ETV Bharat / state

ಕೇಂದ್ರ ಗೃಹ ಸಚಿವ ಅಮಿತ್ ಶಾ ಈಗಾಗಲೇ ಸಿಎಂ ನೇತೃತ್ವದಲ್ಲಿ ಚುನಾವಣೆ ಎಂದು ಹೇಳಿದ್ದಾರೆ‌: ಬೊಮ್ಮಾಯಿ

author img

By

Published : Jan 21, 2023, 8:02 PM IST

ಕೇವಲ ಮುಖ್ಯಮಂತ್ರಿ ಮಾತ್ರವಲ್ಲ ಇಡೀ ಟೀಂ ಮತ್ತು ಪಕ್ಷದ ನೇತೃತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ - ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ 4 ನೇ ಪುಣ್ಯ ಸ್ಮರಣೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿ.

CM Basavaraj Bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ತುಮಕೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಈಗಾಗಲೇ ಸಿಎಂ ನೇತೃತ್ವದಲ್ಲಿ ಚುನಾವಣೆ ಎಂದು ಹೇಳಿದ್ದಾರೆ‌. ಕೇವಲ ಮುಖ್ಯಮಂತ್ರಿ ಮಾತ್ರವಲ್ಲ, ಇಡೀ ಟೀಂ ಮತ್ತು ಪಕ್ಷದ ನೇತೃತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ, ಈ ಬಾರಿ 130 ಸೀಟುಗಳನ್ನ ಗೆದ್ದು ಸ್ಪಷ್ಟ ಬಹುಮತ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ನಮಸ್ಕಾರ ಮಾಡಿ, ಆಶೀರ್ವಾದ ಪಡೆದಿದ್ದೇನೆ. ದಾಸೋಹದ ದಿನ ಇಡೀ ರಾಜ್ಯದಲ್ಲಿ ಆಚರಣೆ ಆಗುತ್ತೆ. ವಿಭಿನ್ನ, ವಿಶೇಷವಾಗಿ ಆಚರಿಸೋ ಬಗ್ಗೆ ಚರ್ಚೆ ಮಾಡಲಾಗುತ್ತೆ ಎಂದರು. ಫೆಬ್ರವರಿ ತಿಂಗಳಲ್ಲಿ ಅಧಿಕೃತವಾಗಿ ಸರ್ಕಾರದಿಂದ ಆಚರಣೆ ಮಾಡುತ್ತೇವೆ. ಈ ವೇಳೆ ಸಾರ್ವತ್ರಿಕ ರಜೆ ಇರೋದಿಲ್ಲಾ ಎಂದು ಸ್ಪಷ್ಟಪಡಿಸಿದರು.

ಶಿವಕುಮಾರ ಶ್ರೀಗಳ ಹುಟ್ಟೂರಲ್ಲಿ ಪುತ್ಥಳಿ ನಿರ್ಮಾಣ ಕಾಮಗಾರಿ ಸ್ಥಗಿತ ವಿಚಾರ ಕುರಿತು ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಮೊನ್ನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಶೀಘ್ರದಲ್ಲಿ ಕಾಮಗಾರಿಯನ್ನು ಮತ್ತೆ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.

ಸಾಮಾಜಿಕ ಕ್ರಾಂತಿಯನ್ನುಂಟು ಮಾಡುವ ಕಾಯಕದಲ್ಲಿ ಮಠಗಳು ಮುಂಚೂಣಿಯಲ್ಲಿರಬೇಕು: ಪರಮಪೂಜ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ 4 ನೇ ಪುಣ್ಯಸ್ಮರಣೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಬೊಮ್ಮಾಯಿ, ಬಸವಣ್ಣನವರ ತತ್ವಾದರ್ಶಗಳ ಬಗ್ಗೆ ಚಿಂತನೆ ಅತ್ಯಗತ್ಯವಾಗಿದ್ದು, ಅಸಮಾನತೆ, ಲಿಂಗಭೇದ, ಮೇಲುಕೀಳುಗಳನ್ನು ಹೋಗಲಾಡಿಸಲು ನಾವೇನು ಮಾಡಬೇಕು ಎಂಬ ಬಗ್ಗೆ ಚಿಂತಿಸಬೇಕು. ಸಾಮಾಜಿಕ ಕ್ರಾಂತಿಯನ್ನುಂಟು ಮಾಡುವ ಕಾಯಕದಲ್ಲಿ ಮಠಗಳು ಮುಂಚೂಣಿಯಲ್ಲಿರಬೇಕು ಎಂದು ತಿಳಿಸಿದರು.

