ETV Bharat / state

'ಡಿಸಿಸಿ ಬ್ಯಾಂಕ್​ ಸೂಪರ್ ಸೀಡ್ ಆಗುವುದಕ್ಕೂ ಡಿಸಿಎಂಗೂ ಸಂಬಂಧವಿಲ್ಲ'

author img

By

Published : Jul 23, 2019, 6:01 PM IST

Updated : Jul 23, 2019, 8:10 PM IST

ಉಪಮುಖ್ಯಮಂತ್ರಿ ಪರಮೇಶ್ವರ ಹಠಾವೋ ಕಾಂಗ್ರೆಸ್ ಬಚಾವೋ ಎಂಬಂತಹ ಭಿತ್ತಿಪತ್ರಗಳನ್ನು ನಾನು ಎಲ್ಲಿಯೂ ಅಂಟಿಸಿಲ್ಲ ಎಂದು ಆರ್.ರಾಮಕೃಷ್ಣ ಸ್ಪಷ್ಟಪಡಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಆರ್.ರಾಮಕೃಷ್ಣ.

ತುಮಕೂರು: ಡಿಸಿಸಿ ಬ್ಯಾಂಕನ್ನು ಸೂಪರ್ ಸೀಡ್ ಮಾಡುವುದಕ್ಕೂ ಜಿಲ್ಲೆಯ ಉಪಮುಖ್ಯಮಂತ್ರಿ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಆರ್.ರಾಮಕೃಷ್ಣ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲ ಅಂಶಗಳನ್ನು ಆಧಾರದ ಮೇರೆಗೆ ಜಿಲ್ಲೆಯ ಡಿಸಿಸಿ ಬ್ಯಾಂಕನ್ನು ಸೂಪರ್ ಸೀಡ್ ಮಾಡಲಾಗಿದೆ. ನಿಜವಾದ ರೈತರಿಗೆ ಸಾಲ ನೀಡಿಲ್ಲ. ಸೂಚನೆ ಮೇರೆಗೆ ಮತ್ತು ಅವರ ಹಿಂಬಾಲಕರಿಗೆ ಸಾಲ ನೀಡಲಾಗುತ್ತಿದೆ ಎಂಬ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಬ್ಯಾಂಕಿನಲ್ಲಿ ನಡೆದಿರುವ ಅವ್ಯವಹಾರಗಳನ್ನು ಕೂಲಂಕಷವಾಗಿ ತನಿಖೆ ನಡೆಸಬೇಕು ಎಂದು ಈಗಿನ ಡಿಸಿಸಿ ಬ್ಯಾಂಕ್​ನ ಆಡಳಿತಾಧಿಕಾರಿ ಮನವಿ ಸಲ್ಲಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಆರ್.ರಾಮಕೃಷ್ಣ.

