ETV Bharat / state

ದಾವೋಸ್​​ನಿಂದ ಬರುತ್ತಿದ್ದಂತೆ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ್ರು ಸಿಎಂ ಯಡಿಯೂರಪ್ಪ

ಸಿಎಂ ಯಡಿಯೂರಪ್ಪ ದಾವೋಸ್​ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆ ಬಳಿಕ ಬೆಂಗಳೂರಿಗೆ ವಾಪಸಾಗಿದ್ದಾರೆ. ಅಲ್ಲಿಂದ ಬರುತ್ತಿದ್ದಂತೆ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿಯನ್ನು ನೀಡಿದ್ದಾರೆ. ಮೂರ್ನಾಲ್ಕು ದಿನಗಳೊಳಗಾಗಿ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಹೇಳಿದ್ದಾರೆ.

author img

By

Published : Jan 24, 2020, 5:41 PM IST

cabinet-expansion-within-3-4-days-said-cm-yediyurappa
ಸಿಎಂ ಯಡಿಯೂರಪ್ಪ ಹೇಳಿಕೆ

ದೇವನಹಳ್ಳಿ: ಮೂರ್ನಾಲ್ಕು ದಿನಗಳ ಒಳಗಾಗಿ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸಿಎಂ ಯಡಿಯೂರಪ್ಪ ಹೇಳಿಕೆ

ಸ್ವಿಟ್ಜರ್​​ಲ್ಯಾಂಡ್ ನ ದಾವೋಸ್​ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಿದರು. ಮೂರ್ನಾಲ್ಕು ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡುತ್ತೇವೆ. ನಾಳೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ಅವರ ಜೊತೆ ಮಾತನಾಡಿ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ತಿಳಿಸಿದರು.

ಈಗಾಗಲೇ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಿದ್ದು, ಈ ಹಿಂದೆಯೇ ಮಾತುಕತೆ ನಡೆಸಲಾಗಿದೆ. ಆದರೆ ನಾಳೆಯೂ ಅಮಿತ್ ಶಾ ಅವರ ಜೊತೆ ಮಾತನಾಡಲು ಸಮಯ ಸಿಕ್ಕಿದ್ದು, ಪ್ರಮಾಣವಚನ ಕಾರ್ಯಕ್ರಮಕ್ಕೆ ದಿನಾಂಕ ನಿಗದಿ ಮಾಡುವುದಾಗಿ ಸಿಎಂ ಹೇಳಿದರು.

ಇನ್ನು, ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಕರ್ನಾಟಕ ಹಾಗೂ ಬೆಂಗಳೂರಿನಲ್ಲಿ ಬಂಡವಾಳ ಹೂಡಿಕೆಗೆ ಕಂಪನಿಗಳು ಬಹಳ ಆಸಕ್ತಿ ಹೊಂದಿವೆ. ದಾವೋಸ್ ಪ್ರವಾಸ ಸಾಕಷ್ಟು ಲಾಭ ತಂದಿದೆ ಎಂದರು. ಹೊರಡುವ ಮುನ್ನ 10 ದಿನ ಬೆಂಗಳೂರಿನಿಂದ ಹೊರ ಹೊಗಬೇಕು. ಇದರಿಂದ ಪ್ರಯೋಜನವೇನು ಎಂಬ ಯೋಚನೆ ಬಂದಿತ್ತು. ದಾವೋಸ್​ಗೆ ಹೋದ ಮೇಲೆ ಆತಂಕವೆಲ್ಲ ದೂರವಾಯಿತು. ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮತ್ತು ಜಿಫ್ ಸೆಕ್ರೆಟರಿ ಜೊತೆ ನಾನು 40 ಕ್ಕೂ ಹೆಚ್ಚು ಕಂಪನಿಗಳ ಜೊತೆ ವೈಯಕ್ತಿಕವಾಗಿ ಮಾತುಕತೆ ನಡೆಸಿದ್ದೇವೆ. ಬೆಂಗಳೂರು ಮತ್ತು ಕರ್ನಾಟಕದ ಬಗ್ಗೆ ವಿಶೇಷವಾದ ಚರ್ಚೆಯಾಗುತ್ತಿತ್ತು ಎಂದು ಸಿಎಂ ಮಾಹಿತಿ ನೀಡಿದರು.

