ETV Bharat / state

ಜಲಾಮೃತ ಯೋಜನೆಯಡಿ ಕೆರೆಗಳ ಹೂಳೆತ್ತುವ ಕಾಮಗಾರಿಗಳ ಪ್ರಸ್ತಾಪನೆ ಸಲ್ಲಿಸಿ: ಡಿಸಿ - undefined

ಜಲಾಮೃತ ಯೋಜನೆ ಅನುಷ್ಠಾನಕ್ಕಾಗಿ ರಚಿಸಲಾಗಿರುವ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಜಲಾಮೃತ ಯೋಜನೆಯಡಿ ಕೆರೆಗಳ ಹೂಳೆತ್ತುವುದು ಸೇರಿದಂತೆ ಕೆರೆಗಳ ಪುಜರುಜ್ಜೀವನ ಕಾಮಗಾರಿಗಳಿಗಾಗಿ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ್​ ಅಧಿಕಾರಿಗಳಿಗೆ ತಿಳಿಸಿದರು.

ಶಿವಮೊಗ್ಗ
author img

By

Published : Jul 15, 2019, 9:20 PM IST

ಶಿವಮೊಗ್ಗ: ಕಳೆದ ಬಜೆಟ್‍ನಲ್ಲಿ ರಾಜ್ಯ ಸರ್ಕಾರ ಘೋಷಿಸಿರುವ ಜಲಾಮೃತ ಯೋಜನೆಯಡಿ ಕೆರೆಗಳ ಹೂಳೆತ್ತುವುದು ಸೇರಿದಂತೆ ಕೆರೆಗಳ ಪುಜರುಜ್ಜೀವನ ಕಾಮಗಾರಿಗಳಿಗಾಗಿ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ್​ ಅಧಿಕಾರಿಗಳಿಗೆ ತಿಳಿಸಿದರು.

ಜಲಾಮೃತ ಯೋಜನೆ ಅನುಷ್ಠಾನಕ್ಕಾಗಿ ರಚಿಸಲಾಗಿರುವ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಯೋಜನೆ ಅನುಷ್ಠಾನ ಕುರಿತು ಸಮಾಲೋಚನೆ ನಡೆಸಿದ ಡಿಸಿ, ಹೂಳೆತ್ತುವುದು ಸೇರಿದಂತೆ ಕೆರೆಗಳ ಅಭಿವೃದ್ಧಿಗಾಗಿ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಸಣ್ಣ ನೀರಾವರಿ ಇಲಾಖೆ ಹಾಗೂ ಪಂಚಾಯತ್‍ ರಾಜ್ ಎಂಜಿನಿಯರಿಂಗ್ ಇಲಾಖೆಗೆ ಈ ಹಿಂದೆಯೇ ಸೂಚನೆ ನೀಡಿದ್ದರು. ಇದುವರೆಗೆ ಪ್ರಸ್ತಾವನೆ ಸಲ್ಲಿಸದಿರುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಕೆರೆಗಳ ಪುಜರುಜ್ಜೀವನ ಕಾಮಗಾರಿ ಕೈಗೊಳ್ಳಲು ಉತ್ತಮ ಅವಕಾಶ ಇದಾಗಿದ್ದು, ತಾಲೂಕು ಮಟ್ಟದಲ್ಲಿ ಯಂತ್ರೋಪಕರಣಗಳನ್ನು ಬಳಸಿಕೊಂಡು ಮಾರ್ಗಸೂಚಿ ಪ್ರಕಾರ ಕಾಮಗಾರಿ ಕೈಗೊಳ್ಳಲು ಇದರಲ್ಲಿ ಅವಕಾಶವಿದೆ. ಈ ಯೋಜನೆಯಡಿ ಅರಣ್ಯೀಕರಣ ಕೆಲಸ ಕಾರ್ಯಗಳನ್ನು ಸಹ ಕೈಗೊಳ್ಳಬಹುದಾಗಿದೆ ಎಂದರು.

