ETV Bharat / state

ಶಿರಾ ಉಪಕದನ: ಹಣ ಹಂಚಿಕೆ ಆರೋಪದ ಮತ್ತೊಂದು ವಿಡಿಯೋ ವೈರಲ್

ಶಿರಾ ಉಪಚುನಾವಣೆಗೆ ಸಂಬಂಧಿಸಿದಂತೆ ಹಣ ಹಂಚುತ್ತಿರುವ ಮತ್ತೊಂದು ವಿಡಿಯೋ ವೈರಲ್ ಆಗಿದೆ. ಶಿರಾ ವಿಧಾನಸಭೆ ಕ್ಷೇತ್ರದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣೆ ಅಕ್ರಮದಲ್ಲಿ ಬಿಜೆಪಿ ಮುಖಂಡರು ಹಾಗೂ ಹಾಸನ ಶಾಸಕ ಪ್ರೀತಂ ಗೌಡ ನೇರವಾಗಿ ಭಾಗಿಯಾಗಿದ್ದು ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರತಿನಿಧಿ ರಘು ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

author img

By

Published : Oct 27, 2020, 3:30 PM IST

Updated : Oct 27, 2020, 3:35 PM IST

ಹಣ ಹಂಚಿಕೆ ಆರೋಪದ ಮತ್ತೊಂದು ವಿಡಿಯೋ ವೈರಲ್…

ತುಮಕೂರು: ಶಿರಾ ಉಪಚುನಾವಣೆಗೆ ಸಂಬಂಧಿಸಿದಂತೆ ಹಣ ಹಂಚುತ್ತಿರುವ ಮತ್ತೊಂದು ವಿಡಿಯೋ ವೈರಲ್ ಆಗಿದೆ. ಗೋಮಾರದಹಳ್ಳಿಯಲ್ಲಿ ಮೂವರು ಮಹಿಳೆಯರು ರಸ್ತೆಯಲ್ಲಿಯೇ ಹಣವನ್ನು ಹಂಚಿಕೊಳ್ಳುತ್ತಿರುವ ದೃಶ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಹಣ ಹಂಚಿಕೆ ಆರೋಪದ ಮತ್ತೊಂದು ವಿಡಿಯೋ ವೈರಲ್

ಹಾಸನ ಶಾಸಕ ಪ್ರೀತಂ ಗೌಡ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ:

ಶಿರಾ ವಿಧಾನಸಭೆ ಕ್ಷೇತ್ರದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣೆ ಅಕ್ರಮದಲ್ಲಿ ಬಿಜೆಪಿ ಮುಖಂಡರು ಹಾಗೂ ಹಾಸನ ಶಾಸಕ ಪ್ರೀತಂ ಗೌಡ ನೇರವಾಗಿ ಭಾಗಿಯಾಗಿದ್ದು, ಕೂಡಲೇ ಅವರ ಗೂಂಡಾ ಪಡೆಯನ್ನು ಉಪಚುನಾವಣೆ ನಡೆಯುತ್ತಿರುವ ಶಿರಾ ಕ್ಷೇತ್ರದಿಂದ ಹೊರಹಾಕಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರತಿನಿಧಿ ರಘು ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ಹಾಸನ ಶಾಸಕ ಪ್ರೀತಂ ಗೌಡ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಆಗ್ರ
ಹಾಸನ ಶಾಸಕ ಪ್ರೀತಂ ಗೌಡ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಆಗ್ರ

