ಶಿವಮೊಗ್ಗ: ನಾಡಹಬ್ಬ ದಸರಾ ಪ್ರಯುಕ್ತ ನಗರದ ಫ್ರೀಡಂಪಾರ್ಕ್ನಲ್ಲಿ ಆಯೋಜಿಸಿದ್ದ ಯುವ ದಸರಾ ಕಾರ್ಯಕ್ರಮವನ್ನು ನಟ ಪ್ರಮೋದ್ ಶೆಟ್ಟಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ 'ಕಿರಿಕ್ ಪಾರ್ಟಿ' ಹಾಗೂ 'ಸರ್ಕಾರಿ ಪ್ರಾಥಮಿಕ ಶಾಲೆ ಕಾಸರಗೋಡು' ಚಿತ್ರದ ಡೈಲಾಗ್ಗಳನ್ನು ಹೇಳಿದರು. ಮುಖ್ಯವಾಗಿ, 'ಹೇ ಭುಜಂಗ ಬಾರೋ ಇಲ್ಲಿ, ಉಗ್ರ ಹೋರಾಟ ಮಾಡೋದಿದೆ' ಎಂಬ ಜನಪ್ರಿಯ ಸಂಭಾಷಣೆ ಪ್ರೇಕ್ಷಕರನ್ನು ಮುದಗೊಳಿಸಿತು.
ಮಹಾನಗರ ಪಾಲಿಕೆ ವತಿಯಿಂದ ಪ್ರಮೋದ್ ಶೆಟ್ಟಿ ಅವರನ್ನು ಗೌರವಿಸಲಾಯಿತು. ಈ ವೇಳೆ ಸಂಸದ ಬಿ.ವೈ ರಾಘವೇಂದ್ರ, ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ಸೇರಿದಂತೆ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.