ಬದುಕಿನಲ್ಲಿ ಮುಗ್ಧತೆಯನ್ನು ಸದಾ ಕಾಯ್ದುಕೊಂಡು ಆತ್ಮಸಾಕ್ಷಿಯಿಂದ ನಡೆದುಕೊಳ್ಳುವುದು ಬಹಳ ಕಷ್ಟ. ಸತ್ಯವೆಂಬ ಸಾತ್ವಿಕ ವಿಚಾರವನ್ನಿಟ್ಟುಕೊಂಡು, ಲೌಕಿಕ ಲಾಭ ನಷ್ಟಗಳಿಂದ ದೂರವಿರುವವರು ಮಾತ್ರ ಆತ್ಮಸಾಕ್ಷಿಯಿಂದ ನಡೆದುಕೊಳ್ಳಲು ಸಾಧ್ಯ. ತಮ್ಮ ಬದುಕಿನುದ್ದಕ್ಕೂ ಮುಗ್ಧತೆ ಹಾಗೂ ಆತ್ಮಸಾಕ್ಷಿಯಂತೆ ನಡೆದುಕೊಂಡವರೇ ನಮ್ಮ ನಡೆದಾಡುವ ದೇವರಾದ ಶಿವಕುಮಾರ ಸ್ವಾಮೀಜಿಗಳು. ಪ್ರತಿನಿತ್ಯ ಪರೀಕ್ಷೆಗೆ ಒಳಪಟ್ಟು ಆತ್ಮಬಲ ಹೆಚ್ಚುವುದರಿಂದ ಪ್ರಕಾಶಮಯವಾದ ಆತ್ಮಬಲ ದೊರೆಯುತ್ತದೆ ಎಂದರು.

ಶಿವಕುಮಾರ ಸ್ವಾಮೀಜಿ ತಮ್ಮ ಜ್ಞಾನವನ್ನು ಲೋಕ ಕಲ್ಯಾಣಕ್ಕಾಗಿ ಅರ್ಪಿಸಿದ್ದಾರೆ:ಸ್ವಾಮಿ ವಿವೇಕಾನಂದರು ಅತಿ ಸಣ್ಣ ವಯಸ್ಸಿನಲ್ಲಿ ಮುಕ್ತಿಮಾರ್ಗವನ್ನು ಕಂಡುಕೊಂಡವರು. ಅವರ ಗುರು ಪರಮಹಂಸರು ಸಾಧನೆ ಒಬ್ಬರ ಸ್ವತ್ತಲ್ಲ. ನಿನ್ನ ಸಾಧನೆಯಿಂದ ಸಾವಿರಾರು ಜನ ಬೆಳಕು ಕಾಣುವಂತಾಗಬೇಕೆಂದು ಬೋಧಿಸಿದ್ದರ ಪರಿಣಾಮ ಸ್ವಾಮಿವಿವೇಕಾನಂದರು ವಿಶ್ವಗುರುವಾದರು. ಅದೇ ರೀತಿಯಲ್ಲಿ ಶಿವಕುಮಾರ ಸ್ವಾಮೀಜಿ ತಮ್ಮ ಜ್ಞಾನವನ್ನು ಲೋಕ ಕಲ್ಯಾಣಕ್ಕಾಗಿ ಅರ್ಪಿಸಿದ್ದಾರೆ. ನನಗಾಗಿ ದುಡಿಯುವುದು ಕರ್ತವ್ಯ ಆದರೆ ಲೋಕ ಕಲ್ಯಾಣಕ್ಕಾಗಿ ಸಮರ್ಪಿಸುವುದು ಕಾಯಕ ಎಂದರು.

