ETV Bharat / state

ಲಂಚ ಸ್ವೀಕಾರ: ಪ್ರಥಮ ದರ್ಜೆ ಸಹಾಯಕಿಗೆ ಕಡ್ಡಾಯ ನಿವೃತ್ತಿ

author img

By

Published : Jun 2, 2023, 8:24 AM IST

ಕರ್ತವ್ಯದ ವೇಳೆ ಲಂಚ ಸ್ವೀಕರಿಸುತ್ತಿದ್ದ ಗುಬ್ಬಿ ತಾಲೂಕಿನ ಉಪನೋಂದಣಿ ಕಚೇರಿಯ ಪ್ರಥಮ ದರ್ಜೆ ಸಹಾಯಕಿ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಂಡಿದೆ.

ಲಂಚ ಪಡೆದಿದ್ದ ಮಹಿಳಾಧಿಕಾರಿಗೆ ಕಡ್ಡಾಯ ನಿವೃತ್ತಿ
ಲಂಚ ಪಡೆದಿದ್ದ ಮಹಿಳಾಧಿಕಾರಿಗೆ ಕಡ್ಡಾಯ ನಿವೃತ್ತಿ

ತುಮಕೂರು: ಲಂಚ ಪಡೆದಿದ್ದ ಮಹಿಳಾಧಿಕಾರಿಯನ್ನು ಕಡ್ಡಾಯ ನಿವೃತ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಗುಬ್ಬಿ ತಾಲೂಕು ಉಪನೋಂದಣಿ ಕಚೇರಿಯಲ್ಲಿನ ಪ್ರಥಮ ದರ್ಜೆ ಸಹಾಯಕಿಯಾಗಿದ್ದ ಯಶೋಧ ವಿರುದ್ಧ ಮುದ್ರಾಂಕ ಇಲಾಖೆ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ. ಪ್ರಥಮ ದರ್ಜೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಇವರು ಕರ್ತವ್ಯ ಸಮಯದಲ್ಲಿ ಲಂಚ ಪಡೆದಿದ್ದರು. ಲಂಚ ಪಡೆದಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ವಿಡಿಯೋ ಆಧರಿಸಿ ತನಿಖೆ ನಡೆಸಲಾಗಿತ್ತು. ತನಿಖೆಯಲ್ಲಿ ಲಂಚ ಪಡೆದಿದ್ದು ಸಾಬೀತಾಗಿದೆ. ಹೀಗಾಗಿ ಸರ್ಕಾರ ಕಡ್ಡಾಯ ನಿವೃತ್ತಿಗೆ ಆದೇಶಿಸಿದೆ.

ಯಶೋದಮ್ಮ ಅವರ ಮೇಲೆ ಆಗಾಗ ಸಾರ್ವಜನಿಕರಿಂದ ಲಂಚ ಪಡೆಯುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತಿದ್ದವು. ಈ ಕುರಿತು ಇಲಾಖೆಯಿಂದ ತನಿಖೆ ನಡೆದಿತ್ತು. ಈ ನೆಲೆಯಲ್ಲಿ ಇವರನ್ನು ವರ್ಗಾವಣೆ ಮಾಡುವ ಪ್ರಕ್ರಿಯೆಗೂ ಕೂಡ ಇಲಾಖೆ ಮುಂದಾಗಿತ್ತು. ಆದಾಗಿಯೂ ಯಶೋದಮ್ಮ ಲಂಚ ಪಡೆಯುತ್ತಿರುವ ಕುರಿತು ಆರೋಪ ಕೇಳಿ ಬಂದವು. ಅಂತಿಮವಾಗಿ ಲಂಚ ಪಡೆದ ವಿಡಿಯೋ ವೈರಲ್​ ಆಗುತ್ತಿದ್ದಂತೆ ಸರ್ಕಾರ ಗಂಭೀರವಾಗಿ ಪರಿಗಣಿಸಿ ಕಡ್ಡಾಯ ನಿವೃತ್ತಿ ಕ್ರಮ ತೆಗೆದುಕೊಂಡಿದೆ.

