ETV Bharat / state

ಶಿವಮೊಗ್ಗ: ಹಸುಗೆ ನೀರು ಕುಡಿಸಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

author img

By

Published : Sep 25, 2022, 8:20 PM IST

ಹಸುವಿಗೆ ನೀರು ಕುಡಿಸಲು ಹೋಗಿದ್ದ ಯುವಕ ನೀರಲ್ಲಿ ಮುಳುಗಿ ಸಾವು.

ಯುವಕ ನೀರಿನಲ್ಲಿ ಮುಳುಗಿ ಸಾವು
ಯುವಕ ನೀರಿನಲ್ಲಿ ಮುಳುಗಿ ಸಾವು

ಶಿವಮೊಗ್ಗ: ಹಸುವಿಗೆ ನೀರು ಕುಡಿಸಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ತಾಲೂಕಿನ ಬೀರನಕೆರೆ ಗ್ರಾಮದಲ್ಲಿ‌ ನಡೆದಿದೆ. ಬೀರನಕೆರೆ ಗ್ರಾಮದ ರವಿ ನಾಯ್ಕ(18) ಮೃತ ಯುವಕ.

ರವಿನಾಯ್ಕ ಭಾನುವಾರ ಮಧ್ಯಾಹ್ನ ಹಸುವಿಗೆ ನೀರು ಕುಡಿಸಲು ಗ್ರಾಮದ ಎಂಪಿಎಂ ಕಟ್ಟೆಯ ಬಳಿ‌ ಹೋದಾಗ, ಹಸು ನೀರಿಗೆ ಇಳಿದಿದೆ. ಈ ವೇಳೆ ಹಸು‌ ನೀರಿನ ಆಳಕ್ಕೆ ಹೋದಾಗ ಹಸುವನ್ನು ಕರೆದುಕೊಂಡು ಬರಲು ಹೋಗಿ ಆತ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಬೆಳ್ತಂಗಡಿ: ನೀರಿನಲ್ಲಿ ಮುಳುಗಿ ಯುವಕ ಸಾವು

ಹಸು ಮನೆಗೆ ಬಂದಿದೆ. ಆದರೆ ರವಿ ಮನೆಗೆ ಬಾರದೆ ಹೋದಾಗ ಹುಡುಕಿಕೊಂಡು ಹೋದಾಗ ರವಿ‌ ನೀರಿನಲ್ಲಿ‌ ತೇಲುತ್ತಿರುವುದು ಕಂಡು ಬಂದಿದೆ. ಈ ಕುರಿತು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ: ಮನೆ ಮುಂದಿನ ನೀರಿನ ತೊಟ್ಟಿಗೆ ಬಿದ್ದು 11 ತಿಂಗಳ ಮಗು ಸಾವು

ಶಿವಮೊಗ್ಗ: ಹಸುವಿಗೆ ನೀರು ಕುಡಿಸಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ತಾಲೂಕಿನ ಬೀರನಕೆರೆ ಗ್ರಾಮದಲ್ಲಿ‌ ನಡೆದಿದೆ. ಬೀರನಕೆರೆ ಗ್ರಾಮದ ರವಿ ನಾಯ್ಕ(18) ಮೃತ ಯುವಕ.

ರವಿನಾಯ್ಕ ಭಾನುವಾರ ಮಧ್ಯಾಹ್ನ ಹಸುವಿಗೆ ನೀರು ಕುಡಿಸಲು ಗ್ರಾಮದ ಎಂಪಿಎಂ ಕಟ್ಟೆಯ ಬಳಿ‌ ಹೋದಾಗ, ಹಸು ನೀರಿಗೆ ಇಳಿದಿದೆ. ಈ ವೇಳೆ ಹಸು‌ ನೀರಿನ ಆಳಕ್ಕೆ ಹೋದಾಗ ಹಸುವನ್ನು ಕರೆದುಕೊಂಡು ಬರಲು ಹೋಗಿ ಆತ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಬೆಳ್ತಂಗಡಿ: ನೀರಿನಲ್ಲಿ ಮುಳುಗಿ ಯುವಕ ಸಾವು

ಹಸು ಮನೆಗೆ ಬಂದಿದೆ. ಆದರೆ ರವಿ ಮನೆಗೆ ಬಾರದೆ ಹೋದಾಗ ಹುಡುಕಿಕೊಂಡು ಹೋದಾಗ ರವಿ‌ ನೀರಿನಲ್ಲಿ‌ ತೇಲುತ್ತಿರುವುದು ಕಂಡು ಬಂದಿದೆ. ಈ ಕುರಿತು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ: ಮನೆ ಮುಂದಿನ ನೀರಿನ ತೊಟ್ಟಿಗೆ ಬಿದ್ದು 11 ತಿಂಗಳ ಮಗು ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.