ETV Bharat / state

ದೇವೇಗೌಡರು ಜಾತಿ ರಾಜಕಾರಣ ಮಾಡಿದವರಲ್ಲ: ಸಿಎಂ ಕುಮಾರಸ್ವಾಮಿ - undefined

ದೇವೇಗೌಡರು ಜಾತಿ ರಾಜಕಾರಣ ಮಾಡಿಲ್ಲ. ಅವರು ಹಿಂದುಳಿದ ವರ್ಗದ ಅಭಿವೃದ್ಧಿಗೆ ಸಣ್ಣ ಶಕ್ತಿಯನ್ನು ಧಾರೆಯೆರೆದಿದ್ದಾರೆ ಎಂದು ಸಿಎಂ ತುಮಕೂರಿನಲ್ಲಿ ಹೇಳಿದ್ದಾರೆ.

ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ
author img

By

Published : Apr 2, 2019, 9:42 AM IST

ತುಮಕೂರು: ದೇವೇಗೌಡರು ಎಂದು ಕೂಡ ಜಾತಿ ರಾಜಕಾರಣ ಮಾಡಿದವರಲ್ಲ. ಎಲ್ಲಾ ಹಿಂದುಳಿದ ವರ್ಗದವರ ಅಭಿವೃದ್ಧಿಯತ್ತ ಸಣ್ಣ ಶಕ್ತಿಯನ್ನು ಧಾರೆಯೆರೆದವರು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜಿಲ್ಲೆಯ ಚಿಕ್ಕನಾಯಕನ ಹಳ್ಳಿಯಲ್ಲಿ ನಡೆದ ಜೆಡಿಎಸ್​ ಪಕ್ಷದ ಪ್ರಚಾರ ಸಭೆಯಲ್ಲಿ ಹೇಳಿದ್ರು.

ಹೀಗಾಗಿ ದೇವೇಗೌಡರನ್ನು ಸಣ್ಣ ಸಮುದಾಯದ ಮತದಾರರು ಮರೆಯಬಾರದು ಎಂದರು. ಚಿತ್ರದುರ್ಗದಲ್ಲಿ ಯಾದವ ಸಮುದಾಯಕ್ಕೆ ಸೇರಿದ ನಿವೃತ್ತ ಅಧಿಕಾರಿ ಕೋದಂಡರಾಮಯ್ಯ, ಚಿಕ್ಕಬಳ್ಳಾಪುರದಲ್ಲಿ ಈಡೀಗ ಸಮಾಜಕ್ಕೆ ಸೇರಿದ ಆರ್.ಎಲ್ .ಜಾಲಪ್ಪ ಅವರಿಗೆ ಟಿಕೆಟ್ ನೀಡುವ ಮೂಲಕ ಸಂಸದರನ್ನಾಗಿ ಆಯ್ಕೆ ಮಾಡಿ, ಅಂದು ಲೋಕಸಭೆಗೆ ಹೆಚ್.ಡಿ.ದೇವೇಗೌಡರು ಕರೆದುಕೊಂಡು ಹೋದ್ರು. ದೇವೇಗೌಡರು ಕೇವಲ ಒಕ್ಕಲಿಗರ ಮತದಿಂದಲೇ ಗೆಲುವು ಸಾಧಿಸುತ್ತಾರೆ ಎಂಬುದು ದುರಹಂಕಾರದ ಮಾತು. ನಾಯಕ ಸಮುದಾಯದ ಮತಗಳು, ದಲಿತ ಬಂಧುಗಳ ಮತಗಳು, ಕುರುಬ ಮತ್ತು ಯಾದವ ಸಮುದಾಯದ ಮತಗಳು ಹಾಗೂ ಅವರೆಲ್ಲರ ಆಶೀರ್ವಾದ ಬೇಕಿದೆ ಎಂದರು.

ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ

ಇನ್ನು ದೇವೇಗೌಡರು ಪ್ರಧಾನಿಯಾಗಿದ್ದ ವೇಳೆ ಮುಸ್ಲಿಂ ಸಮುದಾಯದ ಸಿ.ಎಂ.ಇಬ್ರಾಹಿಂ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಿ, ಅವರಿಗೆ ಎರಡು ಪ್ರಮುಖ ಖಾತೆಗಳನ್ನು ನೀಡಿದ್ದರು. ನಾನು ಮುಖ್ಯಮಂತ್ರಿಯಾಗಿರುವ ಅವಧಿಯಲ್ಲಿ ಮೂರು ವಿಧಾನಸಭೆ ಅಧಿವೇಶನಳು ನಡೆದಿವೆ. ಆದರೆ ಚಿಕ್ಕನಾಯಕನಹಳ್ಳಿ ಬಿಜೆಪಿ ಶಾಸಕ ಜಿ. ಮಾಧುಸ್ವಾಮಿ ಮಾತ್ರ ಒಮ್ಮೆಯೂ ವಿಧಾನಸಭೆಯಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರಕ್ಕೆ ಕುಡಿಯುವ ನೀರಿನ ಸಮಸ್ಯೆ ಕುರಿತು ಪ್ರಸ್ತಾಪ ಮಾಡಿಲ್ಲ.