ಕಳೆದ ತಿಂಗಳು ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರ ಮಗ ಉಪಮುಖ್ಯಮಂತ್ರಿ ಹುದ್ದೆಯ ಬಗ್ಗೆ ಅವಹೇಳನಕಾರಿಯಾಗಿ ಭಿತ್ತಿ ಪತ್ರಗಳನ್ನು ಅಂಟಿಸಿ, ನನ್ನ ಮೇಲೆಯೂ ಆರೋಪ ಹೊರಿಸಿದ್ದರು. ಈಗ ಅದು ಸುಳ್ಳು ಎಂಬುದು ಬಯಲಾಗಿದೆ. ಕೋತಿ ತಿಂದು ಮೇಕೆಯ ಮೂತಿಗೆ ವರೆಸಿದ ಹಾಗಾಗಿದೆ. ಅದೇ ರೀತಿ ಕೆ.ಎನ್.ರಾಜಣ್ಣ ಮಾಡಿದ್ದಾರೆ. ಹಾಗಾಗಿ ಆಡಳಿತಾಧಿಕಾರಿ ಕಾನೂನು ರೀತಿಯ ಪರಿಶೀಲನೆ ನಡೆಸಿ, ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಸಿದ್ಧಾರ್ಥ ಸಂಸ್ಥೆಯ ಕುರಿತು ಆರೋಪ ಮಾಡದೆ ದಾಖಲೆಗಳನ್ನು ಬಿಡುಗಡೆಗೊಳಿಸಿ ಕಾನೂನು ಮತ್ತು ಸರ್ಕಾರ ಕ್ರಮಕೈಗೊಳ್ಳಲಾಗಿದೆ. ಮೊದಲು ನಿಮ್ಮ ಮೇಲಿರುವ ಆರೋಪಗಳಿಂದ ಮುಕ್ತರಾಗಿ ಆನಂತರ ಬೇರೆಯವರ ಮೇಲೆ ಆರೋಪ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮುಖಂಡ ರೇವಣಸಿದ್ದಯ್ಯ ಮಾತನಾಡಿ, ಡಿಸಿಸಿ ಬ್ಯಾಂಕ್​ನಲ್ಲಿ ಸಾವಿರಾರು ಕೋಟಿ ಹಗರಣ ನಡೆದಿದೆ. ಬ್ಯಾಂಕ್ ತನ್ನ ಸ್ವಂತದ್ದು ಎಂಬ ರೀತಿಯಲ್ಲಿ ಬಳಸಿಕೊಂಡಿದ್ದಾರೆ. ಬ್ಯಾಂಕಿನ 11 ಅಧಿಕಾರಿಗಳನ್ನು ಮತ್ತು ನೌಕರರನ್ನು ತನ್ನ ಪ್ರಚಾರಕ್ಕೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ತುಮಕೂರು: ಡಿಸಿಸಿ ಬ್ಯಾಂಕನ್ನು ಸೂಪರ್ ಸೀಡ್ ಮಾಡುವುದಕ್ಕೂ ಜಿಲ್ಲೆಯ ಉಪಮುಖ್ಯಮಂತ್ರಿ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಆರ್.ರಾಮಕೃಷ್ಣ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲ ಅಂಶಗಳನ್ನು ಆಧಾರದ ಮೇರೆಗೆ ಜಿಲ್ಲೆಯ ಡಿಸಿಸಿ ಬ್ಯಾಂಕನ್ನು ಸೂಪರ್ ಸೀಡ್ ಮಾಡಲಾಗಿದೆ. ನಿಜವಾದ ರೈತರಿಗೆ ಸಾಲ ನೀಡಿಲ್ಲ. ಸೂಚನೆ ಮೇರೆಗೆ ಮತ್ತು ಅವರ ಹಿಂಬಾಲಕರಿಗೆ ಸಾಲ ನೀಡಲಾಗುತ್ತಿದೆ ಎಂಬ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಬ್ಯಾಂಕಿನಲ್ಲಿ ನಡೆದಿರುವ ಅವ್ಯವಹಾರಗಳನ್ನು ಕೂಲಂಕಷವಾಗಿ ತನಿಖೆ ನಡೆಸಬೇಕು ಎಂದು ಈಗಿನ ಡಿಸಿಸಿ ಬ್ಯಾಂಕ್​ನ ಆಡಳಿತಾಧಿಕಾರಿ ಮನವಿ ಸಲ್ಲಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್​ ಜಿಲ್ಲಾಧ್ಯಕ್ಷ ಆರ್.ರಾಮಕೃಷ್ಣ.

