ETV Bharat / state

ಕೊರಟಗೆರೆ ಬಳಿ ಯುವಕ-ಯುವತಿ ಮೇಲೆ ಹಲ್ಲೆ... ಯುವಕನ ಬರ್ಬರ ಕೊಲೆ - ಕೊರಟಗೆರೆ ತಾಲೂಕಿನ ಜಿ. ನಾಗೇನಹಳ್ಳಿ ಬಳಿ ಭೀಕರ ಹತ್ಯೆ

ಸ್ಕಾರ್ಪಿಯೋ ವಾಹನದಲ್ಲಿ ಹೋಗುತ್ತಿದ್ದ ಯುವಕ ಮತ್ತು ಯುವತಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ, ಯುವಕನನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.

A horrific murder in tumkur
ತುಮಕೂರಿನಲ್ಲಿ ಪ್ರಿಯಕರನ ಭೀಕರ ಹತ್ಯೆ
author img

By

Published : Dec 19, 2019, 9:36 PM IST

Updated : Dec 19, 2019, 10:28 PM IST

ತುಮಕೂರು: ಸ್ಕಾರ್ಪಿಯೋ ವಾಹನದಲ್ಲಿ ಹೋಗುತ್ತಿದ್ದ ಯುವಕ-ಯುವತಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ, ಯುವಕನನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಕೊರಟಗೆರೆ ತಾಲೂಕಿನ ಜಿ. ನಾಗೇನಹಳ್ಳಿ ಬಳಿ ಈ ಘಟನೆ ನಡೆದಿದೆ.

ವಿುಡಿಗೇಶಿಯ ಬಿದರಕೆರೆ ಗ್ರಾಮದ ಶೀನಿವಾಸ್ (27) ತಲೆ ಸಂಪೂರ್ಣವಾಗಿ ಜಿಜ್ಜಿ ಹೋಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಇವರು ಮಧುಗಿರಿಯಿಂದ ಬೆಂಗಳೂರಿನತ್ತ ಸ್ಕಾರ್ಪಿಯೋ ವಾಹನದಲ್ಲಿ ತೆರಳುವಾಗ, ದುಷ್ಕರ್ಮಿಗಳು ಹಿಂಬಾಲಿಸಿ ದಾಳಿ ಮಾಡಿದ್ದಾರೆ. ಇದರಿಂದಾಗಿ ಸ್ಕಾರ್ಪಿಯೋ ವಾಹನ ಕೂಡ ಜಖಂಗೊಂಡಿದೆ. ಘಟನೆಯಿಂದ ಯುವತಿ ಬೆಚ್ಚಿಬಿದ್ದಿದ್ದು, ಕೊರಟಗೆರೆ ಪೊಲೀಸರ ವಶದಲ್ಲಿದ್ದಾಳೆ. ಪೊಲೀಸರು ಈ ಪ್ರಕರಣ ಕುರಿತಂತೆ ಇನ್ನಷ್ಟು ಮಾಹಿತಿ ಕಲೆ ಹಾಕುತ್ತಿದ್ದಾರೆ.

ತುಮಕೂರಲ್ಲಿ ಯುವಕನ ಭೀಕರ ಹತ್ಯೆ

ಪೊಲೀಸ್ ಮೂಲಗಳ ಪ್ರಕಾರ ನಾಲ್ವರು ದುಷ್ಕರ್ಮಿಗಳು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆಂದು ಮಾಹಿತಿ ಲಭ್ಯವಾಗಿದೆ. ಕೊರಟಗೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

ತುಮಕೂರು: ಸ್ಕಾರ್ಪಿಯೋ ವಾಹನದಲ್ಲಿ ಹೋಗುತ್ತಿದ್ದ ಯುವಕ-ಯುವತಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ, ಯುವಕನನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಕೊರಟಗೆರೆ ತಾಲೂಕಿನ ಜಿ. ನಾಗೇನಹಳ್ಳಿ ಬಳಿ ಈ ಘಟನೆ ನಡೆದಿದೆ.