ನಿನ್ನೆಯಿಂದ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಪರವಾಗಿ ಕ್ಷೇತ್ರದಲ್ಲಿ ಅನೇಕ ಬಿಜೆಪಿ ಮುಖಂಡರು ಎನ್ನಲಾದ ಕೆಲವರು ಹಣ, ಸೀರೆ, ಮಾಂಸ ವಿತರಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅದರಲ್ಲಿಯೂ ಹಾಸನ ಶಾಸಕ ಪ್ರೀತಂ ಗೌಡ, ಹಾಸನ, ಬೆಂಗಳೂರು, ಮಂಗಳೂರು ಸೇರಿಂತೆ ವಿವಿಧೆಡೆಯಿಂದ ಗೂಂಡಾಗಳನ್ನು ಕರೆಸಿಕೊಂಡು ಗೂಂಡಾ ವರ್ತನೆ ತೋರುತ್ತಿದ್ದಾರೆ. ಚುನಾವಣಾ ಅಕ್ರಮದಲ್ಲಿ ತೊಡಗಿದ್ದಾರೆ. ಚುನಾವಣಾ ನೀತಿ ಸಂಹಿತೆಯನ್ನು ನೇರವಾಗಿ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್​ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ತುಮಕೂರು: ಶಿರಾ ಉಪಚುನಾವಣೆಗೆ ಸಂಬಂಧಿಸಿದಂತೆ ಹಣ ಹಂಚುತ್ತಿರುವ ಮತ್ತೊಂದು ವಿಡಿಯೋ ವೈರಲ್ ಆಗಿದೆ. ಗೋಮಾರದಹಳ್ಳಿಯಲ್ಲಿ ಮೂವರು ಮಹಿಳೆಯರು ರಸ್ತೆಯಲ್ಲಿಯೇ ಹಣವನ್ನು ಹಂಚಿಕೊಳ್ಳುತ್ತಿರುವ ದೃಶ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಹಣ ಹಂಚಿಕೆ ಆರೋಪದ ಮತ್ತೊಂದು ವಿಡಿಯೋ ವೈರಲ್

ಹಾಸನ ಶಾಸಕ ಪ್ರೀತಂ ಗೌಡ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಆಗ್ರಹ:

ಶಿರಾ ವಿಧಾನಸಭೆ ಕ್ಷೇತ್ರದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣೆ ಅಕ್ರಮದಲ್ಲಿ ಬಿಜೆಪಿ ಮುಖಂಡರು ಹಾಗೂ ಹಾಸನ ಶಾಸಕ ಪ್ರೀತಂ ಗೌಡ ನೇರವಾಗಿ ಭಾಗಿಯಾಗಿದ್ದು, ಕೂಡಲೇ ಅವರ ಗೂಂಡಾ ಪಡೆಯನ್ನು ಉಪಚುನಾವಣೆ ನಡೆಯುತ್ತಿರುವ ಶಿರಾ ಕ್ಷೇತ್ರದಿಂದ ಹೊರಹಾಕಿ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರತಿನಿಧಿ ರಘು ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ಹಾಸನ ಶಾಸಕ ಪ್ರೀತಂ ಗೌಡ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಆಗ್ರ
ಹಾಸನ ಶಾಸಕ ಪ್ರೀತಂ ಗೌಡ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್ ಆಗ್ರ

ನಿನ್ನೆಯಿಂದ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಪರವಾಗಿ ಕ್ಷೇತ್ರದಲ್ಲಿ ಅನೇಕ ಬಿಜೆಪಿ ಮುಖಂಡರು ಎನ್ನಲಾದ ಕೆಲವರು ಹಣ, ಸೀರೆ, ಮಾಂಸ ವಿತರಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅದರಲ್ಲಿಯೂ ಹಾಸನ ಶಾಸಕ ಪ್ರೀತಂ ಗೌಡ, ಹಾಸನ, ಬೆಂಗಳೂರು, ಮಂಗಳೂರು ಸೇರಿಂತೆ ವಿವಿಧೆಡೆಯಿಂದ ಗೂಂಡಾಗಳನ್ನು ಕರೆಸಿಕೊಂಡು ಗೂಂಡಾ ವರ್ತನೆ ತೋರುತ್ತಿದ್ದಾರೆ. ಚುನಾವಣಾ ಅಕ್ರಮದಲ್ಲಿ ತೊಡಗಿದ್ದಾರೆ. ಚುನಾವಣಾ ನೀತಿ ಸಂಹಿತೆಯನ್ನು ನೇರವಾಗಿ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್​ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

Last Updated : Oct 27, 2020, 3:35 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.