ETV Bharat / state

ರಾಜ್ಯಸರ್ಕಾರದ ಕಾನೂನುಗಳ ವಿರುದ್ಧ ತುಮಕೂರಿನಲ್ಲಿ ಸಿ.ಪಿ.ಐ. ಪ್ರತಿಭಟನೆ

author img

By

Published : Sep 19, 2020, 7:01 PM IST

ರಾಜ್ಯಸರ್ಕಾರ ಸುಗ್ರೀವಾಜ್ಞೆ ಮೂಲಕ ವಿವಿಧ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ತುಮಕೂರಿನಲ್ಲಿ ಸಿ.ಪಿ.ಐ. ಪಕ್ಷ ಪ್ರತಿಭಟನೆ ನಡೆಸಿತು.

cpi protest in tumkur
ಪ್ರತಿಭಟನೆ

ತುಮಕೂರು: ರಾಜ್ಯಸರ್ಕಾರ ಸುಗ್ರೀವಾಜ್ಞೆಯ ಮೂಲಕ ಹೊರಡಿಸಿರುವ ವಿವಿಧ ಕಾನೂನು ತಿದ್ದುಪಡಿಯನ್ನು ವಿರೋಧಿಸಿ ಶಾಸಕ ಜ್ಯೋತಿಗಣೇಶ್ ಕಚೇರಿ ಮುಂದೆ ಭಾರತ ಕಮ್ಯುನಿಸ್ಟ್ ಪಕ್ಷ ಪ್ರತಿಭಟನೆ ನಡೆಸಿತು.

ಕೋವಿಡ್-19 ಹಿನ್ನೆಲೆ ರಾಜ್ಯಸರ್ಕಾರ ಸುಗ್ರೀವಾಜ್ಞೆಯ ಮೂಲಕ ಕರ್ನಾಟಕ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ , ಎಪಿಎಂಸಿ ಕಾಯ್ದೆ ತಿದ್ದುಪಡಿ , ಕೈಗಾರಿಕಾ ರಾಜ್ಯಗಳು ಮತ್ತು ಇತರೆ ಕಾಯ್ದೆ ತಿದ್ದುಪಡಿಗೆ ಹೊರಟಿದೆ. ರಾಜ್ಯದ ರೈತರು ಹಾಗೂ ಕೂಲಿ ಕಾರ್ಮಿಕರ ಮೇಲೆ ಈ ಕಾಯ್ದೆಗಳು ದುಷ್ಪರಿಣಾಮ ಬೀರಲಿವೆ. ಅಷ್ಟೇ ಅಲ್ಲದೇ ದಲಿತ, ಅಲ್ಪಸಂಖ್ಯಾತ ಜನಸಮೂಹಗಳಲ್ಲಿ ಹೆಚ್ಚಿನ ಮಟ್ಟದಲ್ಲಿ ಅಸಮಾನತೆಯುಂಟಾಗುತ್ತದೆ. ಹಾಗಾಗಿ ಈ ಕಾಯ್ದೆಗಳು ವಿಧಾನಸಭೆಯ ಅಂಗೀಕಾರಕ್ಕೆ ಚರ್ಚೆಗೆ ಬಂದಂತಹ ಸಂದರ್ಭದಲ್ಲಿ ಕಾಯ್ದೆಗಳನ್ನು ವಿರೋಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ತುಮಕೂರಿನಲ್ಲಿ ಸಿ.ಪಿ.ಐ. ಪ್ರತಿಭಟನೆ
ಈ ವೇಳೆ ಮಾತನಾಡಿದ ಸಿ.ಪಿ.ಐ.ನ ಜಿಲ್ಲಾ ಕಾರ್ಯದರ್ಶಿ ಗಿರೀಶ್, ಕಾರ್ಪೊರೇಟ್ ಕಂಪನಿಗಳಿಗೆ ಆಸ್ತಿಯನ್ನು ನೀಡುವ ನಿಟ್ಟಿನಲ್ಲಿ ಈ ಎಲ್ಲಾ ಕಾಯ್ದೆಗಳನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೊಳಿಸಿದೆ. ಈ ಕಾಯ್ದೆಯಿಂದ ಸಣ್ಣ ಹಾಗೂ ಅತಿ ಸಣ್ಣ ರೈತರು ಕಾರ್ಪೊರೇಟ್ ಕಂಪನಿಗಳಿಗೆ ತಮ್ಮ ಹೊಲಗಳನ್ನು ಮಾರುವಂತಹ ಪರಿಸ್ಥಿತಿ ಉಂಟಾಗುತ್ತದೆ. ಇದರಿಂದ ಜನಜೀವನಕ್ಕೆ ತೊಂದರೆಯಾಗಲಿದ್ದು, ನಿರುದ್ಯೋಗ ಹೆಚ್ಚಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತುಮಕೂರು: ರಾಜ್ಯಸರ್ಕಾರ ಸುಗ್ರೀವಾಜ್ಞೆಯ ಮೂಲಕ ಹೊರಡಿಸಿರುವ ವಿವಿಧ ಕಾನೂನು ತಿದ್ದುಪಡಿಯನ್ನು ವಿರೋಧಿಸಿ ಶಾಸಕ ಜ್ಯೋತಿಗಣೇಶ್ ಕಚೇರಿ ಮುಂದೆ ಭಾರತ ಕಮ್ಯುನಿಸ್ಟ್ ಪಕ್ಷ ಪ್ರತಿಭಟನೆ ನಡೆಸಿತು.

