ETV Bharat / state

ಬೆಂಗಳೂರು ಗಲಭೆ ಪ್ರಕರಣ: ಆರೋಪ-ಪ್ರತ್ಯಾರೋಪಗಳ ಪರಾಮರ್ಶೆ ನಡೆಸಲಿರುವ ಮ್ಯಾಜಿಸ್ಟ್ರೇಟ್

author img

By

Published : Sep 2, 2020, 12:45 PM IST

ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿನಿಂದ ಮ್ಯಾಜಿಸ್ಟ್ರೇಟ್ ವಿಚಾರಣೆಯ ಮೊದಲ ಹಂತ ಆರಂಭವಾಗಲಿದ್ದು, ಪ್ರಕರಣ ಸಂಬಂಧ ಮ್ಯಾಜಿಸ್ಟ್ರೇಟ್​​ಗೆ ಸಾರ್ವಜನಿಕ ಅಹವಾಲು ಸಲ್ಲಿಸಲು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅವಕಾಶ ನೀಡಲಾಗಿದೆ.

Police station
Police station

ಬೆಂಗಳೂರು: ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿನಿಂದ ಅಧಿಕೃತವಾಗಿ ಮ್ಯಾಜಿಸ್ಟ್ರೇಟ್ ವಿಚಾರಣೆ ಆರಂಭವಾಗಲಿದೆ.

ಇಂದಿನಿಂದ ಮ್ಯಾಜಿಸ್ಟ್ರೇಟ್ ವಿಚಾರಣೆಯ ಮೊದಲ ಹಂತ ಆರಂಭವಾಗಲಿದ್ದು, ಪ್ರಕರಣ ಸಂಬಂಧ ಮ್ಯಾಜಿಸ್ಟ್ರೇಟ್​​ಗೆ ಸಾರ್ವಜನಿಕ ಅಹವಾಲು ಸಲ್ಲಿಸಲು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅವಕಾಶ ನೀಡಲಾಗಿದೆ. ಸಾರ್ವನಿಕರ ಅಹವಾಲು ಸ್ವೀಕರಿಸಿ, ಆರೋಪ-ಪ್ರತ್ಯಾರೋಪಗಳ ಪರಾಮರ್ಶೆ ನಡೆಯಲಿದೆ.

ಅರ್ಜಿದಾರರ ಅರ್ಜಿಯಲ್ಲಿರುವ ಅಂಶಗಳ ಸತ್ಯಾಸತ್ಯತೆ ಪರಿಶೀಲನೆ ಮಾಡಿ, ವಿಚಾರಣೆ‌ ನಡೆಸಿ ಸೂಕ್ತ ದಾಖಲೆಗಳು, ಸಾಕ್ಷ್ಯಧಾರಗಳ ಪರಿಶೀಲನೆ
ಬಳಿಕ ಸಂಬಂಧಪಟ್ಟವರಿಗೆ ಸಮನ್ಸ್ ಜಾರಿ ಮಾಡಲಿದ್ದಾರೆ.

ಈ ತನಿಖೆ ಬೆಂಗಳೂರು‌ ನಗರ ಡಿಸಿ ಜಿ.ಎನ್.ಶಿವಮೂರ್ತಿ ನೇತೃತ್ವದಲ್ಲಿ ನಡೆಯಲಿದೆ‌. ಇವರ ಜೊತೆ ಜಿಲ್ಲಾಧಿಕಾರಿಗಳು, ಕಾನೂನು ಸಲಹೆಗಾರರು, ನಿವೃತ್ತ ಜಿಲ್ಲಾ ನ್ಯಾಯಾಧೀಶ ಜಿ.ಎಸ್.ರೇವಣಕರ್, ತಹಶೀಲ್ದಾರ್ ಹಾಗೂ ಓರ್ವ ಎಸಿ ಸೇರಿದಂತೆ ಇತರರು ಮ್ಯಾಜಿಸ್ಟ್ರೇಟ್ ಸಮಿತಿಯಲ್ಲಿ ಇರಲಿದ್ದಾರೆ.

ಪ್ರಕರಣದ ಹಿನ್ನೆಲೆ:
ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಆಗಸ್ಟ್ 11ರ ರಾತ್ರಿ ಗಲಭೆ ನಡೆದಿದ್ದು, ಕಿಡಿಗೇಡಿಗಳು ಅಪಾರ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡಿದ್ದರು. ಪರಿಸ್ಥಿತಿ ನಿಯಂತ್ರಣಕ್ಕಾಗಿ ಪೊಲೀಸರು ಗೋಲಿಬಾರ್ ಮಾಡಿದ್ದರು.

ಗೋಲಿಬಾರ್ ವೇಳೆ ಗುಂಡು ತಗುಲಿ ನಾಲ್ವರು ಮೃತರಾಗಿದ್ದರು. ಈ ಕುರಿತು ಇದೀಗ ಮ್ಯಾಜಿಸ್ಟ್ರೇಟ್ ವಿಚಾರಣೆಗೆ ಸರ್ಕಾರ ಆದೇಶಿಸಿದ್ದು, ಸದ್ಯ ಮ್ಯಾಜಿಸ್ಟ್ರೇಟ್​​ಗೆ ಗೋಲಿಬಾರ್​ನಲ್ಲಿ ಮೃತಪಟ್ಟವರ ಪೋಷಕರು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಹಲವು ಆಯಾಮಗಳಲ್ಲಿ ವಿಚಾರಣೆ ನಡೆಸಲಿರುವ ಮ್ಯಾಜಿಸ್ಟ್ರೇಟ್, ಮೂರು ತಿಂಗಳ ಅವಧಿಯಲ್ಲಿ ಸುದೀರ್ಘ ವಿಚಾರಣೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.