ವಿುಡಿಗೇಶಿಯ ಬಿದರಕೆರೆ ಗ್ರಾಮದ ಶೀನಿವಾಸ್ (27) ತಲೆ ಸಂಪೂರ್ಣವಾಗಿ ಜಿಜ್ಜಿ ಹೋಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಇವರು ಮಧುಗಿರಿಯಿಂದ ಬೆಂಗಳೂರಿನತ್ತ ಸ್ಕಾರ್ಪಿಯೋ ವಾಹನದಲ್ಲಿ ತೆರಳುವಾಗ, ದುಷ್ಕರ್ಮಿಗಳು ಹಿಂಬಾಲಿಸಿ ದಾಳಿ ಮಾಡಿದ್ದಾರೆ. ಇದರಿಂದಾಗಿ ಸ್ಕಾರ್ಪಿಯೋ ವಾಹನ ಕೂಡ ಜಖಂಗೊಂಡಿದೆ. ಘಟನೆಯಿಂದ ಯುವತಿ ಬೆಚ್ಚಿಬಿದ್ದಿದ್ದು, ಕೊರಟಗೆರೆ ಪೊಲೀಸರ ವಶದಲ್ಲಿದ್ದಾಳೆ. ಪೊಲೀಸರು ಈ ಪ್ರಕರಣ ಕುರಿತಂತೆ ಇನ್ನಷ್ಟು ಮಾಹಿತಿ ಕಲೆ ಹಾಕುತ್ತಿದ್ದಾರೆ.

ತುಮಕೂರಲ್ಲಿ ಯುವಕನ ಭೀಕರ ಹತ್ಯೆ

ಪೊಲೀಸ್ ಮೂಲಗಳ ಪ್ರಕಾರ ನಾಲ್ವರು ದುಷ್ಕರ್ಮಿಗಳು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆಂದು ಮಾಹಿತಿ ಲಭ್ಯವಾಗಿದೆ. ಕೊರಟಗೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

Intro:Body:ಸ್ಕಾರ್ಪಿಯೋದಲ್ಲಿ ಹೋಗುತ್ತಿದ್ದ ಪ್ರೇಮಿಗಳ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ.... ಪ್ರೇಮಿಯ ಹತ್ಯೆ

ತುಮಕೂರು
ಸ್ಕಾರ್ಪಿಯೋ ವಾಹನದಲ್ಲಿ ಹೋಗುತ್ತಿದ್ದ ಪ್ರೇಮಿಗಳಿಬ್ಬರ ಮೇಲೆ ನಾಲ್ವರು ದುಷ್ಕರ್ಮಿಗಳು ಹಲ್ಲೆ ನಡೆಸಿ ಯುವಕನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕು ಜಿ ನಾಗೇನಹಳ್ಳಿ ಬಳಿ ನಡೆದಿದೆ. ವಿುಡಿಗೇಶಿಯ ಬಿದರಕೆರೆ ಗ್ರಾಮದ ಶೀನಿವಾಸ್ (27) ಕೊಲೆಯಾದ ಯುವಕನಾಗಿದ್ದಾನೆ. ಯುವಕನ ತಲೆ ಸಂಪೂರ್ಣ ಜಿಜ್ಜಿ ಹೋಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮಧುಗಿರಿಯಿಂದ ಬೆಂಗಳೂರಿನತ್ತ ಸ್ಕಾರ್ಪಿಯೋ ವಾಹನದಲ್ಲಿ ತೆರಳುವಾಗ ಹಿಂಬಾಲಿಸಿರೋ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಇದರಿಂದಾಗಿ ಸ್ಕಾರ್ಪಿಯೋ ವಾಹನ ಕೂಡ ಜಖಂಗೊಂಡಿದೆ. ಘಟನೆಯಿಂದ ಹೆದರಿರುವ ಯುವತಿ ಕೊರಟಗೆರೆ ಪೊಲೀಸರ ವಶದಲ್ಲಿದ್ದು ಪೊಲೀಸರು ಘಟನೆಯ ಕುರಿತಂತೆ ಇನ್ನಷ್ಟು ಮಾಹಿತಿ ಕಲೆ ಹಾಕುತ್ತಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ನಾಲ್ವರು ದುಷ್ಕರ್ಮಿಗಳು ಈ ಕೃತಿಯಲ್ಲಿ ಭಾಗಿಯಾಗಿದ್ದಾರೆಂದು ಮಾಹಿತಿ ಲಭ್ಯವಾಗಿದೆ .
ಘಟನೆ ನಡೆದ ಸ್ಥಳಕ್ಕೆ ದೌಡಾಯಿಸಿರುವ ಕೊರಟಗೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇನ್ನಷ್ಟು ತನಿಖೆ ನಡೆಸುತ್ತಿದ್ದಾರೆ.Conclusion:
Last Updated : Dec 19, 2019, 10:28 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.