ಕಳೆದ ತಿಂಗಳು ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರ ಮಗ ಉಪಮುಖ್ಯಮಂತ್ರಿ ಹುದ್ದೆಯ ಬಗ್ಗೆ ಅವಹೇಳನಕಾರಿಯಾಗಿ ಭಿತ್ತಿ ಪತ್ರಗಳನ್ನು ಅಂಟಿಸಿ, ನನ್ನ ಮೇಲೆಯೂ ಆರೋಪ ಹೊರಿಸಿದ್ದರು. ಈಗ ಅದು ಸುಳ್ಳು ಎಂಬುದು ಬಯಲಾಗಿದೆ. ಕೋತಿ ತಿಂದು ಮೇಕೆಯ ಮೂತಿಗೆ ವರೆಸಿದ ಹಾಗಾಗಿದೆ. ಅದೇ ರೀತಿ ಕೆ.ಎನ್.ರಾಜಣ್ಣ ಮಾಡಿದ್ದಾರೆ. ಹಾಗಾಗಿ ಆಡಳಿತಾಧಿಕಾರಿ ಕಾನೂನು ರೀತಿಯ ಪರಿಶೀಲನೆ ನಡೆಸಿ, ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.

ಸಿದ್ಧಾರ್ಥ ಸಂಸ್ಥೆಯ ಕುರಿತು ಆರೋಪ ಮಾಡದೆ ದಾಖಲೆಗಳನ್ನು ಬಿಡುಗಡೆಗೊಳಿಸಿ ಕಾನೂನು ಮತ್ತು ಸರ್ಕಾರ ಕ್ರಮಕೈಗೊಳ್ಳಲಾಗಿದೆ. ಮೊದಲು ನಿಮ್ಮ ಮೇಲಿರುವ ಆರೋಪಗಳಿಂದ ಮುಕ್ತರಾಗಿ ಆನಂತರ ಬೇರೆಯವರ ಮೇಲೆ ಆರೋಪ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮುಖಂಡ ರೇವಣಸಿದ್ದಯ್ಯ ಮಾತನಾಡಿ, ಡಿಸಿಸಿ ಬ್ಯಾಂಕ್​ನಲ್ಲಿ ಸಾವಿರಾರು ಕೋಟಿ ಹಗರಣ ನಡೆದಿದೆ. ಬ್ಯಾಂಕ್ ತನ್ನ ಸ್ವಂತದ್ದು ಎಂಬ ರೀತಿಯಲ್ಲಿ ಬಳಸಿಕೊಂಡಿದ್ದಾರೆ. ಬ್ಯಾಂಕಿನ 11 ಅಧಿಕಾರಿಗಳನ್ನು ಮತ್ತು ನೌಕರರನ್ನು ತನ್ನ ಪ್ರಚಾರಕ್ಕೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದರು.

Intro:ತುಮಕೂರು: ಡಿಸಿಸಿ ಬ್ಯಾಂಕನ್ನು ಸೂಪರ್ ಸೀಡ್ ಮಾಡುವುದಕ್ಕೂ ಜಿಲ್ಲೆಯ ದಲಿತ ಉಪ ಮುಖ್ಯ ಮಂತ್ರಿಗೂ ಯಾವುದೇ ಸಂಬಂಧವಿಲ್ಲ ಎಂದು ಕಾಂಗ್ರೆಸ್ನ ಜಿಲ್ಲಾಧ್ಯಕ್ಷ ಆರ್.ರಾಮಕೃಷ್ಣ ತಿಳಿಸಿದರು.


