ETV Bharat / state

ಪಿಂಚಣಿ ನೇರವಾಗಿ ಫಲಾನುಭವಿಗಳಿಗೆ ದೊರೆಯುವಂತಾಗಬೇಕು: ಐವನ್ ಡಿಸೋಜ

author img

By

Published : Jul 5, 2019, 10:25 PM IST

Updated : Jul 6, 2019, 8:01 PM IST

ಕೊಟ್ಟೂರು, ಕೂಡ್ಲಿಗಿ, ಕಂಪ್ಲಿ ಈ ಮೂರು ಹೊಸ ತಾಲೂಕುಗಳ ಅಭಿವೃದ್ಧಿಗೆ ಪ್ರತಿ ತಾಲೂಕಿಗೂ 10 ಕೋಟಿ ನೀಡಲಾಗುತ್ತದೆ-ಐವನ್ ಡಿ‌ಸೋಜಾ ತಿಳಿಸಿದರು.

ಪಿಂಚಣಿ ಪ್ರಮಾಣ ಪತ್ರ ವಿತರಿಸಿದ ಐವಾನ್ ಡಿ‌ಸೋಜಾ.

ಬಳ್ಳಾರಿ: ಜಿಲ್ಲೆಯಲ್ಲಿ 4 ಲಕ್ಷ ಮಂದಿ ವಿವಿಧ ಯೋಜನೆಯಡಿ ಪಿಂಚಣಿ ಪಡೆಯುತ್ತಿದ್ದಾರೆ. ಆದರೆ, ಈಚೆಗೆ ಅದರ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡುವಾಗ ತೊಂದರೆಯಾಗುತ್ತಿದೆ ಎನ್ನುವ ದೂರುಗಳು ಕೇಳಿ ಬರುತ್ತಿವೆ. ಆದ್ದರಿಂದ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಕಂದಾಯ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜಾ ಅಧಿಕಾರಿಗಳಿಗೆ ಸೂಚಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಐವನ್ ಡಿಸೋಜಾ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅರ್ಹರಿಗೆ ಪಿಂಚಣಿ ಸೌಲಭ್ಯ ಕಲ್ಪಿಸುವುದು ನಮ್ಮ ಕರ್ತವ್ಯ. ಕಳೆದ ಜೂನ್​ನಲ್ಲಿ 2,516 ಜನರಿಗೆ ಸೌಲಭ್ಯ ಕಲ್ಪಿಸಲಾಗಿದೆ. 1,674 ಕಂದಾಯ ಅದಾಲತ್​ಗಳಲ್ಲಿ 2,870 ಅರ್ಜಿಗಳು ವಿಲೇವಾರಿ ಮಾಡಿ ಶೇ. 98ರಷ್ಟು ಪ್ರಗತಿ ಸಾಧಿಸಿರುವುದು ಶ್ಲಾಘನೀಯ ಎಂದು ಸಂತಸ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ನಕುಲ್ ಮಾತನಾಡಿ, ಜಿಲ್ಲೆಯಲ್ಲಿ ಸಿರುಗುಪ್ಪ ಸೇರಿದಂತೆ 30 ಗ್ರಾಮಗಳಿಗೆ ರುದ್ರಭೂಮಿ ಇಲ್ಲ. ಸರ್ಕಾರಕ್ಕೆ ಸಂಬಂಧಿಸಿದ ಒಂದು ಎಕರೆ ಸಹ ಇಲ್ಲ ಎಂದು ಹೇಳಿದ ಅಧಿಕಾರಿಗಳಿಗೆ 'ಈ ಹಿಂದೆ ವಿಧಾನಸಭೆಯಲ್ಲಿ ರುದ್ರಭೂಮಿಗೆ ಸಂಬಂಧಿಸಿದ ಚರ್ಚೆಯಾಗಿದೆ. ಖಾಸಗಿ ಭೂಮಿ ಖರೀದಿಸಿ ಎಂದು ನಿರ್ದೇಶಿಸಿದರು.