ಜಲಮೂಲಗಳಾದ ಕೆರೆ ,ಕಟ್ಟೆ, ಕಲ್ಯಾಣಿ, ಗೋಕಟ್ಟೆಗಳ ಅಭಿವೃದ್ಧಿ, ಬಹುಕಮಾನು ಚೆಕ್ ​ಡ್ಯಾಂಗಳ ಪುಜರುಜ್ಜೀವನ, ನೀರು ಸಂಗ್ರಹಣೆಗಾಗಿ ಹೊಸ ಜಲ ಮೂಲಗಳ ನಿರ್ಮಾಣ, ಗ್ರಾಮ ಪಂಚಾಯತ್ ಮಟ್ಟದಲ್ಲಿ ಮನೆ, ಜಾನುವಾರು, ಕೃಷಿ ಚಟುವಟಿಕೆಗಳಿಗಾಗಿ ಬಳಸುವ ನೀರಿನ ಆಯವ್ಯಯ ಸಿದ್ಧಪಡಿಸುವುದು ಮತ್ತು ನೀರು ಲಭ್ಯತೆ ಮೇಲೆ ಬಳಕೆಯ ಮಿತಿಯನ್ನು ನಿರ್ಧರಿಸುವುದು, ಗ್ರಾಮಗಳಲ್ಲಿ ತೆರೆದ ಕೊಳವೆ ಬಾವಿಗಳ ಸುತ್ತ ಮಳೆ ನೀರು ರೀಚಾರ್ಜ್ ಘಟಕಗಳ ಸ್ಥಾಪನೆ ಇತ್ಯಾದಿಗಳ ಕುರಿತು ಕ್ರಮ ಕೈಗೊಳ್ಳಬೇಕಾಗಿದೆ. ಕೆರೆಗಳ ಅಭಿವೃದ್ಧಿ ಕಾಮಗಾರಿಗೆ ತಗಲುವ ಒಟ್ಟು ವೆಚ್ಚದ ಶೇ.10ರಷ್ಟು ವಂತಿಗೆಯನ್ನು ಸ್ಥಳೀಯರಿಂದ ಕೆಲಸ ಅಥವಾ ಬಾಡಿಗೆ ರೂಪದಲ್ಲಿ ಪರಿಕರಗಳನ್ನು ಒದಗಿಸಲು ಪ್ರೇರೇಪಿಸಬೇಕು ಎಂದರು.

ಈ ಯೋಜನೆಯಡಿ ಬುಟ್ಟಿಯಿಂದ ಬೆಟ್ಟಕ್ಕೆ ಆಶಯದಡಿ ಬೀಜಾಮೃತದಿಂದ ಸಂಸ್ಕರಿಸಿದ ಸ್ಥಳೀಯ ಜಾತಿಯ ಮರಗಳ ಬೀಜಗಳನ್ನು ಸರ್ಕಾರಿ ಸ್ಥಳಗಳಲ್ಲಿ/ಗುಡ್ಡಗಾಡಿನಲ್ಲಿ ಅಭಿಯಾನದ ಮಾದರಿಯಲ್ಲಿ ಬಿತ್ತುವ ಕಾರ್ಯ ನಡೆಸಬೇಕು ಎಂದರು.

ಪ್ರಸ್ತಾವನೆ ಸಲ್ಲಿಕೆ:
ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಜಲಾಮೃತ ಯೋಜನೆಯಡಿ ಒಟ್ಟು 37 ಕೆರೆಗಳನ್ನು ಗುರುತಿಸಲಾಗಿದ್ದು, 5.80 ಕೋಟಿ ರೂ. ಅಂದಾಜು ಮೊತ್ತದ ಪ್ರಸ್ತಾವನೆ ಸಲ್ಲಿಸಲಾಗಿದೆ. ಯೋಜನೆಯಡಿ 133 ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ 177 ಬಹು ಕಮಾನು ಮಾದರಿ ಚೆಕ್‍ ಡ್ಯಾಂ ನಿರ್ಮಾಣದ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ ಎಂದು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ಶಿವಮೊಗ್ಗ: ಕಳೆದ ಬಜೆಟ್‍ನಲ್ಲಿ ರಾಜ್ಯ ಸರ್ಕಾರ ಘೋಷಿಸಿರುವ ಜಲಾಮೃತ ಯೋಜನೆಯಡಿ ಕೆರೆಗಳ ಹೂಳೆತ್ತುವುದು ಸೇರಿದಂತೆ ಕೆರೆಗಳ ಪುಜರುಜ್ಜೀವನ ಕಾಮಗಾರಿಗಳಿಗಾಗಿ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ್​ ಅಧಿಕಾರಿಗಳಿಗೆ ತಿಳಿಸಿದರು.