ದೇವನಹಳ್ಳಿ: ಮೂರ್ನಾಲ್ಕು ದಿನಗಳ ಒಳಗಾಗಿ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸಿಎಂ ಯಡಿಯೂರಪ್ಪ ಹೇಳಿಕೆ

ಸ್ವಿಟ್ಜರ್​​ಲ್ಯಾಂಡ್ ನ ದಾವೋಸ್​ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಿದರು. ಮೂರ್ನಾಲ್ಕು ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡುತ್ತೇವೆ. ನಾಳೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದು, ಅವರ ಜೊತೆ ಮಾತನಾಡಿ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ತಿಳಿಸಿದರು.

ಈಗಾಗಲೇ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಿದ್ದು, ಈ ಹಿಂದೆಯೇ ಮಾತುಕತೆ ನಡೆಸಲಾಗಿದೆ. ಆದರೆ ನಾಳೆಯೂ ಅಮಿತ್ ಶಾ ಅವರ ಜೊತೆ ಮಾತನಾಡಲು ಸಮಯ ಸಿಕ್ಕಿದ್ದು, ಪ್ರಮಾಣವಚನ ಕಾರ್ಯಕ್ರಮಕ್ಕೆ ದಿನಾಂಕ ನಿಗದಿ ಮಾಡುವುದಾಗಿ ಸಿಎಂ ಹೇಳಿದರು.

ಇನ್ನು, ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಕರ್ನಾಟಕ ಹಾಗೂ ಬೆಂಗಳೂರಿನಲ್ಲಿ ಬಂಡವಾಳ ಹೂಡಿಕೆಗೆ ಕಂಪನಿಗಳು ಬಹಳ ಆಸಕ್ತಿ ಹೊಂದಿವೆ. ದಾವೋಸ್ ಪ್ರವಾಸ ಸಾಕಷ್ಟು ಲಾಭ ತಂದಿದೆ ಎಂದರು. ಹೊರಡುವ ಮುನ್ನ 10 ದಿನ ಬೆಂಗಳೂರಿನಿಂದ ಹೊರ ಹೊಗಬೇಕು. ಇದರಿಂದ ಪ್ರಯೋಜನವೇನು ಎಂಬ ಯೋಚನೆ ಬಂದಿತ್ತು. ದಾವೋಸ್​ಗೆ ಹೋದ ಮೇಲೆ ಆತಂಕವೆಲ್ಲ ದೂರವಾಯಿತು. ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಮತ್ತು ಜಿಫ್ ಸೆಕ್ರೆಟರಿ ಜೊತೆ ನಾನು 40 ಕ್ಕೂ ಹೆಚ್ಚು ಕಂಪನಿಗಳ ಜೊತೆ ವೈಯಕ್ತಿಕವಾಗಿ ಮಾತುಕತೆ ನಡೆಸಿದ್ದೇವೆ. ಬೆಂಗಳೂರು ಮತ್ತು ಕರ್ನಾಟಕದ ಬಗ್ಗೆ ವಿಶೇಷವಾದ ಚರ್ಚೆಯಾಗುತ್ತಿತ್ತು ಎಂದು ಸಿಎಂ ಮಾಹಿತಿ ನೀಡಿದರು.

Intro:೩-೪ ದಿನದಲ್ಲಿ  ಸಚಿವ ಸಂಪುಟ ವಿಸ್ತರಣೆ -ಸಿಎಂ ಯಡಿಯೂರಪ್ಪ.

Body:ದೇವನಹಳ್ಳಿ : ಮೂರ್ನಾಲ್ಕು ದಿನಗಳ ಒಳಗಾಗಿ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಸ್ವಿಜರ್ಲ್ಯಾಂಡ್ ನ ದಾವೋಸ್ ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಬಿಎಸ್ ಯಡಿಯೂರಪ್ಪ ಮಾಧ್ಯಮಗಳ ಜೊತೆ ಮಾತನಾಡಿದರು. ವಿಶ್ವ ಆರ್ಥಿಕ ವಾರ್ಷಿಕ ಶೃಂಗಸಭೆಯಲ್ಲಿ ಕರ್ನಾಟಕ ಹಾಗೂ ಬೆಂಗಳೂರಿನಲ್ಲಿ ಬಂಡವಾಳ ಹೂಡಿಕೆಗೆ  ಕಂಪನಿಗಳು ಬಹಳ ಆಸಕ್ತಿ ಹೊಂದಿದ್ದು... ದಾವೋಸ್ ಪ್ರವಾಸ ಸಾಕಷ್ಟು ಲಾಭ ತಂದಿದೆ ಎಂದರು. ಹೊರಡುವ ಮುನ್ನ ಹತ್ತು ದಿನ ಬೆಂಗಳೂರಿನಿಂದ ಹೊರಹೊಗಬೇಕು ಇದರಿಂದ ಪ್ರಯೋಜನವೇನು ಎಂಬ ಯೋಚನೆ ಬಂದಿತ್ತು. ದಾವೋಸಗೆ ಹೋದ ಮೇಲೆ ಆತಂಕವೆಲ್ಲ ದೂರವಾಗಿತು. ಜಗದೀಶ್ ಶೆಟ್ಟರ್ ಮತ್ತು ಜಿಫ್ ಸೆಕ್ರೆಟರಿ ಜೊತೆ ನಾನು 40 ಕ್ಕೂ ಹೆಚ್ಚು ಕಂಪನಿಗಳ ಜೊತೆ ವೈಯಕ್ತಿಕವಾಗಿ ಅರ್ಧಗಂಟೆ ಮಾತುಕತೆ ನಡೆಸಿದ್ದೆವೆ. ಬೆಂಗಳೂರು  ಮತ್ತು ಕರ್ನಾಟಕದ ಬಗ್ಗೆ ವಿಶೇಷವಾದ ಚರ್ಚೆಯಾಗುತ್ತಿತ್ತು ಅಲ್ಲಿ. 