ಜಿಲ್ಲೆಯಲ್ಲಿ 2018 ಏಪ್ರಿಲ್ 1ರಿಂದ 2019 ಜೂನ್ ಅಂತ್ಯದವರೆಗೆ ಒಟ್ಟು 32 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದುವರೆಗೂ 24 ರೈತರ ಕುಟುಂಬಗಳಿಗೆ ಪರಿಹಾರ ವಿತರಿಸಲಾಗಿದೆ ಎಂದು ನಕುಲ್ ತಿಳಿಸಿದರು. ಮರಣ ಹೊಂದಿದ ರೈತರ ಮನೆಗಳಿಗೆ ಭೇಟಿ ನೀಡಿ ಸಾಂತ್ವಾನ ಹೇಳಬೇಕು ಹಾಗೂ ಅವರ ಸಮಸ್ಯೆಗಳು ಏನು ಎಂಬುದನ್ನು ತಿಳಿದು ಬಗೆಹರಿಸುವ ಪ್ರಯತ್ನಕ್ಕೆ ಮುಂದಾಗಬೇಕು. ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೇರ ಪ್ರವೇಶಕ್ಕೆ ಅವಕಾಶ ಮಾಡಿಕೊಡುವುದಕ್ಕೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದರು.

ಬಳ್ಳಾರಿ: ಜಿಲ್ಲೆಯಲ್ಲಿ 4 ಲಕ್ಷ ಮಂದಿ ವಿವಿಧ ಯೋಜನೆಯಡಿ ಪಿಂಚಣಿ ಪಡೆಯುತ್ತಿದ್ದಾರೆ. ಆದರೆ, ಈಚೆಗೆ ಅದರ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡುವಾಗ ತೊಂದರೆಯಾಗುತ್ತಿದೆ ಎನ್ನುವ ದೂರುಗಳು ಕೇಳಿ ಬರುತ್ತಿವೆ. ಆದ್ದರಿಂದ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಕಂದಾಯ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜಾ ಅಧಿಕಾರಿಗಳಿಗೆ ಸೂಚಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಐವನ್ ಡಿಸೋಜಾ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅರ್ಹರಿಗೆ ಪಿಂಚಣಿ ಸೌಲಭ್ಯ ಕಲ್ಪಿಸುವುದು ನಮ್ಮ ಕರ್ತವ್ಯ. ಕಳೆದ ಜೂನ್​ನಲ್ಲಿ 2,516 ಜನರಿಗೆ ಸೌಲಭ್ಯ ಕಲ್ಪಿಸಲಾಗಿದೆ. 1,674 ಕಂದಾಯ ಅದಾಲತ್​ಗಳಲ್ಲಿ 2,870 ಅರ್ಜಿಗಳು ವಿಲೇವಾರಿ ಮಾಡಿ ಶೇ. 98ರಷ್ಟು ಪ್ರಗತಿ ಸಾಧಿಸಿರುವುದು ಶ್ಲಾಘನೀಯ ಎಂದು ಸಂತಸ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ನಕುಲ್ ಮಾತನಾಡಿ, ಜಿಲ್ಲೆಯಲ್ಲಿ ಸಿರುಗುಪ್ಪ ಸೇರಿದಂತೆ 30 ಗ್ರಾಮಗಳಿಗೆ ರುದ್ರಭೂಮಿ ಇಲ್ಲ. ಸರ್ಕಾರಕ್ಕೆ ಸಂಬಂಧಿಸಿದ ಒಂದು ಎಕರೆ ಸಹ ಇಲ್ಲ ಎಂದು ಹೇಳಿದ ಅಧಿಕಾರಿಗಳಿಗೆ 'ಈ ಹಿಂದೆ ವಿಧಾನಸಭೆಯಲ್ಲಿ ರುದ್ರಭೂಮಿಗೆ ಸಂಬಂಧಿಸಿದ ಚರ್ಚೆಯಾಗಿದೆ. ಖಾಸಗಿ ಭೂಮಿ ಖರೀದಿಸಿ ಎಂದು ನಿರ್ದೇಶಿಸಿದರು.

