ತುಮಕೂರು: ಕುಣಿಗಲ್ ತಾಲೂಕಿನಲ್ಲಿ ಹಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ 7 ವರ್ಷದ ಹೆಣ್ಣು ಚಿರತೆಯೊಂದು ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಬಿದ್ದಿದೆ.
ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಹುನುಗನಹಳ್ಳಿ ಗ್ರಾಮದ ಶಿವರಾಮು ಎಂಬುವವರ ಹಿಡುವಳಿ ಜಮೀನು ಸರ್ವೇ ನಂಬರ್ 82ರಲ್ಲಿ ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇಟ್ಟಿದ್ದರು.
ಇಂದು ಚಿರತೆ ಬೋನಿನಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆಯವರು ಸುರಕ್ಷಿತವಾಗಿ ದೂರದ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಿದ್ದಾರೆ.