ಶಿವಮೊಗ್ಗ: ಪ್ರವಾಸ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಬಸ್ ಪಲ್ಟಿಯಾಗಿರುವ ಘಟನೆ ಸಾಗರ ತಾಲೂಕು ಹುರಳಿ ಗ್ರಾಮದ ಬಳಿ ನಡೆದಿದೆ.
ಕದರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹುರುಳಿ ಗ್ರಾಮದ ನಿವಾಸಿಗಳು ತಮ್ಮ ಸಂಬಂಧಿಕರ ಜೊತೆ ಧರ್ಮಸ್ಥಳ, ಮಂಗಳೂರು ಸೇರಿದಂತೆ ಇತರೆ ಕಡೆ ಪ್ರವಾಸ ಮುಗಿಸಿ ಗ್ರಾಮಕ್ಕೆ ವಾಪಸ್ ಆಗುವ ವೇಳೆ ಹುರುಳಿ ಗ್ರಾಮದ ಬಳಿಯೇ ಬಸ್ ಪಲ್ಟಿಯಾಗಿದೆ.
ಬಸ್ನಲ್ಲಿ 30 ಕ್ಕೂ ಅಧಿಕ ಜನ ಪ್ರಯಾಣ ಮಾಡಿದ್ದರು. ಬಸ್ ಪಲ್ಟಿಯಾಗುತ್ತಿದ್ದಂತಯೇ ಗ್ರಾಮಸ್ಥರು ಬಂದು ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಈ ವೇಳೆ ಬಸ್ ನಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಹೊಸನಗರ ಹಾಗೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.