ಜಿಲ್ಲೆಯಲ್ಲಿ 2018 ಏಪ್ರಿಲ್ 1ರಿಂದ 2019 ಜೂನ್ ಅಂತ್ಯದವರೆಗೆ ಒಟ್ಟು 32 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದುವರೆಗೂ 24 ರೈತರ ಕುಟುಂಬಗಳಿಗೆ ಪರಿಹಾರ ವಿತರಿಸಲಾಗಿದೆ ಎಂದು ನಕುಲ್ ತಿಳಿಸಿದರು. ಮರಣ ಹೊಂದಿದ ರೈತರ ಮನೆಗಳಿಗೆ ಭೇಟಿ ನೀಡಿ ಸಾಂತ್ವಾನ ಹೇಳಬೇಕು ಹಾಗೂ ಅವರ ಸಮಸ್ಯೆಗಳು ಏನು ಎಂಬುದನ್ನು ತಿಳಿದು ಬಗೆಹರಿಸುವ ಪ್ರಯತ್ನಕ್ಕೆ ಮುಂದಾಗಬೇಕು. ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೇರ ಪ್ರವೇಶಕ್ಕೆ ಅವಕಾಶ ಮಾಡಿಕೊಡುವುದಕ್ಕೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದರು.

Intro:ಬಳ್ಳಾರಿ ಜಿಲ್ಲೆಯಲ್ಲಿ 5.83 ಲಕ್ಷ ಕುಟುಂಬಗಳಿಗೆ ಬಿಪಿಲ್ ಕಾರ್ಡ್ ನೀಡಿದೆ ಅದರಲ್ಲಿ 4 ಲಕ್ಷ ಜನರು ವಿವಿಧ ಯೋಜನೆಯ ಅಡಿಯಲ್ಲಿ ಸರ್ಕಾರದಿಂದ ಪಿಂಚಣಿಯನ್ನು ಪಡೆಯುತ್ತಿದ್ದಾರೆ ಆದರೆ ಪಿಂಚಣಿ ಹಣ ಫಲಾನುಭವಿಗಳಿಗೆ ನೇರವಾಗಿ ತಲುಪಿಸುವ ಸಮಯದಲ್ಲಿ ತೊಂದರೆಯಾಗುತ್ತಿದೆ ಎನ್ನುವ ದೂಗಳು ಬಂದಿದೆ ಎಂದು ಕಂದಾಯ ಸಂಸದೀಯ ಕಾರ್ಯದರ್ಶಿ ಐವಾನ್ ಡಿಸೋಜಾ ತಿಳಿಸಿದರು.


Body:ನಗರದ ಜಿಲ್ಲಾಧಿಕಾರಿ ‌ಕಚೇರಿಯಲ್ಲಿ ಜಿಲ್ಲೆಯ ವಿವಿಧ ಅಧಿಕಾರಿಗಳೊಂದಿಗೆ ಮಾತನಾಡಿದ ಐವಾನ್ ಡಿ ಸೋಜಾ ಅವರು ಜಿಲ್ಲೆಯಲ್ಲಿ ವಿವಿಧ ಕಾರ್ಮಗಾರಿಗಳ ಬಗ್ಗೆ ಚರ್ಚೆ ಮಾಡಿದರು.


