ತುಮಕೂರು: ಪಾವಗಡದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿನ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆ ಪೋಷಕರು ಇಂದು ಶಾಲೆಯೆದುರು ಬಂದು ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳದಲ್ಲಿದ್ದ ಪೊಲೀಸರು ಪೋಷಕರನ್ನು ಸಮಾಧಾನ ಪಡಿಸಿದ್ದಾರೆ. ಘಟನೆ ಕುರಿತಂತೆ ಸ್ಪಷ್ಟನೆ ನೀಡಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಜಂಟಿ ನಿರ್ದೇಶಕ ಪ್ರೇಮನಾಥ್, ವಸತಿ ಶಾಲೆಯಲ್ಲಿ ಪ್ರಾಂಶುಪಾಲ ಧನಂಜಯ ಎಂಬುವರು ಮಕ್ಕಳಿಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತಂತೆ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಮೇಲಾಧಿಕಾರಿಗಳಿಗೆ ಮನವಿ ನೀಡುವುದಾಗಿ ತಿಳಿಸಿದ್ದಾರೆ.