ETV Bharat / state

ಉಪ ಚುನಾವಣೆ ಬಿಜೆಪಿಗೆ ಭರ್ಜರಿ ಜಯ : ಕಾರ್ಯಕರ್ತರ ಸಂಭ್ರಮಾಚರಣೆ

author img

By

Published : Dec 9, 2019, 9:12 PM IST

ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದರಿಂದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

BJP celebration
ಬಿಜೆಪಿ ವಿಜಯೋತ್ಸವ

ಮಂಗಳೂರು/ತುಮಕೂರು/ಕೊಡಗು : ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದರಿಂದ ಕಡಬ, ಮಂಗಳೂರು, ತುಮಕೂರು, ಕೊಡಗಿನಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

ಬಿಜೆಪಿ ವಿಜಯೋತ್ಸವ

ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ವಿಜಯೋತ್ಸವ ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಭರತ್ ಶೆಟ್ಟಿ ಅವರು ಈ ಗೆಲುವು ನಿರೀಕ್ಷಿತವಾಗಿತ್ತು‌. ಸುಭದ್ರ ಸರ್ಕಾರ ನೀಡಲು ಇನ್ನು ಸಾಧ್ಯವಾಗಲಿದೆ. ಜನಪರ ಅಭಿವೃದ್ಧಿ ಕೆಲಸ ಮಾಡಲು ಶಕ್ತಿ ಸಿಕ್ಕಿದಂತಾಗಿದೆ ಎಂದರು.

ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದರಿಂದ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ನಗರ ಶಾಸಕ ಜ್ಯೋತಿಗಣೇಶ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ, ಪರಸ್ಪರ ಸಿಹಿ ಹಂಚಿ ಸಂತಸದ ಗೆಲುವಿನ ನಗೆ ಬೀರಿದರು.

ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚಿ ಬಿಜೆಪಿ ಪರ ಘೋಷಣೆ ಕೂಗಿ ವಿಜಯೋತ್ಸವ ಆಚರಿಸಿದ್ದಾರೆ.

ಮಂಗಳೂರು/ತುಮಕೂರು/ಕೊಡಗು : ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದರಿಂದ ಕಡಬ, ಮಂಗಳೂರು, ತುಮಕೂರು, ಕೊಡಗಿನಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

ಬಿಜೆಪಿ ವಿಜಯೋತ್ಸವ

ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿ ಮುಂಭಾಗದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ವಿಜಯೋತ್ಸವ ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಭರತ್ ಶೆಟ್ಟಿ ಅವರು ಈ ಗೆಲುವು ನಿರೀಕ್ಷಿತವಾಗಿತ್ತು‌. ಸುಭದ್ರ ಸರ್ಕಾರ ನೀಡಲು ಇನ್ನು ಸಾಧ್ಯವಾಗಲಿದೆ. ಜನಪರ ಅಭಿವೃದ್ಧಿ ಕೆಲಸ ಮಾಡಲು ಶಕ್ತಿ ಸಿಕ್ಕಿದಂತಾಗಿದೆ ಎಂದರು.

ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದರಿಂದ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ನಗರ ಶಾಸಕ ಜ್ಯೋತಿಗಣೇಶ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ, ಪರಸ್ಪರ ಸಿಹಿ ಹಂಚಿ ಸಂತಸದ ಗೆಲುವಿನ ನಗೆ ಬೀರಿದರು.

ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ಹಂಚಿ ಬಿಜೆಪಿ ಪರ ಘೋಷಣೆ ಕೂಗಿ ವಿಜಯೋತ್ಸವ ಆಚರಿಸಿದ್ದಾರೆ.

Intro:ಕಡಬ

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು
ಕಡಬದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹರ್ಷಾಚರಣೆ.Body:ಕರ್ನಾಟಕದಲ್ಲಿ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದರಿಂದ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಮಿತಿಯ ಕೃಷ್ಣ ಶೆಟ್ಟಿ ಕಡಬ ಮಾತನಾಡಿ, ಈ ರಾಜ್ಯದಲ್ಲಿ ಸುಭದ್ರ ಸರಕಾರ ನೀಡಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂಬ ಸಂದೇಶ ನೀಡಿ ಆಡಳಿತ ನಡೆಸಲು ಅವಕಾಶ ನೀಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಕಡಬ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಾಯಿಲ್, ಕಾರ್ಯದರ್ಶಿ ಪ್ರಕಾಶ್ ಎನ್.ಕೆ, ಅಲ್ಪ ಸಂಖ್ಯಾತ ಮೊರ್ಛದ ಅಧ್ಯಕ್ಷ ಫಯಾಝ್ ಕೆನರಾ, ತಾ.ಪಂ. ಸದಸ್ಯೆ ಪಿ.ವೈ. ಕುಸುಮಾ, ಬಿಜೆಪಿ ಪ್ರಮುಖರಾದ ಸತೀಶ್ ನಾಯಕ್, ಅಶೋಕ್ ಕುಮಾರ್ ಪಿ, ಶಿವಪ್ರಸಾದ್ ರೈ ಮೈಲೇರಿ, ಕಿಶಾನ್ ಕುಮಾರ್ ರೈ, ಆದಂ ಕುಂಡೋಳಿ, ಕೃಷ್ಣಪ್ಪ ಮಡಿವಾಳ, ಮಧುಸೂದನ್ ಕೊಂಬಾರು ಹರ್ಷಾಚರಣೆಯಲ್ಲಿ ಪಾಲ್ಗೋಂಡಿದ್ದರು.Conclusion:ಬೈಟ್:- ಕೃಷ್ಣ ಶೆಟ್ಟಿ ಕಡಬ, ಬಿಜೆಪಿ ಮುಖಂಡರು ಕಡಬ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.