ETV Bharat / state

Tumkuru crime: ಆರು ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದ ಪಾಪಿ ತಾಯಿ

ಸ್ವಂತ ಮಗಳನ್ನು ಹೆತ್ತ ತಾಯಿಯೇ ಕತ್ತು ಹಿಸುಕಿ ಹತ್ಯೆ ಮಾಡಿರುವ ದಾರುಣ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

author img

By

Published : Jul 15, 2023, 7:15 AM IST

Updated : Jul 15, 2023, 12:26 PM IST

six-year-old-daughter-killed-by-mother-in-tumkur
ತುಮಕೂರು : ಆರು ವರ್ಷದ ಮಗಳನ್ನು ಕತ್ತು ಹಿಸುಕಿ ಕೊಲೆಗೈದ ಪಾಪಿ ತಾಯಿ

ತುಮಕೂರು : ಹೆತ್ತ ತಾಯಿಯೇ ತನ್ನ ಆರು ವರ್ಷದ ಮಗಳನ್ನು ಕೊಲೆ ಮಾಡಿರುವ ದಾರುಣ ಘಟನೆ ಇಲ್ಲಿನ ಶಾಂತಿ ನಗರದಲ್ಲಿ ಶುಕ್ರವಾರ ನಡೆದಿದೆ. ಇಲ್ಲಿನ ಶಾಂತಿನಗರ ನಿವಾಸಿ ಹೇಮಲತಾ ಕೊಲೆಗೈದ ಆರೋಪಿ. ಮಗಳು ತನ್ವಿತಾ(6) ಮೃತ ಬಾಲಕಿ.

ಶುಕ್ರವಾರ ತಾಯಿ ಹೇಮಲತಾ ಮತ್ತು ಮಗಳು ತನ್ವಿತಾ ಮನೆಯಲ್ಲಿದ್ದರು. ಈ ವೇಳೆ ಹೇಮಲತಾ ಮಗಳನ್ನು ಕತ್ತು ಹಿಸುಕಿದ್ದಾಳೆ. ಈ ವೇಳೆ ಬಾಲಕಿಯ ಚೀರಾಟವನ್ನು ಕೇಳಿದ ಅಕ್ಕಪಕ್ಕದವರು ಓಡಿ ಬಂದು ತಾಯಿಯ ಕೈಯಿಂದ ಮಗಳನ್ನು ಬಿಡಿಸಲು ಯತ್ನಿಸಿದ್ಧಾರೆ. ಆದರೆ ಅದಾಗಲೇ ತನ್ವಿತಾ ಮೃತಪಟ್ಟಿದ್ದಳು. ತಾಯಿ ಹೇಮಲತಾಳನ್ನು ಪೊಲೀಸರು ಬಂಧಿಸಿದ್ದಾರೆ.

ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅನ್ಯ ಜಾತಿಯ ಯುವಕನ್ನು ಪ್ರೀತಿಸಿದ್ದಕ್ಕೆ ಸ್ವಂತ ಮಗಳನ್ನು ಹತ್ಯೆಗೈದ ತಂದೆ : ಕಳೆದ ಕೆಲವು ದಿನಗಳ ಹಿಂದೆ ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೋರ್ವ ಸ್ವಂತ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದ ಘಟನೆ ಕೋಲಾರದಲ್ಲಿ ನಡೆದಿತ್ತು. ಅಲ್ಲದೆ ಈ ಘಟನೆ ಮನನೊಂದ ಮೃತಳ ಪ್ರಿಯಕರನೂ ಆತ್ಮಹತ್ಯೆಗೆ ಶರಣಾಗಿದ್ದನು. ಮೃತರನ್ನು ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಹೋಬಳಿಯ ಬೋಡಗುರ್ಕಿ ಗ್ರಾಮದ ಕೀರ್ತಿ(20), ಹಾಗೂ ಆತ್ಮಹತ್ಯೆ ಮಾಡಿಕೊಂಡವನನ್ನು ಗಂಗಾಧರ್​(24) ಎಂದು ಗುರುತಿಸಲಾಗಿತ್ತು.