ಜಲಾಮೃತ ಯೋಜನೆ ಅನುಷ್ಠಾನಕ್ಕಾಗಿ ರಚಿಸಲಾಗಿರುವ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಯೋಜನೆ ಅನುಷ್ಠಾನ ಕುರಿತು ಸಮಾಲೋಚನೆ ನಡೆಸಿದ ಡಿಸಿ, ಹೂಳೆತ್ತುವುದು ಸೇರಿದಂತೆ ಕೆರೆಗಳ ಅಭಿವೃದ್ಧಿಗಾಗಿ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಸಣ್ಣ ನೀರಾವರಿ ಇಲಾಖೆ ಹಾಗೂ ಪಂಚಾಯತ್‍ ರಾಜ್ ಎಂಜಿನಿಯರಿಂಗ್ ಇಲಾಖೆಗೆ ಈ ಹಿಂದೆಯೇ ಸೂಚನೆ ನೀಡಿದ್ದರು. ಇದುವರೆಗೆ ಪ್ರಸ್ತಾವನೆ ಸಲ್ಲಿಸದಿರುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಕೆರೆಗಳ ಪುಜರುಜ್ಜೀವನ ಕಾಮಗಾರಿ ಕೈಗೊಳ್ಳಲು ಉತ್ತಮ ಅವಕಾಶ ಇದಾಗಿದ್ದು, ತಾಲೂಕು ಮಟ್ಟದಲ್ಲಿ ಯಂತ್ರೋಪಕರಣಗಳನ್ನು ಬಳಸಿಕೊಂಡು ಮಾರ್ಗಸೂಚಿ ಪ್ರಕಾರ ಕಾಮಗಾರಿ ಕೈಗೊಳ್ಳಲು ಇದರಲ್ಲಿ ಅವಕಾಶವಿದೆ. ಈ ಯೋಜನೆಯಡಿ ಅರಣ್ಯೀಕರಣ ಕೆಲಸ ಕಾರ್ಯಗಳನ್ನು ಸಹ ಕೈಗೊಳ್ಳಬಹುದಾಗಿದೆ ಎಂದರು.

ಜಲಮೂಲಗಳಾದ ಕೆರೆ ,ಕಟ್ಟೆ, ಕಲ್ಯಾಣಿ, ಗೋಕಟ್ಟೆಗಳ ಅಭಿವೃದ್ಧಿ, ಬಹುಕಮಾನು ಚೆಕ್ ​ಡ್ಯಾಂಗಳ ಪುಜರುಜ್ಜೀವನ, ನೀರು ಸಂಗ್ರಹಣೆಗಾಗಿ ಹೊಸ ಜಲ ಮೂಲಗಳ ನಿರ್ಮಾಣ, ಗ್ರಾಮ ಪಂಚಾಯತ್ ಮಟ್ಟದಲ್ಲಿ ಮನೆ, ಜಾನುವಾರು, ಕೃಷಿ ಚಟುವಟಿಕೆಗಳಿಗಾಗಿ ಬಳಸುವ ನೀರಿನ ಆಯವ್ಯಯ ಸಿದ್ಧಪಡಿಸುವುದು ಮತ್ತು ನೀರು ಲಭ್ಯತೆ ಮೇಲೆ ಬಳಕೆಯ ಮಿತಿಯನ್ನು ನಿರ್ಧರಿಸುವುದು, ಗ್ರಾಮಗಳಲ್ಲಿ ತೆರೆದ ಕೊಳವೆ ಬಾವಿಗಳ ಸುತ್ತ ಮಳೆ ನೀರು ರೀಚಾರ್ಜ್ ಘಟಕಗಳ ಸ್ಥಾಪನೆ ಇತ್ಯಾದಿಗಳ ಕುರಿತು ಕ್ರಮ ಕೈಗೊಳ್ಳಬೇಕಾಗಿದೆ. ಕೆರೆಗಳ ಅಭಿವೃದ್ಧಿ ಕಾಮಗಾರಿಗೆ ತಗಲುವ ಒಟ್ಟು ವೆಚ್ಚದ ಶೇ.10ರಷ್ಟು ವಂತಿಗೆಯನ್ನು ಸ್ಥಳೀಯರಿಂದ ಕೆಲಸ ಅಥವಾ ಬಾಡಿಗೆ ರೂಪದಲ್ಲಿ ಪರಿಕರಗಳನ್ನು ಒದಗಿಸಲು ಪ್ರೇರೇಪಿಸಬೇಕು ಎಂದರು.

