ETV Bharat / state

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಬಿ.ವೈ.ವಿಜಯೇಂದ್ರ

author img

By

Published : Oct 24, 2020, 3:45 PM IST

ಸಿದ್ಧಗಂಗಾ ಮಠವು ನಮಗೆ ಒಂದು ರೀತಿ ಸ್ಫೂರ್ತಿ ಹಾಗೂ ಶಕ್ತಿ ಕೊಡುವಂತಹ ಕ್ಷೇತ್ರವಾಗಿದೆ. ಈ ಭಾಗಕ್ಕೆ ಬಂದರೆ ನಾವು ಮಠಕ್ಕೆ ಭೇಟಿ ಕೊಟ್ಟು ಶ್ರೀಗಳ ದರ್ಶನ ಮಾಡಿ ಹೋಗುತ್ತೇವೆ. ರಾಜಕಾರಣಕ್ಕೂ ಈ ಭೇಟಿಗೂ ಯಾವುದೇ ಸಂಬಂಧವಿಲ್ಲ ಎಂದು ಭೇಟಿ ವೇಳೆ ವಿಜಯೇಂದ್ರ ತಿಳಿಸಿದ್ದಾರೆ.

by-vijayendra-visited-the-siddhaganga-matt
ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಬಿ ವೈ ವಿಜಯೇಂದ್ರ

ತುಮಕೂರು: ಇಲ್ಲಿನ ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ಗದ್ದಿಗೆ ದರ್ಶನ ಪಡೆದರು. ನಂತರ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ನಂತರ ಮಾತನಾಡಿದ ಅವರು, ಶಿರಾ ವಿಧಾನಸಭಾ ಕ್ಷೇತ್ರದ ಚುನಾವಣೆ ಪಕ್ಷಕ್ಕೆ ಸವಾಲಿನದ್ದಾಗಿದೆ. ಪಕ್ಷದ ಕಾರ್ಯಕರ್ತರು ಶಕ್ತಿ ಮೀರಿ ಕೆಲಸ ಮಾಡುತ್ತಿದ್ದು, ಇದೊಂದು ಐತಿಹಾಸಿಕ ಗೆಲುವಾಗಲಿದೆ ಎಂದರು. ಅದೇ ರೀತಿ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಚಿದಾನಂದಗೌಡ ಗೆಲುವು ಕೂಡ ನಿಶ್ಚಿತ ಎಂದರು.

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಬಿ ವೈ ವಿಜಯೇಂದ್ರ

ಸಿದ್ಧಗಂಗಾ ಮಠವು ನಮಗೆ ಒಂದು ರೀತಿ ಸ್ಫೂರ್ತಿ ಹಾಗೂ ಶಕ್ತಿಯನ್ನು ಕೊಡುವಂತಹ ಕ್ಷೇತ್ರವಾಗಿದೆ. ಈ ಭಾಗಕ್ಕೆ ಬಂದರೆ ನಾವು ಮಠಕ್ಕೆ ಭೇಟಿ ಕೊಟ್ಟು ಶ್ರೀಗಳ ದರ್ಶನ ಮಾಡಿ ಹೋಗುತ್ತೇವೆ. ರಾಜಕಾರಣಕ್ಕೂ ಈ ಭೇಟಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಬಿಜೆಪಿ ಚುನಾವಣೆ ಎದುರಿಸುತ್ತಿದೆ. ಬಿಜೆಪಿ ಯುವ ಮೋರ್ಚಾ ಸೇರಿದಂತೆ ಎಲ್ಲಾ ಮೋರ್ಚಾಗಳು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರದಲ್ಲಿ ತೊಡಗಿವೆ ಎಂದು ತಿಳಿಸಿದರು.

ತುಮಕೂರು: ಇಲ್ಲಿನ ಸಿದ್ಧಗಂಗಾ ಮಠಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿ ಅವರ ಗದ್ದಿಗೆ ದರ್ಶನ ಪಡೆದರು. ನಂತರ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ನಂತರ ಮಾತನಾಡಿದ ಅವರು, ಶಿರಾ ವಿಧಾನಸಭಾ ಕ್ಷೇತ್ರದ ಚುನಾವಣೆ ಪಕ್ಷಕ್ಕೆ ಸವಾಲಿನದ್ದಾಗಿದೆ. ಪಕ್ಷದ ಕಾರ್ಯಕರ್ತರು ಶಕ್ತಿ ಮೀರಿ ಕೆಲಸ ಮಾಡುತ್ತಿದ್ದು, ಇದೊಂದು ಐತಿಹಾಸಿಕ ಗೆಲುವಾಗಲಿದೆ ಎಂದರು. ಅದೇ ರೀತಿ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಚಿದಾನಂದಗೌಡ ಗೆಲುವು ಕೂಡ ನಿಶ್ಚಿತ ಎಂದರು.

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಬಿ ವೈ ವಿಜಯೇಂದ್ರ

ಸಿದ್ಧಗಂಗಾ ಮಠವು ನಮಗೆ ಒಂದು ರೀತಿ ಸ್ಫೂರ್ತಿ ಹಾಗೂ ಶಕ್ತಿಯನ್ನು ಕೊಡುವಂತಹ ಕ್ಷೇತ್ರವಾಗಿದೆ. ಈ ಭಾಗಕ್ಕೆ ಬಂದರೆ ನಾವು ಮಠಕ್ಕೆ ಭೇಟಿ ಕೊಟ್ಟು ಶ್ರೀಗಳ ದರ್ಶನ ಮಾಡಿ ಹೋಗುತ್ತೇವೆ. ರಾಜಕಾರಣಕ್ಕೂ ಈ ಭೇಟಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.

ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಬಿಜೆಪಿ ಚುನಾವಣೆ ಎದುರಿಸುತ್ತಿದೆ. ಬಿಜೆಪಿ ಯುವ ಮೋರ್ಚಾ ಸೇರಿದಂತೆ ಎಲ್ಲಾ ಮೋರ್ಚಾಗಳು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರದಲ್ಲಿ ತೊಡಗಿವೆ ಎಂದು ತಿಳಿಸಿದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.