Body:ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವೊಂದು ಅಂಶಗಳನ್ನು ಆಧಾರವಾಗಿಟ್ಟುಕೊಂಡು ಜಿಲ್ಲೆಯ ಡಿಸಿಸಿ ಬ್ಯಾಂಕನ್ನು ಸೂಪರ್ ಸೀಡ್ ಆಗಿ ಮಾಡಲಾಗಿದೆ.
ನಿಜವಾದ ರೈತರಿಗೆ ಸಾಲ ನೀಡಿದೆ, ಸೂಚನೆ ಮೇರೆಗೆ ಮತ್ತು ಅವರ ಹಿಂಬಾಲಕರಿಗೆ ಮಾತ್ರ ಸಾಲ ನೀಡಲಾಗುತ್ತಿದೆ ಎಂಬ ಅಂಶಗಳನ್ನು ಗಮನದಲ್ಲಿ ಇಟ್ಟುಕೊಂಡು ಬ್ಯಾಂಕಿನಲ್ಲಿ ನಡೆದಿರುವ ಅವ್ಯವಹಾರಗಳನ್ನು ಕೂಲಂಕುಶವಾಗಿ ತನಿಖೆ ನಡೆಸಬೇಕೆಂದು ಈಗಿನ ಡಿಸಿಸಿ ಬ್ಯಾಂಕ್ ನ ಆಡಳಿತಾಧಿಕಾರಿ ಮನವಿ ಸಲ್ಲಿಸಲಾಗುವುದು ಎಂದರು.
ಅಲ್ಲದೆ ಕಳೆದ ತಿಂಗಳು ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರ ಮಗ ಉಪ ಮುಖ್ಯ ಮಂತ್ರಿಯ ಬಗ್ಗೆ ಅವಹೇಳನಕಾರಿಯಾಗಿ ಭಿತ್ತಿಪತ್ರಗಳನ್ನು ಅಂಟಿಸಿ, ನನ್ನ ಮೇಲೆ ಆರೋಪ ಹೊರಿಸಿದರು, ಈಗ ಅದು ಬಯಲಾಗಿದೆ. ಕೋತಿ ತಿಂದು ಮೇಕೆಯ ಮೂತಿಗೆ ಬರೆಸಿದ ಹಾಗಾಗಿದೆ, ಅದೇ ರೀತಿ ಬ್ಯಾಂಕಿನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಕೆ.ಎನ್.ರಾಜಣ್ಣ ಮಾಡಿದ್ದಾರೆ. ಹಾಗಾಗಿ ಆಡಳಿತಾಧಿಕಾರಿ ಕಾನೂನು ರೀತಿಯ ಪರಿಶೀಲನೆ ನಡೆಸಿ, ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ಇನ್ನು ಸಿದ್ದಾರ್ಥ ಸಂಸ್ಥೆಯ ಬಗ್ಗೆ ಆರೋಪ ಮಾಡುವುದನ್ನು ಬಿಟ್ಟು ದಾಖಲೆಗಳನ್ನು ಬಿಡುಗಡೆ ಮಾಡಿ, ಕಾನೂನು ಮತ್ತು ಸರ್ಕಾರ ಕ್ರಮಕೈಗೊಳ್ಳಲಾಗಿದೆ. ಮೊದಲು ನಿಮ್ಮ ಮೇಲೆ ಇರುವ ಆರೋಪಗಳಿಂದ ಮುಕ್ತರಾಗಿ ಆನಂತರ ಬೇರೆಯವರ ಮೇಲೆ ಆರೋಪ ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೈಟ್: ಆರ್. ರಾಮಕೃಷ್ಣ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ.
ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ರೇವಣಸಿದ್ದಯ್ಯ, ಡಿಸಿಸಿ ಬ್ಯಾಂಕ್ ನಲ್ಲಿ ಸಾವಿರಾರು ಕೋಟಿ ಹಗರಣ ನಡೆದಿದೆ, ಬ್ಯಾಂಕ್ ತನ್ನ ಸ್ವಂತದ್ದು ಎಂಬ ರೀತಿಯಲ್ಲಿ ಬಳಸಿಕೊಂಡಿದ್ದಾರೆ. ಬ್ಯಾಂಕಿನ ೧೧ ಅಧಿಕಾರಿ ಮತ್ತು ನೌಕರರನ್ನು ತನ್ನ ಪ್ರಚಾರಕ್ಕೆ ಬೆಳೆಸಿಕೊಂಡಿದ್ದಾರೆ ಎಂದು ಆರೋಪಿಸಿದರು.
ಬೈಟ್: ರೇವಣ್ಣಸಿದ್ದಯ್ಯ, ಕಾಂಗ್ರೆಸ್ ಮುಖಂಡ


Conclusion:ವರದಿ
ಸುಧಾಕರ
Last Updated : Jul 23, 2019, 8:10 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.