ಎಸ್ ಎಂ ಕೃಷ್ಣರ ನಂತರ16 ವರ್ಷಗಳ ಕರ್ನಾಟಕದ ಮುಖ್ಯಮಂತ್ರಿ ಅಲ್ಲಿಗೆ ಭೇಟಿ ಕೊಟ್ಟಿದ್ದಾರೆ .ಬಹಳಷ್ಟು  ಕಂಪನಿಗಳು ಕರ್ನಾಟಕದಲ್ಲಿ ಹೂಡಿಕೆ ಮಾಡಲು ಮುಂದೆ ಬಂದಿವೆ. ಅವರ ಜೊತೆ ಮಾತನಾಡಿದ್ದೆನೆ. 

ಜಾಗತಿಕ ಹೂಡಿಕೆದಾರರ ಸಮಾವೇಶದಿಂದ ಸಾಕಷ್ಟು  ಲಾಭ ತಂದು ಕೊಡಲಿದೆ. 

ಮುಂದಿನ ಎರಡು ವರ್ಷಗಳಲ್ಲಿ ಇದರ ಲಾಭ ಎಲ್ಲರಿಗೂ ಗೊತ್ತಾಗಲಿದೆ ಎಂದರು. 


 ಈ ವೇಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಿ... ಕೇವಲ ಮೂರ್ನಾಲ್ಕು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ತಿಳಿಸಿದರು. ನಾಳೆ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದು.. ಅಮಿತ್ ಶಾ ರವರ ಜೊತೆ ನಾಳೆ ಮಾತನಾಡಿ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ತಿಳಿಸಿದರು. ಅಂದಹಾಗೆ ಈಗಾಗಲೇ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಿದ್ದು ಹಿಂದೆಯೇ ಮಾತುಕತೆ ನಡೆಸಲಾಗಿದೆ. ಆದರೆ ನಾಳೆಯೂ ಅಮಿತ್ ಶಾ ರವರ ಜೊತೆ ಮಾತನಾಡಲು ಸಮಯ ಸಿಕ್ಕಿದ್ದು ಅವರ ಜೊತೆ ಮಾತನಾಡಿ ಪ್ರಮಾಣವಚನ ಕಾರ್ಯಕ್ರಮಕ್ಕೆ ದಿನಾಂಕ ನಿಗದಿ ಮಾಡುವುದಾಗಿ ಹೇಳಿದರು. ಇನ್ನು ಕೇವಲ ಏಳು ಮಂದಿಗೆ ಸಚಿವ ಸ್ಥಾನ ಕೊಡುವ ವಿಚಾರಕ್ಕೆ ಪ್ರತಿಕ್ರಿಯಿಸಿ ಅದೆಲ್ಲ ಸುಳ್ಳು ಎಂದು ತಿರಸ್ಕರಿಸಿದರು. ಆದರೆ ಸೋತವರಿಗೆ ಸಚಿವ ಸ್ಥಾನವೂ ನೀಡುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ ಈಗ ನಾನು ಗೆದ್ದವರ ಬಗ್ಗೆ ಮಾತನಾಡಿದ್ದೇನೆ ಸೋತವರಿಗೆ ಸಚಿವ ಸ್ಥಾನ ನೀಡುವ ಪ್ರಶ್ನೆ ಈಗ ಉದ್ಭವಿಸುವುದಿಲ್ಲ ಎಂದು ಜಾರಿಕೊಂಡರು.


ಬೈಟ್ : ಯಡಿಯೂರಪ್ಪ , ಮುಖ್ಯಮಂತ್ರಿಗಳು

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.