ಈ ಯೋಜನೆಯಡಿ ಬುಟ್ಟಿಯಿಂದ ಬೆಟ್ಟಕ್ಕೆ ಆಶಯದಡಿ ಬೀಜಾಮೃತದಿಂದ ಸಂಸ್ಕರಿಸಿದ ಸ್ಥಳೀಯ ಜಾತಿಯ ಮರಗಳ ಬೀಜಗಳನ್ನು ಸರ್ಕಾರಿ ಸ್ಥಳಗಳಲ್ಲಿ/ಗುಡ್ಡಗಾಡಿನಲ್ಲಿ ಅಭಿಯಾನದ ಮಾದರಿಯಲ್ಲಿ ಬಿತ್ತುವ ಕಾರ್ಯ ನಡೆಸಬೇಕು ಎಂದರು.

ಪ್ರಸ್ತಾವನೆ ಸಲ್ಲಿಕೆ:
ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಜಲಾಮೃತ ಯೋಜನೆಯಡಿ ಒಟ್ಟು 37 ಕೆರೆಗಳನ್ನು ಗುರುತಿಸಲಾಗಿದ್ದು, 5.80 ಕೋಟಿ ರೂ. ಅಂದಾಜು ಮೊತ್ತದ ಪ್ರಸ್ತಾವನೆ ಸಲ್ಲಿಸಲಾಗಿದೆ. ಯೋಜನೆಯಡಿ 133 ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ 177 ಬಹು ಕಮಾನು ಮಾದರಿ ಚೆಕ್‍ ಡ್ಯಾಂ ನಿರ್ಮಾಣದ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ ಎಂದು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

Intro:ಶಿವಮೊಗ್ಗ,
ಜಲಾಮೃತ ಯೋಜನೆ
ಕೆರೆಗಳ ಹೂಳೆತ್ತುವ ಕಾಮಗಾರಿಗಳ ಪ್ರಸ್ತಾಪನೆ ಸಲ್ಲಿಸಿ:
ಜಿಲ್ಲಾಧಿಕಾರಿ ಕೆ.ಎ.ದಯಾನಂದ

ಕಳೆದ ಬಜೆಟ್‍ನಲ್ಲಿ ರಾಜ್ಯ ಸರ್ಕಾರ ಘೋಷಿಸಿರುವ `ಜಲಾಮೃತ’ ಯೋಜನೆಯಡಿ ಕೆರೆಗಳ ಹೂಳೆತ್ತುವುದು ಸೇರಿದಂತೆ ಕೆರೆಗಳ ಪುಜರುಜ್ಜೀವನ ಕಾಮಗಾರಿಗಳಿಗಾಗಿ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ತಿಳಿಸಿದರು.

ಜಲಾಮೃತ ಯೋಜನೆ ಅನುಷ್ಟಾನಕ್ಕಾಗಿ ರಚಿಸಲಾಗಿರುವ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಯೋಜನೆ ಅನುಷ್ಟಾನ ಕುರಿತು ಸಮಾಲೋಚನೆ ನಡೆಸಿದರು.

