ETV Bharat / state

ಆದಿ ಶಂಕರಾಚಾರ್ಯರ ಪ್ರತಿಮೆ ಸ್ಥಳದಲ್ಲಿ ಎಸ್​​ಡಿಪಿಐ ಬಾವುಟ ಹಾಕಿದವರ ವಿರುದ್ಧ ಕ್ರಮಕ್ಕೆ ಆಗ್ರಹ

author img

By

Published : Aug 14, 2020, 4:16 PM IST

ಶೃಂಗೇರಿಯ ಆದಿ ಶಂಕರಾಚಾರ್ಯರ ಪ್ರತಿಮೆ ಸ್ಥಳದಲ್ಲಿ ಎಸ್​​ಡಿಪಿಐ ಬಾವುಟ ಹಾಕಿದ ಕಿಡಿಗೇಡಿಗಳ ವಿರುದ್ದ ಈ ಕೂಡಲೇ ಕ್ರಮ ಕೈಗೊಂದು ಅವರನ್ನು ಬಂಧಿಸಬೇಕು ಎಂದು ವಿಪ್ರ ಯುವ ಪರಿಷತ್ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.

Vipra Yuva Parishath
ವಿಪ್ರ ಯುವ ಪರಿಷತ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಶಿವಮೊಗ್ಗ: ಶೃಂಗೇರಿಯ ಆದಿ ಶಂಕರಾಚಾರ್ಯರ ಪ್ರತಿಮೆಯ ಸ್ಥಳದಲ್ಲಿ ಎಸ್​​ಡಿಪಿಐ ಬಾವುಟ ಹಾಕಿದವರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿಪ್ರ ಯುವ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ವಿಪ್ರ ಯುವ ಪರಿಷತ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಶ್ರೀಕ್ಷೇತ್ರ ಶೃಂಗೇರಿಯ ಶಂಕರಾಚಾರ್ಯರ ವೃತ್ತದಲ್ಲಿರುವ ಆದಿ ಶಂಕರಾಚಾರ್ಯರ ಪ್ರತಿಮೆ ಸ್ಥಳದಲ್ಲಿ ಎಸ್​​ಡಿಪಿಐ ಸಂಘಟನೆಯ ಬಾವುಟ ಹಾಕುವ ಮೂಲಕ ಸಮಾಜದ ಶಾಂತಿಯನ್ನು ಹಾಳು ಮಾಡಲು ಕೆಲವು ಕಿಡಿಗೇಡಿಗಳು ಯತ್ನಿಸಿದ್ದಾರೆ. ಶಾಂತಿಯಿಂದ ಕೂಡಿರುವ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ದುರುದ್ದೇಶ ಇದಾಗಿದ್ದು, ಇಂಥಹ ಕೃತ್ಯ ಎಸಗಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ವಿಪ್ರ ಯುವ ಪರಿಷತ್​ ಆಗ್ರಹಿಸಿತು.

ಪವಿತ್ರ ಕ್ಷೇತ್ರವಾದ ಶೃಂಗೇರಿಯಲ್ಲಿ ಇಂತಹ ಘಟನೆ ನಡೆದಿರುವುದು ನಿಜಕ್ಕೂ ಬೇಸರದ ಸಂಗತಿಯಾಗಿದ್ದು, ಆದಿ ಶಂಕರಾಚಾರ್ಯರ ಪ್ರತಿಮೆ ಸ್ಥಳದಲ್ಲಿ ಎಸ್​​ಡಿಪಿಐ ಬಾವುಟ ಹಾಕಿದವರನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಶಿವಮೊಗ್ಗ: ಶೃಂಗೇರಿಯ ಆದಿ ಶಂಕರಾಚಾರ್ಯರ ಪ್ರತಿಮೆಯ ಸ್ಥಳದಲ್ಲಿ ಎಸ್​​ಡಿಪಿಐ ಬಾವುಟ ಹಾಕಿದವರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿಪ್ರ ಯುವ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ವಿಪ್ರ ಯುವ ಪರಿಷತ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಶ್ರೀಕ್ಷೇತ್ರ ಶೃಂಗೇರಿಯ ಶಂಕರಾಚಾರ್ಯರ ವೃತ್ತದಲ್ಲಿರುವ ಆದಿ ಶಂಕರಾಚಾರ್ಯರ ಪ್ರತಿಮೆ ಸ್ಥಳದಲ್ಲಿ ಎಸ್​​ಡಿಪಿಐ ಸಂಘಟನೆಯ ಬಾವುಟ ಹಾಕುವ ಮೂಲಕ ಸಮಾಜದ ಶಾಂತಿಯನ್ನು ಹಾಳು ಮಾಡಲು ಕೆಲವು ಕಿಡಿಗೇಡಿಗಳು ಯತ್ನಿಸಿದ್ದಾರೆ. ಶಾಂತಿಯಿಂದ ಕೂಡಿರುವ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ದುರುದ್ದೇಶ ಇದಾಗಿದ್ದು, ಇಂಥಹ ಕೃತ್ಯ ಎಸಗಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ವಿಪ್ರ ಯುವ ಪರಿಷತ್​ ಆಗ್ರಹಿಸಿತು.

ಪವಿತ್ರ ಕ್ಷೇತ್ರವಾದ ಶೃಂಗೇರಿಯಲ್ಲಿ ಇಂತಹ ಘಟನೆ ನಡೆದಿರುವುದು ನಿಜಕ್ಕೂ ಬೇಸರದ ಸಂಗತಿಯಾಗಿದ್ದು, ಆದಿ ಶಂಕರಾಚಾರ್ಯರ ಪ್ರತಿಮೆ ಸ್ಥಳದಲ್ಲಿ ಎಸ್​​ಡಿಪಿಐ ಬಾವುಟ ಹಾಕಿದವರನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.