ETV Bharat / state

ಡಿಕ್ಕಿ ಹೊಡೆದು ಪರಾರಿಯಾದ ವಾಹನ: ಚಿರತೆಗೆ ಗಂಭೀರ ಗಾಯ

author img

By

Published : Jun 1, 2020, 11:08 PM IST

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಸುಣ್ಣದಕೊಪ್ಪದ ಬಳಿಯ ನೀಲಗಿರಿ ಪ್ಲಾಂಟೇಷನ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ಚಿರತೆ ರಸ್ತೆ ಪಕ್ಕದ ತೋಪಿನಲ್ಲಿ ಒದ್ದಾಡಿದೆ.

Breaking News

ಶಿವಮೊಗ್ಗ: ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಗಂಭೀರವಾಗಿ ಗಾಯಗೊಂಡ ಘಟನೆ ಶಿಕಾರಿಪುರ ತಾಲೂಕಿನ ಸುಣ್ಣದಕೊಪ್ಪದ ಬಳಿಯ ನೀಲಗಿರಿ ಪ್ಲಾಂಟೇಷನ್ ಬಳಿ ನಡೆದಿದೆ.

ವೇಗದಿಂದ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡ ಚಿರತೆ, ಪಕ್ಕದ ತೋಪಿನಲ್ಲಿ ನೋವಿನಿಂದ ಒದ್ದಾಡಿದೆ. ಇದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಶಿರಾಳಕೊಪ್ಪ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಚಿಕಿತ್ಸೆಗೆ ತೆಗೆದುಕೊಂಡು ಹೋಗಿದ್ದಾರೆ.

ಶಿವಮೊಗ್ಗ: ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಗಂಭೀರವಾಗಿ ಗಾಯಗೊಂಡ ಘಟನೆ ಶಿಕಾರಿಪುರ ತಾಲೂಕಿನ ಸುಣ್ಣದಕೊಪ್ಪದ ಬಳಿಯ ನೀಲಗಿರಿ ಪ್ಲಾಂಟೇಷನ್ ಬಳಿ ನಡೆದಿದೆ.

ವೇಗದಿಂದ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡ ಚಿರತೆ, ಪಕ್ಕದ ತೋಪಿನಲ್ಲಿ ನೋವಿನಿಂದ ಒದ್ದಾಡಿದೆ. ಇದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಶಿರಾಳಕೊಪ್ಪ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಚಿಕಿತ್ಸೆಗೆ ತೆಗೆದುಕೊಂಡು ಹೋಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.