ಮೃತ ಗಂಗಾಧರ್​ ಹಾಗೂ ಕೀರ್ತಿ ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಸಂಬಂಧ ಗಂಗಾಧರ್​ ತಮ್ಮ ಪ್ರೀತಿಯ ವಿಚಾರವನ್ನು ಕೀರ್ತಿಯ ತಂದೆ ಕೃಷ್ಣಮೂರ್ತಿ ಬಳಿ ಹೇಳಿದ್ದನು. ಅಲ್ಲದೆ ಮದುವೆ ಮಾಡಿಕೊಡುವಂತೆಯೂ ಕೇಳಿಕೊಂಡಿದ್ದನು. ಆದರೆ ಇವರಿಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗಿದ್ದು, ಇಬ್ಬರ ಮದುವೆಗೆ ಕೀರ್ತಿಯ ತಂದೆ ಒಪ್ಪಿಗೆ ಸೂಚಿಸಿರಲಿಲ್ಲ.

ಅಲ್ಲದೆ ಪೋಷಕರು ಗಂಗಾಧರ್​ನನ್ನು ಮರೆತು ಬಿಡುವಂತೆ ಕೀರ್ತಿಗೆ ಹಲವು ಬಾರಿ ಬುದ್ಧಿವಾದ ಹೇಳಿದ್ದರು. ಆದರೂ ಇದ್ಯಾವುದಕ್ಕೂ ಕ್ಯಾರೇ ಅನ್ನದೇ ಇಬ್ಬರೂ ಗಂಗಾಧರ್​ ಮತ್ತು ಕೀರ್ತಿ ಪ್ರೀತಿಸುತ್ತಿದ್ದರು. ಈ ಸಂಬಂಧ ಮತ್ತೆ ಕೀರ್ತಿ ಮತ್ತು ತಂದೆ ಕೃಷ್ಣಮೂರ್ತಿ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಕೋಪಗೊಂಡ ಕೃಷ್ಣಮೂರ್ತಿ ಮಗಳನ್ನು ಕತ್ತು ಹಿಸುಕಿ ಸಾಯಿಸಿದ್ದನು. ಕೀರ್ತಿಯ ಮೃತಪಟ್ಟ ಬಗ್ಗೆ ತಿಳಿದ ಪ್ರಿಯಕರ ಗಂಗಾಧರ್​ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಸಂಬಂಧ ಕಾಮಸಮುದ್ರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ : ಪೊಲೀಸ್​ ಸಿಬ್ಬಂದಿ ಸೇರಿದಂತೆ ಹಲವರಿಗೆ ಕೋಟ್ಯಂತರ ರೂ. ವಂಚನೆ ಆರೋಪ: ಹೆಡ್​ ಕಾನ್ಸ್​ಟೇಬಲ್ ದಂಪತಿ ವಿರುದ್ಧ ದೂರು

ತುಮಕೂರು : ಹೆತ್ತ ತಾಯಿಯೇ ತನ್ನ ಆರು ವರ್ಷದ ಮಗಳನ್ನು ಕೊಲೆ ಮಾಡಿರುವ ದಾರುಣ ಘಟನೆ ಇಲ್ಲಿನ ಶಾಂತಿ ನಗರದಲ್ಲಿ ಶುಕ್ರವಾರ ನಡೆದಿದೆ. ಇಲ್ಲಿನ ಶಾಂತಿನಗರ ನಿವಾಸಿ ಹೇಮಲತಾ ಕೊಲೆಗೈದ ಆರೋಪಿ. ಮಗಳು ತನ್ವಿತಾ(6) ಮೃತ ಬಾಲಕಿ.

ಶುಕ್ರವಾರ ತಾಯಿ ಹೇಮಲತಾ ಮತ್ತು ಮಗಳು ತನ್ವಿತಾ ಮನೆಯಲ್ಲಿದ್ದರು. ಈ ವೇಳೆ ಹೇಮಲತಾ ಮಗಳನ್ನು ಕತ್ತು ಹಿಸುಕಿದ್ದಾಳೆ. ಈ ವೇಳೆ ಬಾಲಕಿಯ ಚೀರಾಟವನ್ನು ಕೇಳಿದ ಅಕ್ಕಪಕ್ಕದವರು ಓಡಿ ಬಂದು ತಾಯಿಯ ಕೈಯಿಂದ ಮಗಳನ್ನು ಬಿಡಿಸಲು ಯತ್ನಿಸಿದ್ಧಾರೆ. ಆದರೆ ಅದಾಗಲೇ ತನ್ವಿತಾ ಮೃತಪಟ್ಟಿದ್ದಳು. ತಾಯಿ ಹೇಮಲತಾಳನ್ನು ಪೊಲೀಸರು ಬಂಧಿಸಿದ್ದಾರೆ.

ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅನ್ಯ ಜಾತಿಯ ಯುವಕನ್ನು ಪ್ರೀತಿಸಿದ್ದಕ್ಕೆ ಸ್ವಂತ ಮಗಳನ್ನು ಹತ್ಯೆಗೈದ ತಂದೆ : ಕಳೆದ ಕೆಲವು ದಿನಗಳ ಹಿಂದೆ ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೋರ್ವ ಸ್ವಂತ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದ ಘಟನೆ ಕೋಲಾರದಲ್ಲಿ ನಡೆದಿತ್ತು. ಅಲ್ಲದೆ ಈ ಘಟನೆ ಮನನೊಂದ ಮೃತಳ ಪ್ರಿಯಕರನೂ ಆತ್ಮಹತ್ಯೆಗೆ ಶರಣಾಗಿದ್ದನು. ಮೃತರನ್ನು ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಹೋಬಳಿಯ ಬೋಡಗುರ್ಕಿ ಗ್ರಾಮದ ಕೀರ್ತಿ(20), ಹಾಗೂ ಆತ್ಮಹತ್ಯೆ ಮಾಡಿಕೊಂಡವನನ್ನು ಗಂಗಾಧರ್​(24) ಎಂದು ಗುರುತಿಸಲಾಗಿತ್ತು.

ಮೃತ ಗಂಗಾಧರ್​ ಹಾಗೂ ಕೀರ್ತಿ ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಸಂಬಂಧ ಗಂಗಾಧರ್​ ತಮ್ಮ ಪ್ರೀತಿಯ ವಿಚಾರವನ್ನು ಕೀರ್ತಿಯ ತಂದೆ ಕೃಷ್ಣಮೂರ್ತಿ ಬಳಿ ಹೇಳಿದ್ದನು. ಅಲ್ಲದೆ ಮದುವೆ ಮಾಡಿಕೊಡುವಂತೆಯೂ ಕೇಳಿಕೊಂಡಿದ್ದನು. ಆದರೆ ಇವರಿಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗಿದ್ದು, ಇಬ್ಬರ ಮದುವೆಗೆ ಕೀರ್ತಿಯ ತಂದೆ ಒಪ್ಪಿಗೆ ಸೂಚಿಸಿರಲಿಲ್ಲ.

ಅಲ್ಲದೆ ಪೋಷಕರು ಗಂಗಾಧರ್​ನನ್ನು ಮರೆತು ಬಿಡುವಂತೆ ಕೀರ್ತಿಗೆ ಹಲವು ಬಾರಿ ಬುದ್ಧಿವಾದ ಹೇಳಿದ್ದರು. ಆದರೂ ಇದ್ಯಾವುದಕ್ಕೂ ಕ್ಯಾರೇ ಅನ್ನದೇ ಇಬ್ಬರೂ ಗಂಗಾಧರ್​ ಮತ್ತು ಕೀರ್ತಿ ಪ್ರೀತಿಸುತ್ತಿದ್ದರು. ಈ ಸಂಬಂಧ ಮತ್ತೆ ಕೀರ್ತಿ ಮತ್ತು ತಂದೆ ಕೃಷ್ಣಮೂರ್ತಿ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಕೋಪಗೊಂಡ ಕೃಷ್ಣಮೂರ್ತಿ ಮಗಳನ್ನು ಕತ್ತು ಹಿಸುಕಿ ಸಾಯಿಸಿದ್ದನು. ಕೀರ್ತಿಯ ಮೃತಪಟ್ಟ ಬಗ್ಗೆ ತಿಳಿದ ಪ್ರಿಯಕರ ಗಂಗಾಧರ್​ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಸಂಬಂಧ ಕಾಮಸಮುದ್ರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ : ಪೊಲೀಸ್​ ಸಿಬ್ಬಂದಿ ಸೇರಿದಂತೆ ಹಲವರಿಗೆ ಕೋಟ್ಯಂತರ ರೂ. ವಂಚನೆ ಆರೋಪ: ಹೆಡ್​ ಕಾನ್ಸ್​ಟೇಬಲ್ ದಂಪತಿ ವಿರುದ್ಧ ದೂರು

Last Updated : Jul 15, 2023, 12:26 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.