ಹೂಳೆತ್ತುವುದು ಸೇರಿದಂತೆ ಕೆರೆಗಳ ಅಭಿವೃದ್ಧಿಗಾಗಿ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಸಣ್ಣ ನೀರಾವರಿ ಇಲಾಖೆ ಹಾಗೂ ಪಂಚಾಯತ್‍ರಾಜ್ ಇಂಜಿನಿಯರಿಂಗ್ ಇಲಾಖೆಗೆ ಈ ಹಿಂದೆಯೇ ಸೂಚನೆ ನೀಡಿದ್ದರೂ, ಇದುವರೆಗೆ ಪ್ರಸ್ತಾವನೆ ಸಲ್ಲಿಸದಿರುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಕೆರೆಗಳ ಪುಜರುಜ್ಜೀವನ ಕಾಮಗಾರಿ ಕೈಗೊಳ್ಳಲು ಉತ್ತಮ ಅವಕಾಶ ಇದಾಗಿದ್ದು, ತಾಲೂಕು ಮಟ್ಟದಲ್ಲಿ ಯಂತ್ರೋಪಕರಣಗಳನ್ನು ಬಳಸಿಕೊಂಡು ಮಾರ್ಗಸೂಚಿ ಪ್ರಕಾರ ಕಾಮಗಾರಿ ಕೈಗೊಳ್ಳಲು ಇದರಲ್ಲಿ ಅವಕಾಶವಿದೆ. ಈ ಯೋಜನೆಯಡಿ ಅರಣ್ಯೀಕರಣ ಕೆಲಸ ಕಾರ್ಯಗಳನ್ನು ಸಹ ಕೈಗೊಳ್ಳಬಹುದಾಗಿದೆ ಎಂದು ಅವರು ಹೇಳಿದರು.

ಜಲಮೂಲಗಳಾದ ಕೆರೆ ಕಟ್ಟೆ, ಕಲ್ಯಾಣಿ, ಗೋಕಟ್ಟೆಗಳ ಅಭಿವೃದ್ಧಿ, ಬಹುಕಮಾನು ಚೆಕ್‍ಡ್ಯಾಂಗಳ ಪುಜರುಜ್ಜೀವನ, ನೀರು ಸಂಗ್ರಹಣೆಗಾಗಿ ಹೊಸ ಜಲಮೂಲಗಳ ನಿರ್ಮಾಣ, ಗ್ರಾಮ ಪಂಚಾಯತ್ ಮಟ್ಟದಲ್ಲಿ ಮನೆ, ಜಾನುವಾರು, ಕೃಷಿ ಚಟುವಟಿಕೆಗಳಿಗಾಗಿ ಬಳಸುವ ನೀರಿನ ಆಯವ್ಯಯ ಸಿದ್ಧಪಡಿಸುವುದು ಮತ್ತು ನೀರು ಲಭ್ಯತೆ ಮೇಲೆ ಬಳಕೆಯ ಮಿತಿಯನ್ನು ನಿರ್ಧರಿಸುವುದು, ಗ್ರಾಮಗಳಲ್ಲಿ ತೆರೆದ ಕೊಳವೆ ಬಾವಿಗಳ ಸುತ್ತ ಮಳೆ ನೀರು ರಿಚಾರ್ಜ್ ಘಟಕಗಳ ಸ್ಥಾಪನೆ ಇತ್ಯಾದಿಗಳನ್ನು ಕೈಗೊಳ್ಳಬೇಕಾಗಿದೆ. ಕೆರೆಗಳ ಅಭಿವೃದ್ಧಿ ಕಾಮಗಾರಿಗೆ ತಗಲುವ ಒಟ್ಟು ವೆಚ್ಚದ ಶೇ.10ರಷ್ಟು ವಂತಿಗೆಯನ್ನು ಸ್ಥಳೀಯರಿಂದ ಹಣ, ಕೆಲಸ ಅಥವಾ ಬಾಡಿಗೆ ರೂಪದಲ್ಲಿ ಪರಿಕರಗಳನ್ನು ಒದಗಿಸಲು ಪ್ರೇರೇಪಿಸಬೇಕು ಎಂದು ಹೇಳಿದರು.