ಶಿವಕುಮಾರ ಸ್ವಾಮೀಜಿಗಳು ತ್ರಿವಿಧ ದಾಸೋಹಿಗಳು: ಶಿವಕುಮಾರ ಸ್ವಾಮೀಜಿಗಳು ತ್ರಿವಿಧ ದಾಸೋಹಿಗಳು, ಕಾಯಕ ಯೋಗಿಗಳಾಗಿದ್ದರು. ಬಡ ಮಕ್ಕಳು ಶ್ರೀ ಕ್ಷೇತ್ರಕ್ಕೆ ಬಂದು ಅನ್ನ, ಆರೋಗ್ಯ, ವಿದ್ಯೆ, ಆಶ್ರಯ ಎಲ್ಲವನ್ನೂ ಪಡೆಯುತ್ತಿದ್ದಾರೆ. ಇದರೊಂದಿಗೆ ಸಂಸ್ಕಾರ, ಸಂಸ್ಕೃತಿಯನ್ನು ಸಹ ಇಲ್ಲಿ ಕಲಿಸಲಾಗುತ್ತಿದೆ. ಭಕ್ತರೇ ಮಠದ ಆಸ್ತಿ ಹಾಗೂ ಪರಮಾತ್ಮನೇ ಅಕ್ಷಯಪಾತ್ರೆ, ಎಲ್ಲ ಸೇವಾ ಕಾರ್ಯಗಳಿಗೆ ಶರಣರು, ದೀನದಲಿತರೇ ಒಡೆಯರು ಎಂದು ಶಿವಕುಮಾರ ಸ್ವಾಮೀಜಿಗಳು ನಂಬಿದವರು. ಉದಾತ್ತ ಚಿಂತನೆಯ ಫಲವಾಗಿ ತ್ರಿವಿಧ ದಾಸೋಹ ಕ್ಷೇತ್ರದಲ್ಲಿ ನಡೆಯುತ್ತಿದೆ ಎಂದರು.

ತೆಲಂಗಾಣ ಕೆಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿ, ಕಾಂಗ್ರೆಸ್​ ಶಾಸಕ ಜಮೀರ್​ ಅಹ್ಮದ್​ ಅವರಿಗೆ ಆಫರ್ ಕೊಟ್ಟಿದ್ದಾರೆ ಎನ್ನಲಾದ ವಿಚಾರವಾಗಿ ಮಾತನಾಡಿದ ಸಿಎಂ ಬೊಮ್ಮಾಯಿ, ಆ ಬಗ್ಗೆ ಕಾಂಗ್ರೆಸ್ ನವರೇ ಆಪಾದನೆ ಮಾಡಿದ್ದಾರೆ. ನಿಜವಾಗಿ ಏನಿದೆ ಅನ್ನೋದು ಅವರೇ ಸ್ಪಷ್ಟಪಡಿಸಬೇಕಿದೆ. ಬೆಂಕಿ ಇಲ್ಲದ ಹೊಗೆ ಆಡಲ್ಲ ಎಂದು ಹೇಳಿದರು.

ಇನ್ನು, ಸಮಾರಂಭದಲ್ಲಿ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಸಚಿವರಾದ ವಿ.ಸೋಮಣ್ಣ, ಆರಗ ಜ್ಞಾನೇಂದ್ರ, ಜೆ.ಸಿ. ಮಾಧುಸ್ವಾಮಿ, ಎಸ್.ಟಿ. ಸೋಮಶೇಖರ್, ಸಂಸದ ಭಗವಂತ ಖೂಬಾ, ಭಾಜಪ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ತುಮಕೂರಿನ ಜನಪ್ರತಿನಿಧಿಗಳು ಹಾಗೂ ಗಣ್ಯರು ಪಾಲ್ಗೊಂಡಿದ್ದರು.

