ETV Bharat / state

ಎಸಿಬಿ ಭರ್ಜರಿ ಬೇಟೆ... ಸರ್ಕಾರಿ ಅಧಿಕಾರಿಗಳ ಮನೆಯಲ್ಲಿ ಸಿಕ್ತು ಕೆಜಿಗಟ್ಟಲೆ ಚಿನ್ನಾಭರಣ, ಲಕ್ಷ ಲಕ್ಷ ಹಣ!

author img

By

Published : Aug 26, 2020, 5:44 PM IST

Updated : Aug 26, 2020, 5:53 PM IST

ಸರ್ಕಾರಿ ಹುದ್ದೆಯಲ್ಲಿರುವ ಎಂಎಸ್ಎನ್ ಬಾಬು ಹಾಗೂ ಹೆಚ್ ನಾಗರಾಜ್ ನಿವಾಸಗಳ ಮೇಲೆ ಎಸಿಬಿ ದಾಳಿ ನಡೆದಿದೆ. ಎಂಎಸ್ಎನ್ ಬಾಬು ಬಿಡಿಎನಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಯಾಗಿದ್ದಾರೆ. ನಾಗರಾಜ್ ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ದಾಳಿ ವೇಳೆ ಇಬ್ಬರ ನಿವಾಸ ಹಾಗೂ ಕಚೇರಿಗಳಲ್ಲಿ ನಗದು ಹಾಗೂ ಚಿನ್ನಾಭರಣಗಳು ಪತ್ತೆಯಾಗಿವೆ.

ACB raid
ಎಸಿಬಿ ದಾಳಿ

ತುಮಕೂರು/ಮೈಸೂರು/ಬೆಂಗಳೂರು: ಎಸಿಬಿ ಅಧಿಕಾರಿಗಳು ರಾಜ್ಯದ ವಿವಿಧೆಡೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಅಪಾರ ಪ್ರಮಾಣದ ಹಣ ಹಾಗೂ ಕೆಜಿಗಟ್ಟಲೆ ಚಿನ್ನಾಭರಣ ಪತ್ತೆಯಾಗಿದೆ. ತುಮಕೂರು, ರಾಮನಗರ ಹಾಗೂ ಮೈಸೂರಿನಲ್ಲಿ ದಾಳಿ ನಡೆದಿದೆ.

acb-raid
ಎಸಿಬಿ ದಾಳಿ-1

ಇಂದು ಬೆಳಗ್ಗೆ ಸರ್ಕಾರಿ ಹುದ್ದೆಯಲ್ಲಿರುವ ಎಂಎಸ್ಎನ್ ಬಾಬು ಹಾಗೂ ನಾಗರಾಜ್ ನಿವಾಸಗಳ ಮೇಲೆ ದಾಳಿ ನಡೆದಿದೆ. ಎಂಎಸ್ಎನ್ ಬಾಬು ಬಿಡಿಎನಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಯಾಗಿದ್ದಾರೆ. ನಾಗರಾಜ್ ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

acb-raid
ಪತ್ತೆಯಾದ ಚಿನ್ನಾಭರಣ

ತುಮಕೂರು ನಗರದ ಮಾರುತಿ ನಗರ ಬಡಾವಣೆಯಲ್ಲಿರುವ ಸರ್ಕಾರಿ ಅಧಿಕಾರಿ ಎಂ.ಎಸ್. ನಿರಂಜನ್ ಬಾಬು ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಸಾಕಷ್ಟು ದಾಖಲೆ ಪತ್ರಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅಮೃತ ವರ್ಷಿಣಿ ಹೆಸರಿನ ಮನೆ ಮೇಲೆ ದಾಳಿ ಮಾಡಿ ಕಂಪ್ಯೂಟರ್, ಪ್ರಿಂಟರ್, ದಾಖಲಾತಿ ಪತ್ರಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿರುವ ಇವರ ಫ್ಲಾಟ್​ ಮೇಲೂ ಅಧಿಕಾರಿಗಳು ತಲಾಷ್​ ನಡೆಸಿದ್ದಾರೆ.

ಎಸಿಬಿ ಭರ್ಜರಿ ಬೇಟೆ

ದಾಳಿ ವೇಳೆ ಇವರ ಮನೆಯಲ್ಲಿ 1.5 ಕೆಜಿ ಚಿನ್ನ ಪತ್ತೆಯಾಗಿದ್ದು, ಇದರ ಜೊತೆಗೆ ಐದು ಲಕ್ಷ ನಗದು ಸಹ ಪತ್ತೆಯಾಗಿದೆ. ಅಧಿಕಾರಿಗಳು ಪತ್ತೆಯಾದ ಚಿನ್ನಾಭರಣ ಮೂಲದ ವಿಚಾರಣೆ ನಡೆಸಿದ್ದಾರೆ. ಅಲ್ಲದೆ ಮನೆಯಲ್ಲಿ ಪತ್ತೆಯಾದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಇದೇ ವೇಳೆ ಹೆಚ್​. ನಾಗರಾಜ್ ಅವರ ಮೈಸೂರು ನಗರದ ನಿವಾಸದ ಮನೆ ಮತ್ತು ಭಾಮೈದುನನ ಮನೆ, ರಾಮನಗರ ಜಿಲ್ಲೆ ಮಾಗಡಿಯ ಸಹೋದರನ ಮನೆ ಹಾಗೂ ಮೈಸೂರು ಮಹಾನಗರ ಪಾಲಿಕೆ ಕಚೇರಿ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

