ETV Bharat / state

ಗ್ರಾಮಗಳತ್ತ ಜಿಲ್ಲಾಡಳಿತ; ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುತ್ತಿರುವ ಡಿಸಿ - ಜಿಲ್ಲಾಧಿಕಾರಿ ಪಾಟೀಲ್

ಮಧುಗಿರಿ ತಾಲೂಕು ಚಿನಕವಜ್ರ ಗ್ರಾಮಕ್ಕೆ ಜಿಲ್ಲಾಧಿಕಾರಿ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ, ಹೆಚ್ಚುವರಿ ಜಿಲ್ಲಾಧಿಕಾರಿ ಚನ್ನಬಸಪ್ಪ ಸೇರಿದಂತೆ ವೈದ್ಯಕೀಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದರು.

 District administration visit to village
District administration visit to village
author img

By

Published : May 23, 2021, 8:36 PM IST

ತುಮಕೂರು: ಜಿಲ್ಲೆಯಲ್ಲಿ ಅತಿ ಹೆಚ್ಚು ಸೋಂಕಿತರು ಇರುವಂತಹ ಗ್ರಾಮಗಳಿಗೆ ಜಿಲ್ಲಾಡಳಿತ ಭೇಟಿ ನೀಡಿ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವಂತಹ ಕಾರ್ಯ ಮಾಡುತ್ತಿದೆ.

ಇಂದು ಮಧುಗಿರಿ ತಾಲೂಕು ಚಿನಕವಜ್ರ ಗ್ರಾಮಕ್ಕೆ ಜಿಲ್ಲಾಧಿಕಾರಿ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ, ಹೆಚ್ಚುವರಿ ಜಿಲ್ಲಾಧಿಕಾರಿ ಚನ್ನಬಸಪ್ಪ ಸೇರಿದಂತೆ ವೈದ್ಯಕೀಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದರು. ಸೋಂಕಿನಿಂದ ಬಳಲುತ್ತಿರುವರ ಮನೆಗಳ ಬಳಿಯೇ ತೆರಳಿ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿ, ಸೋಂಕು ಹರಡುವಿಕೆಗೆ ಅವಕಾಶ ನೀಡದಂತೆ ಎಚ್ಚರವಹಿಸಿ ಎಂದು ತಿಳಿಸಿದರು.

ಈ ಮೂಲಕ ಜಿಲ್ಲೆಯಲ್ಲಿ ರೆಡ್ ಜೋನ್ ಎಂದು ಪರಿಗಣಿಸಿರುವ ಗ್ರಾಮಗಳಿಗೆ ನಿರಂತರವಾಗಿ ಜಿಲ್ಲಾಡಳಿತ ತೆರಳಿ ಅಲ್ಲಿ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳನ್ನುಪರಿಶೀಲನೆ ನಡೆಸುತ್ತಿದೆ. ಈ ಮೂಲಕ ಗ್ರಾಮೀಣ ಭಾಗದಲ್ಲಿ ಸೋಂಕು ಹರಡುವಿಕೆ ತಡೆಗಟ್ಟಲು ಪ್ರಯತ್ನ ನಡೆಸುತ್ತಿದೆ.

ತುಮಕೂರು: ಜಿಲ್ಲೆಯಲ್ಲಿ ಅತಿ ಹೆಚ್ಚು ಸೋಂಕಿತರು ಇರುವಂತಹ ಗ್ರಾಮಗಳಿಗೆ ಜಿಲ್ಲಾಡಳಿತ ಭೇಟಿ ನೀಡಿ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವಂತಹ ಕಾರ್ಯ ಮಾಡುತ್ತಿದೆ.

ಇಂದು ಮಧುಗಿರಿ ತಾಲೂಕು ಚಿನಕವಜ್ರ ಗ್ರಾಮಕ್ಕೆ ಜಿಲ್ಲಾಧಿಕಾರಿ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿ ಕೃಷ್ಣ, ಹೆಚ್ಚುವರಿ ಜಿಲ್ಲಾಧಿಕಾರಿ ಚನ್ನಬಸಪ್ಪ ಸೇರಿದಂತೆ ವೈದ್ಯಕೀಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದರು. ಸೋಂಕಿನಿಂದ ಬಳಲುತ್ತಿರುವರ ಮನೆಗಳ ಬಳಿಯೇ ತೆರಳಿ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿ, ಸೋಂಕು ಹರಡುವಿಕೆಗೆ ಅವಕಾಶ ನೀಡದಂತೆ ಎಚ್ಚರವಹಿಸಿ ಎಂದು ತಿಳಿಸಿದರು.

ಈ ಮೂಲಕ ಜಿಲ್ಲೆಯಲ್ಲಿ ರೆಡ್ ಜೋನ್ ಎಂದು ಪರಿಗಣಿಸಿರುವ ಗ್ರಾಮಗಳಿಗೆ ನಿರಂತರವಾಗಿ ಜಿಲ್ಲಾಡಳಿತ ತೆರಳಿ ಅಲ್ಲಿ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳನ್ನುಪರಿಶೀಲನೆ ನಡೆಸುತ್ತಿದೆ. ಈ ಮೂಲಕ ಗ್ರಾಮೀಣ ಭಾಗದಲ್ಲಿ ಸೋಂಕು ಹರಡುವಿಕೆ ತಡೆಗಟ್ಟಲು ಪ್ರಯತ್ನ ನಡೆಸುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.