ಇದನ್ನೂ ಓದಿ:ಶಿವಕುಮಾರ ಶ್ರೀಗಳ 4ನೇ ವರ್ಷದ ಪುಣ್ಯಸ್ಮರಣೆ : ಮಠದಲ್ಲಿ ಸಕಲ ಸಿದ್ಧತೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ತುಮಕೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಈಗಾಗಲೇ ಸಿಎಂ ನೇತೃತ್ವದಲ್ಲಿ ಚುನಾವಣೆ ಎಂದು ಹೇಳಿದ್ದಾರೆ‌. ಕೇವಲ ಮುಖ್ಯಮಂತ್ರಿ ಮಾತ್ರವಲ್ಲ, ಇಡೀ ಟೀಂ ಮತ್ತು ಪಕ್ಷದ ನೇತೃತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ, ಈ ಬಾರಿ 130 ಸೀಟುಗಳನ್ನ ಗೆದ್ದು ಸ್ಪಷ್ಟ ಬಹುಮತ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ನಮಸ್ಕಾರ ಮಾಡಿ, ಆಶೀರ್ವಾದ ಪಡೆದಿದ್ದೇನೆ. ದಾಸೋಹದ ದಿನ ಇಡೀ ರಾಜ್ಯದಲ್ಲಿ ಆಚರಣೆ ಆಗುತ್ತೆ. ವಿಭಿನ್ನ, ವಿಶೇಷವಾಗಿ ಆಚರಿಸೋ ಬಗ್ಗೆ ಚರ್ಚೆ ಮಾಡಲಾಗುತ್ತೆ ಎಂದರು. ಫೆಬ್ರವರಿ ತಿಂಗಳಲ್ಲಿ ಅಧಿಕೃತವಾಗಿ ಸರ್ಕಾರದಿಂದ ಆಚರಣೆ ಮಾಡುತ್ತೇವೆ. ಈ ವೇಳೆ ಸಾರ್ವತ್ರಿಕ ರಜೆ ಇರೋದಿಲ್ಲಾ ಎಂದು ಸ್ಪಷ್ಟಪಡಿಸಿದರು.

ಶಿವಕುಮಾರ ಶ್ರೀಗಳ ಹುಟ್ಟೂರಲ್ಲಿ ಪುತ್ಥಳಿ ನಿರ್ಮಾಣ ಕಾಮಗಾರಿ ಸ್ಥಗಿತ ವಿಚಾರ ಕುರಿತು ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಮೊನ್ನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಶೀಘ್ರದಲ್ಲಿ ಕಾಮಗಾರಿಯನ್ನು ಮತ್ತೆ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.

ಸಾಮಾಜಿಕ ಕ್ರಾಂತಿಯನ್ನುಂಟು ಮಾಡುವ ಕಾಯಕದಲ್ಲಿ ಮಠಗಳು ಮುಂಚೂಣಿಯಲ್ಲಿರಬೇಕು: ಪರಮಪೂಜ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ 4 ನೇ ಪುಣ್ಯಸ್ಮರಣೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಬೊಮ್ಮಾಯಿ, ಬಸವಣ್ಣನವರ ತತ್ವಾದರ್ಶಗಳ ಬಗ್ಗೆ ಚಿಂತನೆ ಅತ್ಯಗತ್ಯವಾಗಿದ್ದು, ಅಸಮಾನತೆ, ಲಿಂಗಭೇದ, ಮೇಲುಕೀಳುಗಳನ್ನು ಹೋಗಲಾಡಿಸಲು ನಾವೇನು ಮಾಡಬೇಕು ಎಂಬ ಬಗ್ಗೆ ಚಿಂತಿಸಬೇಕು. ಸಾಮಾಜಿಕ ಕ್ರಾಂತಿಯನ್ನುಂಟು ಮಾಡುವ ಕಾಯಕದಲ್ಲಿ ಮಠಗಳು ಮುಂಚೂಣಿಯಲ್ಲಿರಬೇಕು ಎಂದು ತಿಳಿಸಿದರು.

