ತುಮಕೂರು/ಪಾವಗಡ: ವೈಕುಂಠ ಏಕದಾಶಿಯ ಪ್ರಯುಕ್ತ ತುಮಕೂರು ಜಿಲ್ಲೆಯ ಪ್ರಮುಖ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಅಲಂಕಾರ ನೆರವೇರಿಸಲಾಗಿತ್ತು. ನಗರರದ ಬಟವಾಡಿ ಪ್ರದೇಶದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇಗುಲದ ಮೂರ್ತಿಗೆ ತಿರುಪತಿಯಿಂದ ಬಂದಿದ್ದ ದೇವಸ್ಥಾನದ ಸಿಬ್ಬಂದಿ ವಿಶೇಷ ಅಲಂಕಾರ ನೆರವೇರಿಸಿದರು.
ಪಾವಗಡ ಪಟ್ಟಣದ ಬಜಂತ್ರಿ ಬೀದಿಯಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಸಹ ವಿಶೇಷ ಪೂಜಾ ಕಾರ್ಯಕ್ರಮಗಳು ಏರ್ಪಡಿಸಿದ್ದು, ಸಾವಿರಾರು ಭಕ್ತರು ದೇವರ ಕೃಪೆಗೆ ಪಾತ್ರರಾದರು. ಪುರಸಭಾ ಮಾಜಿ ಸದಸ್ಯರಾದ ಜಿ.ಎ. ವೆಂಕಟೇಶ್ ಮಾತನಾಡಿ, 'ನೂರಾರು ವರ್ಷಗಳ ಇತಿಹಾಸ ಪ್ರಸಿದ್ಧ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ಹಮ್ಮಿಕೊಂಡು ಬರಲಾಗುತ್ತಿದೆ ಎಂದರು.
ಇನ್ನು ಏಕಾದಶಿಯಂದು ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದು, ಹಲವು ವರ್ಷಗಳಿಂದ ಏಕಾದಶಿಯಂದು ದೇವಾಲಯಕ್ಕೆ ಬರುವ ಭಕ್ತರಿಗೆ ಉಚಿತವಾಗಿ ಲಾಡು ವಿತರಿಸಲಾಯಿತು.