸಿಗಳನ್ನು ಭಯೋತ್ಪಾದಕರು ಕಣಿವೆ ರಾಜ್ಯದಿಂದ ಹೊರಹಾಕಿದ್ದರು. ಅವರೆಲ್ಲಾ ಈಗ ದೆಹಲಿ-ಹರಿಯಾಣದಲ್ಲಿ ನಿರಾಶ್ರಿತರಾಗಿ ಬದುಕುತ್ತಿದ್ದಾರೆ. ಕೇಂದ್ರ ಸರ್ಕಾರ ತಕ್ಷಣವೇ ಕಾಶ್ಮೀರದಲ್ಲಿ ಇವರೆಲ್ಲರಿಗೂ ಪುನರ್ವಸತಿ ಕಲ್ಪಿಸಬೇಕೆಂದು ಆಗ್ರಹಿಸಿದ್ರು.

ಉತ್ತರ ಪ್ರದೇಶ ಸೇರಿದಂತೆ ಹಲವೆಡೆ ಹಿಂದೂ ಸಮಾಜದ ವಿರುದ್ಧ ದ್ವೇಷ ಭಾವನೆ ಹರಡಲಾಗುತ್ತಿದೆ. ಇದನ್ನು ತಪ್ಪಿಸಬೇಕು. ಇಂತಹವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ರಾಷ್ಷ್ರಮಟ್ಟದಲ್ಲಿ ವಿಶೇಷ ತನಿಖಾದಳ ರಚಿಸಬೇಕು. ಚರ್ಚುಗಳಲ್ಲಿ ಹಗರಣಗಳು ಹೆಚ್ಚುತ್ತಿವೆ. ಲೈಂಗಿಕ ಶೋಷಣೆ ಬಹಿರಂಗವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಚರ್ಚುಗಳನ್ನು ಸರ್ಕಾರೀಕರಣಗೊಳಿಸಬೇಕು ಮತ್ತು ಹಿಂದೂ ದೇವಾಲಯಗಳ ಸರ್ಕಾರೀಕರಣವನ್ನು ಕೈಬಿಡಬೇಕು ಎಂದು ಸಂಘಟನೆ ಸದಸ್ಯರು ಪಟ್ಟುಹಿಡಿದ್ರು.

Intro:
*ಸ್ಥಳ:- ಶಿವಮೊಗ್ಗ.*
*ಸ್ಲಗ್ :- ಟಿಪ್ಪು ಎಕ್ಸ್ ಪ್ರೆಸ್ ರೈಲಿಗೆ ಶ್ರೀ ಕೃಷ್ಣರಾಜ ಒಡೆಯರ್ ಎಂದು ನಾಮಕರಣ ಮಾಡಿ – ಹಿಂದೂ ಸಂಘಟನೆ ಸದಸ್ಯರ ಆಗ್ರಹ.*
*ಫಾರ್ಮೆಟ್ :- ಎವಿ.*

*ANCHOR..........*
*ಕಾಶ್ಮೀರಿಗಳಿಗೆ ಪುನರ್ವಸತಿ ಕಲ್ಪಿಸುವಂತೆ ಆಗ್ರಹಿಸಿ, ಹಿಂದು ಜನ ಜಾಗೃತಿ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಹಿಂದೂ ಸಂಘಟನೆ ಮುಖಂಡರು ಹಾಗೂ ಕಾರ್ಯಕರ್ತರು, ಕೇಂದ್ರ ಸರ್ಕಾರ ನಿಯಮ 370 ಮತ್ತು 35-ಎ ಅನ್ನು ರದ್ದು ಪಡಿಸಿರುವುದು ಸ್ವಾಗತಾರ್ಹ. ಆದರೆ, 1990ರಲ್ಲಿ ಲಕ್ಷಾಂತರ ಕಾಶ್ಮೀರಿ ಹಿಂದು ಮೂಲ ನಿವಾಸಿಗಳನ್ನು ಭಯೋತ್ಪಾದಕರು ಹೊರಹಾಕಿದ್ದರು. ಅವರೆಲ್ಲ ಈಗ ದೆಹಲಿ-ಹರಿಯಾಣದಲ್ಲಿ ನಿರಾಶ್ರಿತರಾಗಿ ಬದುಕುತ್ತಿದ್ದಾರೆ. ಕೇಂದ್ರ ಸರ್ಕಾರ ತಕ್ಷಣವೇ ಕಾಶ್ಮೀರದಲ್ಲಿ ಇವರೆಲ್ಲರಿಗೂ ಪುನರ್ವಸತಿ ಕಲ್ಪಿಸಬೇಕೆಂದು ಆಗ್ರಹಿಸಿದ್ದಾರೆ. ಇನ್ನು, ಕಾಂಗ್ರೆಸ್ ಆಡಳಿತದಲ್ಲಿ ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ರೈಲಿಗೆ ಓಲೈಕೆ ದೃಷ್ಟಿಯಿಂದ ಟಿಪ್ಪು ಎಕ್ಸ್ ಪ್ರೆಸ್ ಎಂದು ನಾಮಕರಣ ಮಾಡಲಾಗಿದ್ದು, ಈಗ ಅದನ್ನು ಬದಲಾಯಿಸಿ ಶ್ರೀ ಕೃಷ್ಣರಾಜ ಒಡೆಯರ್ ಎಕ್ಸ್ ಪ್ರೆಸ್ ಎಂದು ಮರುನಾಮಕರಣ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಅದೇರೀತಿ, ಉತ್ತರ ಪ್ರದೇಶ ಸೇರಿದಂತೆ ಹಲವೆಡೆ ಹಿಂದು ಸಮಾಜದ ವಿರುದ್ಧ ದ್ವೇಷದ ಭಾವನೆ ಹರಡಲಾಗುತ್ತಿದೆ. ಇದನ್ನು ತಪ್ಪಿಸಬೇಕು. ಇಂತಹವರ ಮೇಲೆ ಕ್ರಮ ಕೈಗೊಳ್ಳಲು ರಾಷ್ಷ್ರಮಟ್ಟದಲ್ಲಿ ವಿಶೇಷ ತನಿಖಾದಳ ರಚಿಸಬೇಕು. ಚರ್ಚ್ ಗಳಲ್ಲಿ ಹಗರಣಗಳು ಹೆಚ್ಚಾಗುತ್ತಿವೆ. ಲೈಂಗಿಕ ಶೋಷಣೆ ಬಹಿರಂಗವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಚರ್ಚ್ ಗಳನ್ನು ಸರ್ಕಾರೀಕರಣಗೊಳಿಸಬೇಕು ಮತ್ತು ಹಿಂದು ದೇವಾಲಯಗಳ ಸರ್ಕಾರೀಕರಣವನ್ನು ಕೈಬಿಡಬೇಕು ಎಂದು ಸಂಘಟನೆ ಸದಸ್ಯರು, ಆಗ್ರಹಿಸಿದ್ದಾರೆ.
ಭೀಮಾನಾಯ್ಕ ಎಸ್ ಶಿವಮೊಗ್ಗ
Body:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.