ಕೆರೆ ಹೂಳು ತೆಗೆಯುವ ಕಾಮಗಾರಿಯನ್ನು ಸಂಪೂರ್ಣವಾಗಿ ಜಲಾಮೃತ ಯೋಜನೆಯಡಿ ಭರಿಸಬೇಕು. ಇನ್ನುಳಿದಂತೆ ಏರಿ ಭದ್ರಪಡಿಸುವಿಕೆ, ತೂಬು, ಕೋಡಿ, ಕೋಡಿ ಕಾಲುವೆ ರಿಪೇರಿ ಇತ್ಯಾದಿ ಕಾಮಗಾರಿಗಳನ್ನು ನರೇಗಾ ಅಡಿ ಕೈಗೊಳ್ಳಬೇಕು. ಕೆರೆ ಹೂಳು ಸಾಗಣೆಯ ಲಿಫ್ಟ್ ಮತ್ತು ಲೀಡ್ ವೆಚ್ಚವನ್ನು ರೈತರೇ ಭರಿಸಬೇಕು. ಕರೆಗಳ ಅಂಗಳದಲ್ಲಿ ಸಣ್ಣ ಕೆರೆಗಳನ್ನು ನಿರ್ಮಿಸಿ ಬಹುಕಾಲ ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರು ಲಭ್ಯವಾಗುವಂತೆ ನೋಡಿಕೊಳ್ಳಬೇಕು.

ಈ ಯೋಜನೆಯಡಿ ಬುಟ್ಟಿಯಿಂದ ಬೆಟ್ಟಕ್ಕೆ ಆಶಯದಡಿ ಬೀಜಾಮೃತದಿಂದ ಸಂಸ್ಕರಿಸಿದ ಸ್ಥಳೀಯ ಜಾತಿಯ ಮರಗಳ ಬೀಜಗಳನ್ನು ಸರ್ಕಾರಿ ಸ್ಥಳಗಳಲ್ಲಿ/ಗುಡ್ಡಗಾಡಿನಲ್ಲಿ ಅಭಿಯಾನದ ಮಾದರಿಯಲ್ಲಿ ಬಿತ್ತುವ ಕಾರ್ಯ ನಡೆಸಬೇಕು. ಈಗಾಗಲೇ ಕಳೆದ ವಾರ ಕಲ್ಲಗಂಗೂರು ವಲಯದಲ್ಲಿ 10ಲಕ್ಷಕ್ಕೂ ಅಧಿಕ ಬೀಜಗಳನ್ನು ವಿದ್ಯಾರ್ಥಿಗಳ ಸಹಾಯದಿಂದ ಬಿತ್ತಲಾಗಿದೆ. ಇದೇ ರೀತಿಯ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಬೇಕಾಗಿದೆ ಎಂದರು.

ಪ್ರಸ್ತಾವನೆ ಸಲ್ಲಿಕೆ: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ ಜಲಾಮೃತ ಯೋಜನೆಯಡಿ ಒಟ್ಟು ಪುನರುಜ್ಜೀವನಕ್ಕಾಗಿ 37ಕೆರೆಗಳನ್ನು ಗುರುತಿಸಲಾಗಿದ್ದು, 5.80ಕೋಟಿ ರೂ. ಅಂದಾಜು ಮೊತ್ತದ ಪ್ರಸ್ತಾವನೆ ಸಲ್ಲಿಸಲಾಗಿದೆ. ಯೋಜನೆಯಡಿ 133 ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ 177 ಬಹುಕಮಾನು ಮಾದರಿ ಚೆಕ್‍ಡ್ಯಾಂ ನಿರ್ಮಾಣದ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ ಎಂದು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂಟೋನಿ ಮರಿಯಪ್ಪ, ಸಾಗರ ಉಪವಿಭಾಗಾಧಿಕಾರಿ ದರ್ಶನ್, ಯೋಜನಾ ನಿರ್ದೇಶಕ ವೀರಾಪುರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.