ETV Bharat / state

ಬೆಳಗಾವಿಯಲ್ಲಿರುವ ಮರಾಠಿ ಭಾಷಿಕರಿಗೆ ಅನ್ಯಾಯವಾಗಿದೆ: ಬಿಎಸ್​ವೈಗೆ ಮಹಾ ಸಚಿವನ ಪತ್ರ

author img

By

Published : Aug 29, 2020, 9:45 AM IST

ಪೀರನವಾಡಿಯ ಮರಾಠಿ ಭಾಷಿಕರಿಗೆ ಪೊಲೀಸರಿಂದ ಅನ್ಯಾಯವಾಗಿದೆ ಎಂದು ಮಹಾರಾಷ್ಟ್ರ ನಗರಾಭಿವೃದ್ಧಿ ಇಲಾಖೆ ಸಚಿವ ಏಕನಾಥ ಶಿಂಧೆ ಸಿಎಂ ಬಿ.ಎಸ್‌.ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.

ಶಿಂಧೆ
ಶಿಂಧೆ

ಬೆಳಗಾವಿ: ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿವಾದ ಸುಖಾಂತ್ಯವಾದರೂ ವಿವಾದವನ್ನು ಇನ್ನೂ ಜೀವಂತವಾಗಿಡಲು ಮಹಾರಾಷ್ಟ್ರದ ನಾಯಕರು ಯತ್ನಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಪೀರನವಾಡಿಯ ಮರಾಠಿ ಭಾಷಿಕರಿಗೆ ಪೊಲೀಸರಿಂದ ಅನ್ಯಾಯವಾಗಿದೆ ಎಂದು ಮಹಾರಾಷ್ಟ್ರ ನಗರಾಭಿವೃದ್ಧಿ ಇಲಾಖೆ ಸಚಿವ ಏಕನಾಥ ಶಿಂಧೆ ಸಿಎಂ ಬಿ.ಎಸ್‌.ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ. ದೇಶಭಕ್ತ ಸಂಗೊಳ್ಳಿ ರಾಯಣ್ಣನ ಬಗ್ಗೆ ನಮಗೆ ಅಭಿಮಾನವಿದೆ. ಆದರೆ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಎದುರು ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ನಮ್ಮ ವಿರೋಧವಿದೆ. ಹೀಗಾಗಿ ಪ್ರತಿಭಟನೆ ನಡೆಸುತ್ತಿದ್ದ ಮರಾಠಿ ಭಾಷಿಕರ ಮೇಲೆ ಲಾಠಿ ಚಾರ್ಜ್ ಆಗಿದೆ. ಮರಾಠಿ ಭಾಷಿಕರ ಮೇಲೆ ಪೊಲೀಸರಿಂದ ಅನ್ಯಾಯವಾಗಿದೆ ಎಂದಿದ್ದಾರೆ.

ಈ ಹಿಂದೆ ಮಣಗುತ್ತಿಯಲ್ಲಿ ಪ್ರತಿಷ್ಠಾಪಿಸಿದ್ದ ಶಿವಾಜಿ ಮೂರ್ತಿಯನ್ನು ತೆರವು ಮಾಡಿದ್ದಾರೆ. ಇದಕ್ಕೆ ಮಹಾರಾಷ್ಟ್ರ ಸೇರಿದಂತೆ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು‌. ಹೀಗಾಗಿ ಪೀರನವಾಡಿ, ಮಣಗುತ್ತಿ ವಿವಾದ ಬಗೆಹರಿಸುವಂತೆ ಪತ್ರ ಬರೆದಿದ್ದಾರೆ.

ವಿಶೇಷ ಅಂದ್ರೆ ಪೀರನವಾಡಿ, ಮಣಗುತ್ತಿ ವಿವಾದವನ್ನು ಸ್ಥಳೀಯರೇ ಬಗೆಹರಿಸಿಕೊಂಡಿದ್ದಾರೆ. ಆದರೂ ಸಹ ಮಹಾರಾಷ್ಟ್ರ ನಾಯಕರು ಮಾತ್ರ ಈ ವಿಚಾರದಲ್ಲಿ ಮೂಗು ತೋರಿಸುತ್ತಿದ್ದಾರೆ.

ಬೆಳಗಾವಿ: ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ವಿವಾದ ಸುಖಾಂತ್ಯವಾದರೂ ವಿವಾದವನ್ನು ಇನ್ನೂ ಜೀವಂತವಾಗಿಡಲು ಮಹಾರಾಷ್ಟ್ರದ ನಾಯಕರು ಯತ್ನಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಪೀರನವಾಡಿಯ ಮರಾಠಿ ಭಾಷಿಕರಿಗೆ ಪೊಲೀಸರಿಂದ ಅನ್ಯಾಯವಾಗಿದೆ ಎಂದು ಮಹಾರಾಷ್ಟ್ರ ನಗರಾಭಿವೃದ್ಧಿ ಇಲಾಖೆ ಸಚಿವ ಏಕನಾಥ ಶಿಂಧೆ ಸಿಎಂ ಬಿ.ಎಸ್‌.ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ. ದೇಶಭಕ್ತ ಸಂಗೊಳ್ಳಿ ರಾಯಣ್ಣನ ಬಗ್ಗೆ ನಮಗೆ ಅಭಿಮಾನವಿದೆ. ಆದರೆ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಎದುರು ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ನಮ್ಮ ವಿರೋಧವಿದೆ. ಹೀಗಾಗಿ ಪ್ರತಿಭಟನೆ ನಡೆಸುತ್ತಿದ್ದ ಮರಾಠಿ ಭಾಷಿಕರ ಮೇಲೆ ಲಾಠಿ ಚಾರ್ಜ್ ಆಗಿದೆ. ಮರಾಠಿ ಭಾಷಿಕರ ಮೇಲೆ ಪೊಲೀಸರಿಂದ ಅನ್ಯಾಯವಾಗಿದೆ ಎಂದಿದ್ದಾರೆ.

ಈ ಹಿಂದೆ ಮಣಗುತ್ತಿಯಲ್ಲಿ ಪ್ರತಿಷ್ಠಾಪಿಸಿದ್ದ ಶಿವಾಜಿ ಮೂರ್ತಿಯನ್ನು ತೆರವು ಮಾಡಿದ್ದಾರೆ. ಇದಕ್ಕೆ ಮಹಾರಾಷ್ಟ್ರ ಸೇರಿದಂತೆ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು‌. ಹೀಗಾಗಿ ಪೀರನವಾಡಿ, ಮಣಗುತ್ತಿ ವಿವಾದ ಬಗೆಹರಿಸುವಂತೆ ಪತ್ರ ಬರೆದಿದ್ದಾರೆ.

ವಿಶೇಷ ಅಂದ್ರೆ ಪೀರನವಾಡಿ, ಮಣಗುತ್ತಿ ವಿವಾದವನ್ನು ಸ್ಥಳೀಯರೇ ಬಗೆಹರಿಸಿಕೊಂಡಿದ್ದಾರೆ. ಆದರೂ ಸಹ ಮಹಾರಾಷ್ಟ್ರ ನಾಯಕರು ಮಾತ್ರ ಈ ವಿಚಾರದಲ್ಲಿ ಮೂಗು ತೋರಿಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.