ಲಂಚಬಾಕ ಮಹಿಳಾ ಪಿಎಸ್​ಐ ಬಲೆಗೆ: ಜಾಮೀನು ಸ್ವೀಕರಿಸಲು ಆರೋಪಿಯೊಬ್ಬನಿಗೆ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಶಿವಾಜಿನಗರ ಮಹಿಳಾ ಪೊಲೀಸ್ ಠಾಣೆಯ ಪಿಎಸ್​ಐ ಸವಿತಾ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕೆಲವು ದಿನಗಳ ಹಿಂದೆ ನಡೆದಿತ್ತು. ಪೊಲೀಸ್​ ವಶದಲ್ಲಿದ್ದ ಆರೋಪಿಯೊಬ್ಬನ ಜಾಮೀನು ಸ್ವೀಕರಿಸಲು ಸವಿತಾ 50 ಸಾವಿರ ರೂಪಾಯಿಗೆ ಬೇಡಿಕೆಯಿಟ್ಟಿದ್ದು, ಆರೋಪಿಯ ಕಡೆಯವರು ಅಷ್ಟು ಹಣ ನೀಡಲು ಸಾಧ್ಯವಿಲ್ಲ ಎಂದಿದ್ದರು. ಅಂತಿಮವಾಗಿ ಹದಿನೈದು ಸಾವಿರಕ್ಕೆ ಬೇಡಿಕೆಯಿಟ್ಟಿದ್ದ ಸವಿತಾರ ವಿರುದ್ಧ ಆರೋಪಿ ಕಡೆಯವರಾದ ಅನಂತ್ ಕುಮಾರ್ ದೂರು ನೀಡಿದ್ದರು. ಈ ದೂರಿನನ್ವಯ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡ ಲೋಕಾಯಕ್ತ ಅಧಿಕಾರಿಗಳು ಹಣ ಸ್ವೀಕರಿಸುವಾಗಲೇ ಪಿಎಸ್ಐ ಸವಿತಾರನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಲಂಚ ಸ್ವೀಕರಿಸುತ್ತಿದ್ದ ಶಿವಾಜಿನಗರ ಠಾಣಾ ಮಹಿಳಾ ಪಿಎಸ್ಐ ಲೋಕಾಯುಕ್ತ ಬಲೆಗೆ

ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ಲೋಕಾಯುಕ್ತರ ದಾಳಿ: ಕಳೆದ ಎರಡು ದಿನಗಳ ಹಿಂದೆ ರಾಜ್ಯದ ಹಲವೆಡೆ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ದೊರೆತ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು. ಬೆಂಗಳೂರು, ಶಿವಮೊಗ್ಗ, ಹಾವೇರಿ ಹಾಗೂ ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿತ್ತು. ಆದಾಯದ ಮೂಲ, ಬ್ಯಾಂಕ್ ವಿವರಗಳು ಆಸ್ತಿ ಪತ್ರಗಳ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.

ಇನ್ನೊಂದೆಡೆ, 9 ನೇ ತರಗತಿ ವಿದ್ಯಾರ್ಥಿಯ ವರ್ಗಾವಣೆ ಪತ್ರ ನೀಡಲು 75 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ರಾಜಾಜಿನಗರದ ಬಸವೇಶ್ವರ ಪ್ರೌಢಶಾಲೆಯ ಪ್ರಿನ್ಸಿಪಾಲ್​ ವಿ. ನಾರಾಯಣ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಅಧಿಕಾರಿಗಳ ಬಲೆಗೆ ಬಿದ್ದಿದ್ದರು.

ಇದನ್ನೂ ಓದಿ: ಲಂಚ ಸ್ವೀಕರಿಸುತ್ತಿದ್ದ ಶಿವಾಜಿನಗರ ಠಾಣಾ ಮಹಿಳಾ ಪಿಎಸ್ಐ ಲೋಕಾಯುಕ್ತ ಬಲೆಗೆ

ತುಮಕೂರು: ಲಂಚ ಪಡೆದಿದ್ದ ಮಹಿಳಾಧಿಕಾರಿಯನ್ನು ಕಡ್ಡಾಯ ನಿವೃತ್ತಿಗೊಳಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಗುಬ್ಬಿ ತಾಲೂಕು ಉಪನೋಂದಣಿ ಕಚೇರಿಯಲ್ಲಿನ ಪ್ರಥಮ ದರ್ಜೆ ಸಹಾಯಕಿಯಾಗಿದ್ದ ಯಶೋಧ ವಿರುದ್ಧ ಮುದ್ರಾಂಕ ಇಲಾಖೆ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ. ಪ್ರಥಮ ದರ್ಜೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಇವರು ಕರ್ತವ್ಯ ಸಮಯದಲ್ಲಿ ಲಂಚ ಪಡೆದಿದ್ದರು. ಲಂಚ ಪಡೆದಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ವಿಡಿಯೋ ಆಧರಿಸಿ ತನಿಖೆ ನಡೆಸಲಾಗಿತ್ತು. ತನಿಖೆಯಲ್ಲಿ ಲಂಚ ಪಡೆದಿದ್ದು ಸಾಬೀತಾಗಿದೆ. ಹೀಗಾಗಿ ಸರ್ಕಾರ ಕಡ್ಡಾಯ ನಿವೃತ್ತಿಗೆ ಆದೇಶಿಸಿದೆ.