acb-raid
ಎಸಿಬಿ ದಾಳಿ-2

ಇವರ ಮನೆಯಲ್ಲೂ ಕೆಜಿಗಟ್ಟಲೆ ಚಿನ್ನಾಭರಣ ಹಾಗೂ ಲಕ್ಷ ಲಕ್ಷ ಹಣ ಪತ್ತೆಯಾಗಿದೆ. 9 ಲಕ್ಷ ರೂ. ನಗದು ಹಾಗೂ 1.3 ಕೆ.ಜಿ ಚಿನ್ನ ಪತ್ತೆಯಾಗಿದ್ದು, ಈ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ತುಮಕೂರು/ಮೈಸೂರು/ಬೆಂಗಳೂರು: ಎಸಿಬಿ ಅಧಿಕಾರಿಗಳು ರಾಜ್ಯದ ವಿವಿಧೆಡೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಅಪಾರ ಪ್ರಮಾಣದ ಹಣ ಹಾಗೂ ಕೆಜಿಗಟ್ಟಲೆ ಚಿನ್ನಾಭರಣ ಪತ್ತೆಯಾಗಿದೆ. ತುಮಕೂರು, ರಾಮನಗರ ಹಾಗೂ ಮೈಸೂರಿನಲ್ಲಿ ದಾಳಿ ನಡೆದಿದೆ.

acb-raid
ಎಸಿಬಿ ದಾಳಿ-1

ಇಂದು ಬೆಳಗ್ಗೆ ಸರ್ಕಾರಿ ಹುದ್ದೆಯಲ್ಲಿರುವ ಎಂಎಸ್ಎನ್ ಬಾಬು ಹಾಗೂ ನಾಗರಾಜ್ ನಿವಾಸಗಳ ಮೇಲೆ ದಾಳಿ ನಡೆದಿದೆ. ಎಂಎಸ್ಎನ್ ಬಾಬು ಬಿಡಿಎನಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಯಾಗಿದ್ದಾರೆ. ನಾಗರಾಜ್ ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

acb-raid
ಪತ್ತೆಯಾದ ಚಿನ್ನಾಭರಣ

ತುಮಕೂರು ನಗರದ ಮಾರುತಿ ನಗರ ಬಡಾವಣೆಯಲ್ಲಿರುವ ಸರ್ಕಾರಿ ಅಧಿಕಾರಿ ಎಂ.ಎಸ್. ನಿರಂಜನ್ ಬಾಬು ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಸಾಕಷ್ಟು ದಾಖಲೆ ಪತ್ರಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅಮೃತ ವರ್ಷಿಣಿ ಹೆಸರಿನ ಮನೆ ಮೇಲೆ ದಾಳಿ ಮಾಡಿ ಕಂಪ್ಯೂಟರ್, ಪ್ರಿಂಟರ್, ದಾಖಲಾತಿ ಪತ್ರಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿರುವ ಇವರ ಫ್ಲಾಟ್​ ಮೇಲೂ ಅಧಿಕಾರಿಗಳು ತಲಾಷ್​ ನಡೆಸಿದ್ದಾರೆ.

ಎಸಿಬಿ ಭರ್ಜರಿ ಬೇಟೆ

ದಾಳಿ ವೇಳೆ ಇವರ ಮನೆಯಲ್ಲಿ 1.5 ಕೆಜಿ ಚಿನ್ನ ಪತ್ತೆಯಾಗಿದ್ದು, ಇದರ ಜೊತೆಗೆ ಐದು ಲಕ್ಷ ನಗದು ಸಹ ಪತ್ತೆಯಾಗಿದೆ. ಅಧಿಕಾರಿಗಳು ಪತ್ತೆಯಾದ ಚಿನ್ನಾಭರಣ ಮೂಲದ ವಿಚಾರಣೆ ನಡೆಸಿದ್ದಾರೆ. ಅಲ್ಲದೆ ಮನೆಯಲ್ಲಿ ಪತ್ತೆಯಾದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಇದೇ ವೇಳೆ ಹೆಚ್​. ನಾಗರಾಜ್ ಅವರ ಮೈಸೂರು ನಗರದ ನಿವಾಸದ ಮನೆ ಮತ್ತು ಭಾಮೈದುನನ ಮನೆ, ರಾಮನಗರ ಜಿಲ್ಲೆ ಮಾಗಡಿಯ ಸಹೋದರನ ಮನೆ ಹಾಗೂ ಮೈಸೂರು ಮಹಾನಗರ ಪಾಲಿಕೆ ಕಚೇರಿ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

acb-raid
ಎಸಿಬಿ ದಾಳಿ-2

ಇವರ ಮನೆಯಲ್ಲೂ ಕೆಜಿಗಟ್ಟಲೆ ಚಿನ್ನಾಭರಣ ಹಾಗೂ ಲಕ್ಷ ಲಕ್ಷ ಹಣ ಪತ್ತೆಯಾಗಿದೆ. 9 ಲಕ್ಷ ರೂ. ನಗದು ಹಾಗೂ 1.3 ಕೆ.ಜಿ ಚಿನ್ನ ಪತ್ತೆಯಾಗಿದ್ದು, ಈ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Last Updated : Aug 26, 2020, 5:53 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.