ಕೋವಿಡ್-19 ಹಿನ್ನೆಲೆ ರಾಜ್ಯಸರ್ಕಾರ ಸುಗ್ರೀವಾಜ್ಞೆಯ ಮೂಲಕ ಕರ್ನಾಟಕ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ , ಎಪಿಎಂಸಿ ಕಾಯ್ದೆ ತಿದ್ದುಪಡಿ , ಕೈಗಾರಿಕಾ ರಾಜ್ಯಗಳು ಮತ್ತು ಇತರೆ ಕಾಯ್ದೆ ತಿದ್ದುಪಡಿಗೆ ಹೊರಟಿದೆ. ರಾಜ್ಯದ ರೈತರು ಹಾಗೂ ಕೂಲಿ ಕಾರ್ಮಿಕರ ಮೇಲೆ ಈ ಕಾಯ್ದೆಗಳು ದುಷ್ಪರಿಣಾಮ ಬೀರಲಿವೆ. ಅಷ್ಟೇ ಅಲ್ಲದೇ ದಲಿತ, ಅಲ್ಪಸಂಖ್ಯಾತ ಜನಸಮೂಹಗಳಲ್ಲಿ ಹೆಚ್ಚಿನ ಮಟ್ಟದಲ್ಲಿ ಅಸಮಾನತೆಯುಂಟಾಗುತ್ತದೆ. ಹಾಗಾಗಿ ಈ ಕಾಯ್ದೆಗಳು ವಿಧಾನಸಭೆಯ ಅಂಗೀಕಾರಕ್ಕೆ ಚರ್ಚೆಗೆ ಬಂದಂತಹ ಸಂದರ್ಭದಲ್ಲಿ ಕಾಯ್ದೆಗಳನ್ನು ವಿರೋಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ತುಮಕೂರಿನಲ್ಲಿ ಸಿ.ಪಿ.ಐ. ಪ್ರತಿಭಟನೆ
ಈ ವೇಳೆ ಮಾತನಾಡಿದ ಸಿ.ಪಿ.ಐ.ನ ಜಿಲ್ಲಾ ಕಾರ್ಯದರ್ಶಿ ಗಿರೀಶ್, ಕಾರ್ಪೊರೇಟ್ ಕಂಪನಿಗಳಿಗೆ ಆಸ್ತಿಯನ್ನು ನೀಡುವ ನಿಟ್ಟಿನಲ್ಲಿ ಈ ಎಲ್ಲಾ ಕಾಯ್ದೆಗಳನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೊಳಿಸಿದೆ. ಈ ಕಾಯ್ದೆಯಿಂದ ಸಣ್ಣ ಹಾಗೂ ಅತಿ ಸಣ್ಣ ರೈತರು ಕಾರ್ಪೊರೇಟ್ ಕಂಪನಿಗಳಿಗೆ ತಮ್ಮ ಹೊಲಗಳನ್ನು ಮಾರುವಂತಹ ಪರಿಸ್ಥಿತಿ ಉಂಟಾಗುತ್ತದೆ. ಇದರಿಂದ ಜನಜೀವನಕ್ಕೆ ತೊಂದರೆಯಾಗಲಿದ್ದು, ನಿರುದ್ಯೋಗ ಹೆಚ್ಚಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.