ಬದುಕಿನಲ್ಲಿ ಮುಗ್ಧತೆಯನ್ನು ಸದಾ ಕಾಯ್ದುಕೊಂಡು ಆತ್ಮಸಾಕ್ಷಿಯಿಂದ ನಡೆದುಕೊಳ್ಳುವುದು ಬಹಳ ಕಷ್ಟ. ಸತ್ಯವೆಂಬ ಸಾತ್ವಿಕ ವಿಚಾರವನ್ನಿಟ್ಟುಕೊಂಡು, ಲೌಕಿಕ ಲಾಭ ನಷ್ಟಗಳಿಂದ ದೂರವಿರುವವರು ಮಾತ್ರ ಆತ್ಮಸಾಕ್ಷಿಯಿಂದ ನಡೆದುಕೊಳ್ಳಲು ಸಾಧ್ಯ. ತಮ್ಮ ಬದುಕಿನುದ್ದಕ್ಕೂ ಮುಗ್ಧತೆ ಹಾಗೂ ಆತ್ಮಸಾಕ್ಷಿಯಂತೆ ನಡೆದುಕೊಂಡವರೇ ನಮ್ಮ ನಡೆದಾಡುವ ದೇವರಾದ ಶಿವಕುಮಾರ ಸ್ವಾಮೀಜಿಗಳು. ಪ್ರತಿನಿತ್ಯ ಪರೀಕ್ಷೆಗೆ ಒಳಪಟ್ಟು ಆತ್ಮಬಲ ಹೆಚ್ಚುವುದರಿಂದ ಪ್ರಕಾಶಮಯವಾದ ಆತ್ಮಬಲ ದೊರೆಯುತ್ತದೆ ಎಂದರು.

ಶಿವಕುಮಾರ ಸ್ವಾಮೀಜಿ ತಮ್ಮ ಜ್ಞಾನವನ್ನು ಲೋಕ ಕಲ್ಯಾಣಕ್ಕಾಗಿ ಅರ್ಪಿಸಿದ್ದಾರೆ:ಸ್ವಾಮಿ ವಿವೇಕಾನಂದರು ಅತಿ ಸಣ್ಣ ವಯಸ್ಸಿನಲ್ಲಿ ಮುಕ್ತಿಮಾರ್ಗವನ್ನು ಕಂಡುಕೊಂಡವರು. ಅವರ ಗುರು ಪರಮಹಂಸರು ಸಾಧನೆ ಒಬ್ಬರ ಸ್ವತ್ತಲ್ಲ. ನಿನ್ನ ಸಾಧನೆಯಿಂದ ಸಾವಿರಾರು ಜನ ಬೆಳಕು ಕಾಣುವಂತಾಗಬೇಕೆಂದು ಬೋಧಿಸಿದ್ದರ ಪರಿಣಾಮ ಸ್ವಾಮಿವಿವೇಕಾನಂದರು ವಿಶ್ವಗುರುವಾದರು. ಅದೇ ರೀತಿಯಲ್ಲಿ ಶಿವಕುಮಾರ ಸ್ವಾಮೀಜಿ ತಮ್ಮ ಜ್ಞಾನವನ್ನು ಲೋಕ ಕಲ್ಯಾಣಕ್ಕಾಗಿ ಅರ್ಪಿಸಿದ್ದಾರೆ. ನನಗಾಗಿ ದುಡಿಯುವುದು ಕರ್ತವ್ಯ ಆದರೆ ಲೋಕ ಕಲ್ಯಾಣಕ್ಕಾಗಿ ಸಮರ್ಪಿಸುವುದು ಕಾಯಕ ಎಂದರು.

