ETV Bharat / state

ಶಿವಮೊಗ್ಗದಲ್ಲಿ ಲಾಕ್​​ಡೌನ್​​​ ಜಾರಿ ಕುರಿತು ನಾಳೆ ಸಭೆ : ಸಚಿವ ಕೆ ಎಸ್ ಈಶ್ವರಪ್ಪ

author img

By

Published : Jul 14, 2020, 6:10 PM IST

ನಾಳೆ ಬೆಳಗ್ಗೆ ಮತ್ತೊಮ್ಮೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಸಂಸ್ಥೆಗಳು ಸೇರಿ ಶಾಸಕರು, ಸಂಸದರ ಸಭೆ ಕರೆಯಲಾಗಿದೆ ಎಂದರು. ಸಭೆಯ ಬಳಿಕ ಲಾಕ್​​ಡೌನ್​​​ ಮಾಡುವ ಕುರಿತು ನಿರ್ಧಾರ ಮಾಡಲಾಗುವುದು..

Tomorrow's meeting on lockdown in Shimoga
ಸಚಿವ ಕೆ.ಎಸ್. ಈಶ್ವರಪ್ಪ ಸುದ್ದಿಗೋಷ್ಠಿ

ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಲಾಕ್​​ಡೌನ್​​​ ಜಾರಿಗೊಳಿಸುವ ಕುರಿತು ನಾಳೆ ಸಭೆ ಕರೆಯಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೊನಾ ತಡೆಗೆ ಕ್ರಮ ಕೈಗೊಂಡಿದ್ದು, ಜನರು ಸಹ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಸಹಕಾರ ನೀಡಿದ್ದಾರೆ ಎಂದರು. ಪ್ರಸ್ತುತ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಧ್ಯಾಹ್ನ 3 ಗಂಟೆಯ ನಂತರ ಬಂದ್ ಮಾಡಲಾಗುತ್ತಿದೆ.

ನಾಳೆ ಬೆಳಗ್ಗೆ ಮತ್ತೊಮ್ಮೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಸಂಸ್ಥೆಗಳು ಸೇರಿ ಶಾಸಕರು, ಸಂಸದರ ಸಭೆ ಕರೆಯಲಾಗಿದೆ ಎಂದರು. ಸಭೆಯ ಬಳಿಕ ಲಾಕ್​​ಡೌನ್​​​ ಮಾಡುವ ಕುರಿತು ನಿರ್ಧಾರ ಮಾಡಲಾಗುವುದು ಎಂದರು.

ಲಾಕ್‌ಡೌನ್‌ ಜಾರಿ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಪಷ್ಟೀಕರಣ..

ಇನ್ನು, ನನ್ನ ಕುಟುಂಬದ ಸದಸ್ಯನೊಬ್ಬನಿಗೆ ನಿನ್ನೆ ಕೊರೊನಾ ಪಾಸಿಟಿವ್ ಬಂದಿದ್ದು, ಆ ಹಿನ್ನೆಲೆ ಇಂದಿನ ಸಭೆ ಹಾಗೂ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದೆ. ನನ್ನ ಕುಟುಂಬಸ್ಥರು, ಅಡುಗೆಯವರು, ಚಾಲಕರು ಸೇರಿ 21 ಜನರ ಕೊರೊನಾ ಪರೀಕ್ಷೆ ಮಾಡಿಸಿದ್ದು, 21 ಜನರ ಗಂಟಲು ದ್ರವ ಮಾದರಿಯ ವರದಿಯು ನೆಗೆಟಿವ್ ಬಂದಿದೆ ಎಂದರು.

ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಲಾಕ್​​ಡೌನ್​​​ ಜಾರಿಗೊಳಿಸುವ ಕುರಿತು ನಾಳೆ ಸಭೆ ಕರೆಯಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೊನಾ ತಡೆಗೆ ಕ್ರಮ ಕೈಗೊಂಡಿದ್ದು, ಜನರು ಸಹ ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಸಹಕಾರ ನೀಡಿದ್ದಾರೆ ಎಂದರು. ಪ್ರಸ್ತುತ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಧ್ಯಾಹ್ನ 3 ಗಂಟೆಯ ನಂತರ ಬಂದ್ ಮಾಡಲಾಗುತ್ತಿದೆ.

ನಾಳೆ ಬೆಳಗ್ಗೆ ಮತ್ತೊಮ್ಮೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಸಂಸ್ಥೆಗಳು ಸೇರಿ ಶಾಸಕರು, ಸಂಸದರ ಸಭೆ ಕರೆಯಲಾಗಿದೆ ಎಂದರು. ಸಭೆಯ ಬಳಿಕ ಲಾಕ್​​ಡೌನ್​​​ ಮಾಡುವ ಕುರಿತು ನಿರ್ಧಾರ ಮಾಡಲಾಗುವುದು ಎಂದರು.

ಲಾಕ್‌ಡೌನ್‌ ಜಾರಿ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ಪಷ್ಟೀಕರಣ..

ಇನ್ನು, ನನ್ನ ಕುಟುಂಬದ ಸದಸ್ಯನೊಬ್ಬನಿಗೆ ನಿನ್ನೆ ಕೊರೊನಾ ಪಾಸಿಟಿವ್ ಬಂದಿದ್ದು, ಆ ಹಿನ್ನೆಲೆ ಇಂದಿನ ಸಭೆ ಹಾಗೂ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದೆ. ನನ್ನ ಕುಟುಂಬಸ್ಥರು, ಅಡುಗೆಯವರು, ಚಾಲಕರು ಸೇರಿ 21 ಜನರ ಕೊರೊನಾ ಪರೀಕ್ಷೆ ಮಾಡಿಸಿದ್ದು, 21 ಜನರ ಗಂಟಲು ದ್ರವ ಮಾದರಿಯ ವರದಿಯು ನೆಗೆಟಿವ್ ಬಂದಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.