ಕೇವಲ ರಾಜ್ಯದ ಮೈತ್ರಿ ಸರ್ಕಾರವನ್ನು ಬೀಳಿಸಬೇಕೆಂಬ ಹುನ್ನಾರದಲ್ಲಿ ತೊಡಗಿದ್ದಾರೆ. ಅವರ ಕ್ಷೇತ್ರದ ನೀರಾವರಿ ಯೋಜನೆಗಳ ಕುರಿತು ವಿಧಾನಸಭೆಯಲ್ಲಿ ಚಕಾರ ಎತ್ತಲಿಲ್ಲ ಎಂದು ಪರೋಕ್ಷವಾಗಿ ಕಿಡಿಕಾರಿದರು. ಹೀಗಾಗಿ ಇವರಿಂದ ನಾನು ತುಮಕೂರಿಗೆ ನೀರು ತಂದು ಕೊಡಬೇಕೆಂಬ ಪಾಠವನ್ನು ಕಲಿತುಕೊಳ್ಳಬೇಕಿಲ್ಲ ಎಂದು ಮಾಧುಸ್ವಾಮಿಗೆ ಟಾಂಗ್ ನೀಡಿದರು.

ತುಮಕೂರು: ದೇವೇಗೌಡರು ಎಂದು ಕೂಡ ಜಾತಿ ರಾಜಕಾರಣ ಮಾಡಿದವರಲ್ಲ. ಎಲ್ಲಾ ಹಿಂದುಳಿದ ವರ್ಗದವರ ಅಭಿವೃದ್ಧಿಯತ್ತ ಸಣ್ಣ ಶಕ್ತಿಯನ್ನು ಧಾರೆಯೆರೆದವರು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜಿಲ್ಲೆಯ ಚಿಕ್ಕನಾಯಕನ ಹಳ್ಳಿಯಲ್ಲಿ ನಡೆದ ಜೆಡಿಎಸ್​ ಪಕ್ಷದ ಪ್ರಚಾರ ಸಭೆಯಲ್ಲಿ ಹೇಳಿದ್ರು.

ಹೀಗಾಗಿ ದೇವೇಗೌಡರನ್ನು ಸಣ್ಣ ಸಮುದಾಯದ ಮತದಾರರು ಮರೆಯಬಾರದು ಎಂದರು. ಚಿತ್ರದುರ್ಗದಲ್ಲಿ ಯಾದವ ಸಮುದಾಯಕ್ಕೆ ಸೇರಿದ ನಿವೃತ್ತ ಅಧಿಕಾರಿ ಕೋದಂಡರಾಮಯ್ಯ, ಚಿಕ್ಕಬಳ್ಳಾಪುರದಲ್ಲಿ ಈಡೀಗ ಸಮಾಜಕ್ಕೆ ಸೇರಿದ ಆರ್.ಎಲ್ .ಜಾಲಪ್ಪ ಅವರಿಗೆ ಟಿಕೆಟ್ ನೀಡುವ ಮೂಲಕ ಸಂಸದರನ್ನಾಗಿ ಆಯ್ಕೆ ಮಾಡಿ, ಅಂದು ಲೋಕಸಭೆಗೆ ಹೆಚ್.ಡಿ.ದೇವೇಗೌಡರು ಕರೆದುಕೊಂಡು ಹೋದ್ರು. ದೇವೇಗೌಡರು ಕೇವಲ ಒಕ್ಕಲಿಗರ ಮತದಿಂದಲೇ ಗೆಲುವು ಸಾಧಿಸುತ್ತಾರೆ ಎಂಬುದು ದುರಹಂಕಾರದ ಮಾತು. ನಾಯಕ ಸಮುದಾಯದ ಮತಗಳು, ದಲಿತ ಬಂಧುಗಳ ಮತಗಳು, ಕುರುಬ ಮತ್ತು ಯಾದವ ಸಮುದಾಯದ ಮತಗಳು ಹಾಗೂ ಅವರೆಲ್ಲರ ಆಶೀರ್ವಾದ ಬೇಕಿದೆ ಎಂದರು.

ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ

ಇನ್ನು ದೇವೇಗೌಡರು ಪ್ರಧಾನಿಯಾಗಿದ್ದ ವೇಳೆ ಮುಸ್ಲಿಂ ಸಮುದಾಯದ ಸಿ.ಎಂ.ಇಬ್ರಾಹಿಂ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಿ, ಅವರಿಗೆ ಎರಡು ಪ್ರಮುಖ ಖಾತೆಗಳನ್ನು ನೀಡಿದ್ದರು. ನಾನು ಮುಖ್ಯಮಂತ್ರಿಯಾಗಿರುವ ಅವಧಿಯಲ್ಲಿ ಮೂರು ವಿಧಾನಸಭೆ ಅಧಿವೇಶನಳು ನಡೆದಿವೆ. ಆದರೆ ಚಿಕ್ಕನಾಯಕನಹಳ್ಳಿ ಬಿಜೆಪಿ ಶಾಸಕ ಜಿ. ಮಾಧುಸ್ವಾಮಿ ಮಾತ್ರ ಒಮ್ಮೆಯೂ ವಿಧಾನಸಭೆಯಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರಕ್ಕೆ ಕುಡಿಯುವ ನೀರಿನ ಸಮಸ್ಯೆ ಕುರಿತು ಪ್ರಸ್ತಾಪ ಮಾಡಿಲ್ಲ.