ಶಿವಕುಮಾರ ಸ್ವಾಮೀಜಿಗಳು ತ್ರಿವಿಧ ದಾಸೋಹಿಗಳು: ಶಿವಕುಮಾರ ಸ್ವಾಮೀಜಿಗಳು ತ್ರಿವಿಧ ದಾಸೋಹಿಗಳು, ಕಾಯಕ ಯೋಗಿಗಳಾಗಿದ್ದರು. ಬಡ ಮಕ್ಕಳು ಶ್ರೀ ಕ್ಷೇತ್ರಕ್ಕೆ ಬಂದು ಅನ್ನ, ಆರೋಗ್ಯ, ವಿದ್ಯೆ, ಆಶ್ರಯ ಎಲ್ಲವನ್ನೂ ಪಡೆಯುತ್ತಿದ್ದಾರೆ. ಇದರೊಂದಿಗೆ ಸಂಸ್ಕಾರ, ಸಂಸ್ಕೃತಿಯನ್ನು ಸಹ ಇಲ್ಲಿ ಕಲಿಸಲಾಗುತ್ತಿದೆ. ಭಕ್ತರೇ ಮಠದ ಆಸ್ತಿ ಹಾಗೂ ಪರಮಾತ್ಮನೇ ಅಕ್ಷಯಪಾತ್ರೆ, ಎಲ್ಲ ಸೇವಾ ಕಾರ್ಯಗಳಿಗೆ ಶರಣರು, ದೀನದಲಿತರೇ ಒಡೆಯರು ಎಂದು ಶಿವಕುಮಾರ ಸ್ವಾಮೀಜಿಗಳು ನಂಬಿದವರು. ಉದಾತ್ತ ಚಿಂತನೆಯ ಫಲವಾಗಿ ತ್ರಿವಿಧ ದಾಸೋಹ ಕ್ಷೇತ್ರದಲ್ಲಿ ನಡೆಯುತ್ತಿದೆ ಎಂದರು.

ತೆಲಂಗಾಣ ಕೆಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿ, ಕಾಂಗ್ರೆಸ್​ ಶಾಸಕ ಜಮೀರ್​ ಅಹ್ಮದ್​ ಅವರಿಗೆ ಆಫರ್ ಕೊಟ್ಟಿದ್ದಾರೆ ಎನ್ನಲಾದ ವಿಚಾರವಾಗಿ ಮಾತನಾಡಿದ ಸಿಎಂ ಬೊಮ್ಮಾಯಿ, ಆ ಬಗ್ಗೆ ಕಾಂಗ್ರೆಸ್ ನವರೇ ಆಪಾದನೆ ಮಾಡಿದ್ದಾರೆ. ನಿಜವಾಗಿ ಏನಿದೆ ಅನ್ನೋದು ಅವರೇ ಸ್ಪಷ್ಟಪಡಿಸಬೇಕಿದೆ. ಬೆಂಕಿ ಇಲ್ಲದ ಹೊಗೆ ಆಡಲ್ಲ ಎಂದು ಹೇಳಿದರು.

ಇನ್ನು, ಸಮಾರಂಭದಲ್ಲಿ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಸಚಿವರಾದ ವಿ.ಸೋಮಣ್ಣ, ಆರಗ ಜ್ಞಾನೇಂದ್ರ, ಜೆ.ಸಿ. ಮಾಧುಸ್ವಾಮಿ, ಎಸ್.ಟಿ. ಸೋಮಶೇಖರ್, ಸಂಸದ ಭಗವಂತ ಖೂಬಾ, ಭಾಜಪ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ತುಮಕೂರಿನ ಜನಪ್ರತಿನಿಧಿಗಳು ಹಾಗೂ ಗಣ್ಯರು ಪಾಲ್ಗೊಂಡಿದ್ದರು.

ಇದನ್ನೂ ಓದಿ:ಶಿವಕುಮಾರ ಶ್ರೀಗಳ 4ನೇ ವರ್ಷದ ಪುಣ್ಯಸ್ಮರಣೆ : ಮಠದಲ್ಲಿ ಸಕಲ ಸಿದ್ಧತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.