ಪಿಂಚಣಿ :

ಅರ್ಹರಿಗೆ ಪಿಂಚಣಿ ಸೌಲಭ್ಯ ಕಲ್ಪಿಸುವುದು ನಮ್ಮ ಕರ್ತವ್ಯ ನಮ್ಮ ಸರ್ಕಾರದ ಬದ್ಧತೆ ಸಾಮಾಜಿಕವಾಗಿ ಭದ್ರತೆ ನೀಡುವುದಾಗಿದೆ ಎಂದು ಐವಾನ್ ಡಿಸೋಜಾ ಅವರು ಬಳ್ಳಾರಿ ಜಿಲ್ಲೆಯಲ್ಲಿ 4 ಲಕ್ಷ ಜನರು ಪಿಂಚಣಿ ಸೌಲಭ್ಯ ಪಡೆಯುತ್ತಿದ್ದಾರೆ. ಕಳೆದ ಜೂನ್ ತಿಂಗಳಲ್ಲಿ 2516 ಜನರಿಗೆ ಸೌಲಭ್ಯ ಕಲ್ಪಿಸಿದೆ.

1674 ಕಂದಾಯ ಅದಾಲತ್ ಗಳಲ್ಲಿ 2870 ಅರ್ಜಿಗಳು ವಿಲೇವಾರಿ ಮಾಡಿ ಶೇ. 98 ರಷ್ಟು ಪ್ರಗತಿ ಸಾಧಿಸಿರುವುದು ಶ್ಲಾಘನೀಯವಾದುದು ಎಂದರು.

ಪೋಸ್ಟಲ್ ಆಫೀಸ್ ಮತ್ತು ಬ್ಯಾಂಕ್ ಆಫೀಸರಗಳು ತಮ್ಮೊಂದಿಗೆ ಇರುವಂತೆ ನೋಡಿಕೊಳ್ಳಿ ಎಂದು ಡಿಸಿ ನಕುಲ್ ತಿಳಿಸಿದರು.

ರುದ್ರಭೂಮಿ ಕೊರೆತ :

ಜಿಲ್ಲೆಯಲ್ಲಿ ಸಿರುಗುಪ್ಪ ಸೇರಿದಂತೆ 30 ಗ್ರಾಮಗಳಿಗೆ ರುದ್ರಭೂಮಿ ಇಲ್ಲ ಮತ್ತು ಸರ್ಕಾರ ಸಂಭಂದಿಸಿದ ಒಂದು ಎಕರೆಯೂ ಸಹ ಭೂಮಿ ಇಲ್ಲ ಎಂದು ಅಧಿಕಾರಿ ತಿಳಿಸಿದರು. ಇದಕ್ಕೆ ಉತ್ತರಿಸಿದ ಡಿಸೋಜ ಈ ಹಿಂದೆ ಅಸೆಂಬ್ಲಿಯಲ್ಲಿ ರುದ್ರ ಭೂಮಿಗೆ ಸಂಭಂದಿಸಿದ ಚರ್ಚೆ ಯಾಗಿದೆ ಎಂದರು. ಖಾಸಗಿ ಭೂಮಿ ಖರೀದಿಸಿ ಎಂದು ಹೇಳಿದರು.

ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ವಸತಿ :

ಜಿಲ್ಲೆಯಲ್ಲಿ 2018 ಏಪ್ರಿಲ್ 1 ರಿಂದ 2019 ಜೂನ್ ಅಂತ್ಯದವರೆಗೆ ಒಟ್ಟು 32 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಇದುವರೆಗೂ 24 ರೈತರ ಕುಟುಂಬಗಳಿಗೆ ಪರಿಹಾರವನ್ನು ವಿತರಿಸಿದೆ ಎಂದು ಡಿಸಿ ನಕುಲ್ ತಿಳಿಸಿದರು.
ರೈತರು ಮರಣ ಹೊಂದಿದರೇ ಅವರ ಮನೆಗಳಿಗೆ ಬೇಟಿ ನೀಡಿ. ಸಾಂತ್ವಾನ ಹೇಳಬೇಕು ಮತ್ತು ಅವರ ಸ್ಥಿತಿಗತಿ ಏನಿದೆ ? ಅವರ ಸಮಸ್ಯೆಗಳು ಏನು ? ತಿಳಿದು ಬಗೆಹರಿಸುವ ಕೆಲಸ ಮಾಡಬೇಕೆಂದು ಡಿಸಿ ನಕುಲ್ ತಿಳಿಸಿದರು.

ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ಮೊರಾರ್ಜಿ ದೇಸಾಯಿ ವಸತೊ ಶಾಲೆಯಲ್ಲಿ ನೇರವಾಗಿ ಪ್ರವೇಶಕ್ಕೆ ಅವಕಾಶ ಮಾಡಿಕೊಡುವುದಕ್ಕೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದರು.


ಹೊಸ ತಾಲ್ಲೂಕು ನಿರ್ಮಾಣಕ್ಕಾಗಿ 10 ಕೋಟಿದಾನ:


ಕೊಟ್ಟೂರು, ಕೂಡ್ಲಿಗಿ, ಕಂಪ್ಲಿ ಮೂರು ಹೊಸ ತಾಲೂಕುಗಳು ರಚನೆಯಾಗಿದೆ. ಅದಕ್ಕೆ ಭೂಮಿ ಕಾಮಗಾರಿಗೆ ಹಣ ಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಅದಕ್ಕೆ ಪ್ರತಿಯೊಂದು ತಾಲೂಕಿಗೆ 10 ಕೋಟೆ ನಿರ್ಮಾಣಕ್ಕೆ ನೀಡಲಾಗುತ್ತದೆ ಎಂದು ಐವಾನ್ ಡಿ‌ಸೋಜಾ ತಿಳಿಸಿದರು.

ಸ್ಮಾಟ್ ಕಾರ್ಡ್ ಸಮಸ್ಯೆ :

ಅಸಿಸ್ಟೆಂಟ್ ಆಫೀಸರ್ ಮತ್ತು ತಹಶಿಲ್ದಾರರಗಳಿಗೆ ನಿಮ್ಮದ್ದ ಏನಾದ್ರೂ ಸಲಹೆ ಸೂಚನೆಗಳಿವೆ ನನಗೆ ನೀಡಿ ( ಐವಾನ್ ಡಿ ಸೋಜಾ ) ಎಂದು ಕೇಳಿದರು‌. ಅದಕ್ಕೆ ಅಧಿಕಾರಿ ಪಿಂಚಣಿ ಸಮಯದಲ್ಲಿ ಖಾತೆಗೆ ಜಮ ಮಾಡುವುದು ಉತ್ತಮ ಎಂದು ತಿಳಿಸಿದರು. ಮೊಬೈಲ್ ಬ್ಯಾಂಕ್ ಮಾಡಿದರೇ ಉತ್ತಮ ಎಂದು ತಿಳಿಸಿದರು.


ಇದೇ ಸಮಯದಲ್ಲಿ ಐವಾನ್ ಡಿಸೋಜಾ ಅವರು ಪಿಂಚಣಿ ಅದಾಲತ್ ನಡೆಸಿದರು ಮತ್ತು ಹೊಸದಾಗಿ ಪಿಂಚಣಿ ಸೌಲಭ್ಯ ಪಡೆದ ಫಲಾನುಭವಿಗಳಿಗೆ ಪಿಂವಣಿ ಪ್ರಮಾಣ ಪತ್ರವನ್ನು ವಿತರಣೆ ಮಾಡಿದರು.




Conclusion:ಈ ಪಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ‌ ನಕುಲ್ ಹಾಗೂ ವಿವಿಧ ತಾಲೂಕಿನ ತಹಶಿಲ್ದಾರರು ಮತ್ತು ಅಸಿಸ್ಟೆಂಟ್ ಕಮಿಷನರ್ ಗಳು ಹಾಜರಿದ್ದರು.
Last Updated : Jul 6, 2019, 8:01 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.