ಯಶೋದಮ್ಮ ಅವರ ಮೇಲೆ ಆಗಾಗ ಸಾರ್ವಜನಿಕರಿಂದ ಲಂಚ ಪಡೆಯುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತಿದ್ದವು. ಈ ಕುರಿತು ಇಲಾಖೆಯಿಂದ ತನಿಖೆ ನಡೆದಿತ್ತು. ಈ ನೆಲೆಯಲ್ಲಿ ಇವರನ್ನು ವರ್ಗಾವಣೆ ಮಾಡುವ ಪ್ರಕ್ರಿಯೆಗೂ ಕೂಡ ಇಲಾಖೆ ಮುಂದಾಗಿತ್ತು. ಆದಾಗಿಯೂ ಯಶೋದಮ್ಮ ಲಂಚ ಪಡೆಯುತ್ತಿರುವ ಕುರಿತು ಆರೋಪ ಕೇಳಿ ಬಂದವು. ಅಂತಿಮವಾಗಿ ಲಂಚ ಪಡೆದ ವಿಡಿಯೋ ವೈರಲ್​ ಆಗುತ್ತಿದ್ದಂತೆ ಸರ್ಕಾರ ಗಂಭೀರವಾಗಿ ಪರಿಗಣಿಸಿ ಕಡ್ಡಾಯ ನಿವೃತ್ತಿ ಕ್ರಮ ತೆಗೆದುಕೊಂಡಿದೆ.

ಲಂಚಬಾಕ ಮಹಿಳಾ ಪಿಎಸ್​ಐ ಬಲೆಗೆ: ಜಾಮೀನು ಸ್ವೀಕರಿಸಲು ಆರೋಪಿಯೊಬ್ಬನಿಗೆ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಶಿವಾಜಿನಗರ ಮಹಿಳಾ ಪೊಲೀಸ್ ಠಾಣೆಯ ಪಿಎಸ್​ಐ ಸವಿತಾ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕೆಲವು ದಿನಗಳ ಹಿಂದೆ ನಡೆದಿತ್ತು. ಪೊಲೀಸ್​ ವಶದಲ್ಲಿದ್ದ ಆರೋಪಿಯೊಬ್ಬನ ಜಾಮೀನು ಸ್ವೀಕರಿಸಲು ಸವಿತಾ 50 ಸಾವಿರ ರೂಪಾಯಿಗೆ ಬೇಡಿಕೆಯಿಟ್ಟಿದ್ದು, ಆರೋಪಿಯ ಕಡೆಯವರು ಅಷ್ಟು ಹಣ ನೀಡಲು ಸಾಧ್ಯವಿಲ್ಲ ಎಂದಿದ್ದರು. ಅಂತಿಮವಾಗಿ ಹದಿನೈದು ಸಾವಿರಕ್ಕೆ ಬೇಡಿಕೆಯಿಟ್ಟಿದ್ದ ಸವಿತಾರ ವಿರುದ್ಧ ಆರೋಪಿ ಕಡೆಯವರಾದ ಅನಂತ್ ಕುಮಾರ್ ದೂರು ನೀಡಿದ್ದರು. ಈ ದೂರಿನನ್ವಯ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡ ಲೋಕಾಯಕ್ತ ಅಧಿಕಾರಿಗಳು ಹಣ ಸ್ವೀಕರಿಸುವಾಗಲೇ ಪಿಎಸ್ಐ ಸವಿತಾರನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಲಂಚ ಸ್ವೀಕರಿಸುತ್ತಿದ್ದ ಶಿವಾಜಿನಗರ ಠಾಣಾ ಮಹಿಳಾ ಪಿಎಸ್ಐ ಲೋಕಾಯುಕ್ತ ಬಲೆಗೆ

ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ಲೋಕಾಯುಕ್ತರ ದಾಳಿ: ಕಳೆದ ಎರಡು ದಿನಗಳ ಹಿಂದೆ ರಾಜ್ಯದ ಹಲವೆಡೆ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಸರ್ಕಾರಿ ಅಧಿಕಾರಿಗಳ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ದೊರೆತ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು. ಬೆಂಗಳೂರು, ಶಿವಮೊಗ್ಗ, ಹಾವೇರಿ ಹಾಗೂ ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿತ್ತು. ಆದಾಯದ ಮೂಲ, ಬ್ಯಾಂಕ್ ವಿವರಗಳು ಆಸ್ತಿ ಪತ್ರಗಳ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.

ಇನ್ನೊಂದೆಡೆ, 9 ನೇ ತರಗತಿ ವಿದ್ಯಾರ್ಥಿಯ ವರ್ಗಾವಣೆ ಪತ್ರ ನೀಡಲು 75 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ರಾಜಾಜಿನಗರದ ಬಸವೇಶ್ವರ ಪ್ರೌಢಶಾಲೆಯ ಪ್ರಿನ್ಸಿಪಾಲ್​ ವಿ. ನಾರಾಯಣ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಅಧಿಕಾರಿಗಳ ಬಲೆಗೆ ಬಿದ್ದಿದ್ದರು.

ಇದನ್ನೂ ಓದಿ: ಲಂಚ ಸ್ವೀಕರಿಸುತ್ತಿದ್ದ ಶಿವಾಜಿನಗರ ಠಾಣಾ ಮಹಿಳಾ ಪಿಎಸ್ಐ ಲೋಕಾಯುಕ್ತ ಬಲೆಗೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.