ಬೆಳಗಾವಿ: ಪೀರನವಾಡಿಯಲ್ಲಿ ರಾಯಣ್ಣ ಪುತ್ಥಳಿ ಮರುಸ್ಥಾಪನೆಗೆ ಸಂಬಂಧಿಸಿದಂತೆ ವಿವಾದ ಉಂಟಾದ ಹಿನ್ನೆಲೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಡಾ. ಅಮರಕುಮಾರ್ ಪಾಂಡೆ ಭೇಟಿ ನೀಡಲಿದ್ದಾರೆ.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಡಾ. ಪಾಂಡೆ ಪೀರನವಾಡಿಗೆ ಭೇಟಿ ನೀಡಿ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಸ್ಥಳೀಯರು, ಕನ್ನಡ ಹಾಗೂ ಮರಾಠಿ ಭಾಷಿಕರ ಜೊತೆಗೆ ಸಭೆ ನಡೆಸಲಿದ್ದಾರೆ.
ಬೆಂಗಳೂರಿನಿಂದ 2.30ಕ್ಕೆ ಸಾಂಬ್ರಾಕ್ಕೆ ಆಗಮಿಸಲಿದ್ದು, ರಸ್ತೆ ಮಾರ್ಗವಾಗಿ ಪೀರನವಾಡಿಗೆ ಬರಲಿದ್ದಾರೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಸೀಮಾ ಲಾಟ್ಕರ್ ಈಟಿವಿ ಭಾರತಕ್ಕೆ ಖಚಿತಪಡಿಸಿದ್ದಾರೆ.