ಬೆಂಗಳೂರು: ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿನಿಂದ ಅಧಿಕೃತವಾಗಿ ಮ್ಯಾಜಿಸ್ಟ್ರೇಟ್ ವಿಚಾರಣೆ ಆರಂಭವಾಗಲಿದೆ.

ಇಂದಿನಿಂದ ಮ್ಯಾಜಿಸ್ಟ್ರೇಟ್ ವಿಚಾರಣೆಯ ಮೊದಲ ಹಂತ ಆರಂಭವಾಗಲಿದ್ದು, ಪ್ರಕರಣ ಸಂಬಂಧ ಮ್ಯಾಜಿಸ್ಟ್ರೇಟ್​​ಗೆ ಸಾರ್ವಜನಿಕ ಅಹವಾಲು ಸಲ್ಲಿಸಲು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅವಕಾಶ ನೀಡಲಾಗಿದೆ. ಸಾರ್ವನಿಕರ ಅಹವಾಲು ಸ್ವೀಕರಿಸಿ, ಆರೋಪ-ಪ್ರತ್ಯಾರೋಪಗಳ ಪರಾಮರ್ಶೆ ನಡೆಯಲಿದೆ.

ಅರ್ಜಿದಾರರ ಅರ್ಜಿಯಲ್ಲಿರುವ ಅಂಶಗಳ ಸತ್ಯಾಸತ್ಯತೆ ಪರಿಶೀಲನೆ ಮಾಡಿ, ವಿಚಾರಣೆ‌ ನಡೆಸಿ ಸೂಕ್ತ ದಾಖಲೆಗಳು, ಸಾಕ್ಷ್ಯಧಾರಗಳ ಪರಿಶೀಲನೆ
ಬಳಿಕ ಸಂಬಂಧಪಟ್ಟವರಿಗೆ ಸಮನ್ಸ್ ಜಾರಿ ಮಾಡಲಿದ್ದಾರೆ.

ಈ ತನಿಖೆ ಬೆಂಗಳೂರು‌ ನಗರ ಡಿಸಿ ಜಿ.ಎನ್.ಶಿವಮೂರ್ತಿ ನೇತೃತ್ವದಲ್ಲಿ ನಡೆಯಲಿದೆ‌. ಇವರ ಜೊತೆ ಜಿಲ್ಲಾಧಿಕಾರಿಗಳು, ಕಾನೂನು ಸಲಹೆಗಾರರು, ನಿವೃತ್ತ ಜಿಲ್ಲಾ ನ್ಯಾಯಾಧೀಶ ಜಿ.ಎಸ್.ರೇವಣಕರ್, ತಹಶೀಲ್ದಾರ್ ಹಾಗೂ ಓರ್ವ ಎಸಿ ಸೇರಿದಂತೆ ಇತರರು ಮ್ಯಾಜಿಸ್ಟ್ರೇಟ್ ಸಮಿತಿಯಲ್ಲಿ ಇರಲಿದ್ದಾರೆ.

ಪ್ರಕರಣದ ಹಿನ್ನೆಲೆ:
ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಆಗಸ್ಟ್ 11ರ ರಾತ್ರಿ ಗಲಭೆ ನಡೆದಿದ್ದು, ಕಿಡಿಗೇಡಿಗಳು ಅಪಾರ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡಿದ್ದರು. ಪರಿಸ್ಥಿತಿ ನಿಯಂತ್ರಣಕ್ಕಾಗಿ ಪೊಲೀಸರು ಗೋಲಿಬಾರ್ ಮಾಡಿದ್ದರು.

ಗೋಲಿಬಾರ್ ವೇಳೆ ಗುಂಡು ತಗುಲಿ ನಾಲ್ವರು ಮೃತರಾಗಿದ್ದರು. ಈ ಕುರಿತು ಇದೀಗ ಮ್ಯಾಜಿಸ್ಟ್ರೇಟ್ ವಿಚಾರಣೆಗೆ ಸರ್ಕಾರ ಆದೇಶಿಸಿದ್ದು, ಸದ್ಯ ಮ್ಯಾಜಿಸ್ಟ್ರೇಟ್​​ಗೆ ಗೋಲಿಬಾರ್​ನಲ್ಲಿ ಮೃತಪಟ್ಟವರ ಪೋಷಕರು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಹಲವು ಆಯಾಮಗಳಲ್ಲಿ ವಿಚಾರಣೆ ನಡೆಸಲಿರುವ ಮ್ಯಾಜಿಸ್ಟ್ರೇಟ್, ಮೂರು ತಿಂಗಳ ಅವಧಿಯಲ್ಲಿ ಸುದೀರ್ಘ ವಿಚಾರಣೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.