ETV Bharat / state

ಕರಡಿ ದಾಳಿ: ಗಂಭೀರವಾಗಿ ಗಾಯಗೊಂಡ ರೈತ - Bear Attack news

ಕರಡಿಯೊಂದು ರೈತನ ಮೇಲೆ ದಾಳಿ ಮಾಡಿ, ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಮುದ್ದಾಪುರ ಗ್ರಾಮದಲ್ಲಿ ನಡೆದಿದೆ.

ಕರಡಿ ದಾಳಿ
ಕರಡಿ ದಾಳಿ
author img

By

Published : Aug 31, 2020, 11:02 PM IST

ತುಮಕೂರು: ಕರಡಿಯೊಂದು ರೈತರೊಬ್ಬರ ಕಿವಿಯನ್ನು ಕಿತ್ತು ಹಾಕಿ, ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಮುದ್ದಾಪುರ ಗ್ರಾಮದಲ್ಲಿ ನಡೆದಿದೆ.

ಕರಡಿಯನ್ನು ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ

ರೈತ ಮಹಾದೇವಯ್ಯ ಎಂಬುವರೇ ಕರಡಿ ದಾಳಿಗೆ ಒಳಗಾದವರು. ಇಂದು ಮುಂಜಾನೆ ಮಹಾದೇವಯ್ಯ ಹೋಗುತ್ತಿದ್ದಾಗ ಕರಡಿ ದಾಳಿ ಮಾಡಿದೆ. ಬಳಿಕ ರೈತ ಜನರಿರುವ ಪ್ರದೇಶಕ್ಕೆ ತೆರಳಿದ ನಂತರ ಕರಡಿ ಗಾಬರಿಗೊಂಡು ಪರಾರಿಯಾಗಿದೆ.

ಕರಡಿಯನ್ನು ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ
ಕರಡಿಯನ್ನು ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ

ತೀವ್ರವಾಗಿ ಗಾಯಗೊಂಡಿದ್ದ ಮಹಾದೇವಯ್ಯ ಅವರನ್ನು ಚಿಕಿತ್ಸೆಗಾಗಿ ಗುಬ್ಬಿ ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಕರಡಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ತುಮಕೂರು: ಕರಡಿಯೊಂದು ರೈತರೊಬ್ಬರ ಕಿವಿಯನ್ನು ಕಿತ್ತು ಹಾಕಿ, ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಮುದ್ದಾಪುರ ಗ್ರಾಮದಲ್ಲಿ ನಡೆದಿದೆ.

ಕರಡಿಯನ್ನು ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ

ರೈತ ಮಹಾದೇವಯ್ಯ ಎಂಬುವರೇ ಕರಡಿ ದಾಳಿಗೆ ಒಳಗಾದವರು. ಇಂದು ಮುಂಜಾನೆ ಮಹಾದೇವಯ್ಯ ಹೋಗುತ್ತಿದ್ದಾಗ ಕರಡಿ ದಾಳಿ ಮಾಡಿದೆ. ಬಳಿಕ ರೈತ ಜನರಿರುವ ಪ್ರದೇಶಕ್ಕೆ ತೆರಳಿದ ನಂತರ ಕರಡಿ ಗಾಬರಿಗೊಂಡು ಪರಾರಿಯಾಗಿದೆ.

ಕರಡಿಯನ್ನು ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ
ಕರಡಿಯನ್ನು ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ

ತೀವ್ರವಾಗಿ ಗಾಯಗೊಂಡಿದ್ದ ಮಹಾದೇವಯ್ಯ ಅವರನ್ನು ಚಿಕಿತ್ಸೆಗಾಗಿ ಗುಬ್ಬಿ ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಕರಡಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.