ಕೇವಲ ರಾಜ್ಯದ ಮೈತ್ರಿ ಸರ್ಕಾರವನ್ನು ಬೀಳಿಸಬೇಕೆಂಬ ಹುನ್ನಾರದಲ್ಲಿ ತೊಡಗಿದ್ದಾರೆ. ಅವರ ಕ್ಷೇತ್ರದ ನೀರಾವರಿ ಯೋಜನೆಗಳ ಕುರಿತು ವಿಧಾನಸಭೆಯಲ್ಲಿ ಚಕಾರ ಎತ್ತಲಿಲ್ಲ ಎಂದು ಪರೋಕ್ಷವಾಗಿ ಕಿಡಿಕಾರಿದರು. ಹೀಗಾಗಿ ಇವರಿಂದ ನಾನು ತುಮಕೂರಿಗೆ ನೀರು ತಂದು ಕೊಡಬೇಕೆಂಬ ಪಾಠವನ್ನು ಕಲಿತುಕೊಳ್ಳಬೇಕಿಲ್ಲ ಎಂದು ಮಾಧುಸ್ವಾಮಿಗೆ ಟಾಂಗ್ ನೀಡಿದರು.

Intro:ಯಾವ್ದೋ ಶಕ್ತಿ ತುಮಕೂರಿಗೆ ಕರೆದುಕೊಂಡು ಬಂದಿದೆ....
ಮಾಜಿ ಪ್ರಧಾನಿ ದೇವೇಗೌಡ......

ತುಮಕೂರು
ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಂದಿರುವುದು ಯಾಕೆ ಎಂದು ನನಗೆ ಗೊತ್ತಿಲ್ಲ, ಆದರೆ ಯಾವುದೋ ಒಂದು ಶಕ್ತಿ ನನ್ನನ್ನು ಇಲ್ಲಿಗೆ ಕರೆದುಕೊಂಡು ಬಂದಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ತಿಳಿಸಿದರು.

ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಪಕ್ಷದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಾನು ಚುನಾವಣೆಯಲ್ಲಿ ನಿಲ್ಲಬಾರದು ಎಂದು ಪ್ರತಿಜ್ಞೆ ಮಾಡಿದ್ದೆ ಎಂದು ತಿಳಿಸಿದರು. ಅಲ್ಲದೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಬಂದು ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದ್ರು, ಈ ಕುರಿತು ಮೂರು ದಿನ ಯೋಚನೆ ಮಾಡಿದ್ದೇ ಎಂದು ಹೇಳಿದರು. ಕಾಂಗ್ರೆಸ್ ಮುಖಂಡ ಗುಲಾಬಿ ನಬಿ ಆಜಾದ್ ಸಂಪರ್ಕಿಸಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಬೇಕೆಂದು ಕುಮಾರಸ್ವಾಮಿಯವರಿಗೆ ತಿಳಿಸಿದ್ರು ಎಂದು ಸ್ಮರಿಸಿದರು.

ಇತ್ತೀಚಿಗೆ ನಡೆದ ಪಂಚರಾಜ್ಯಗಳ ಚುನಾವಣೆಯಲ್ಲಿ ಛತ್ತಿಸ್ಗಢ, ರಾಜಸ್ಥಾನ ದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಅಲ್ಲದೆ ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂದಿದ್ದ ಮೋದಿ ಅವರು, ಉಪಚುನಾವಣೆಯಲ್ಲಿ ಬಿಜೆಪಿ 13 ಸ್ಥಾನಗಳಲ್ಲಿ ಒಂದು ಸ್ಥಾನವನ್ನು ಮಾತ್ರ ಗೆಲುವು ಸಾಧಿಸಲು ಸಾಧ್ಯವಾಗಿಲ್ಲದಿರುವುದನ್ನು ಅರಿತುಕೊಳ್ಳಬೇಕಿದೆ. ಮಹಾಘಟಬಂಧನ್ ಮಹಾಮೇಳಾವ್ ಆಗಿದೆ ಎಂದು ಮೋದಿ ಅರ್ಥ ಮಾಡಿಕೊಳ್ಳಬೇಕು ಎಂದರು.

ಈ ರಾಷ್ಟ್ರಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧಿ ವಂಶದ ಬಗ್ಗೆ ಲಘುವಾಗಿ ಮಾತನಾಡುತ್ತೀರಾ, ಎಲ್ಲವೂ ನಿಮಗೆ ಗೊತ್ತಿಲ್ಲವೇ ಎಂದು ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದರು.




Body:ತುಮಕೂರು


Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.