ETV Bharat / state

ಕಾಂಗ್ರೆಸ್ ಸೇರುವ ದುಸ್ಥಿತಿ ನನಗೆ ಬಂದಿಲ್ಲ: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ - ಬಿಜೆಪಿ ಕಾರ್ಯಕರ್ತರ ಸಭೆ

ನಾನು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುತ್ತೇನೆಂಬುದು ಸುಳ್ಳು. ಇಂತಹ ಊಹಾಪೋಹಗಳಿಗೆ ಯಾರೂ ಕಿವಿಗೊಡಬೇಡಿ ಎಂದು ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ.

madhu swamy
ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಜೆ ಸಿ ಮಾಧುಸ್ವಾಮಿ
author img

By

Published : Jul 3, 2023, 10:27 AM IST

ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಜೆ. ಸಿ. ಮಾಧುಸ್ವಾಮಿ

ತುಮಕೂರು : ನಾನು ಚುನಾವಣೆಯಲ್ಲಿ ಸೋತಾಕ್ಷಣ ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂಬುದು ಸುಳ್ಳು. ಇಂತಹ ವದಂತಿಯನ್ನು ಹಬ್ಬಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ, ಕಾಂಗ್ರೆಸ್ ಸೇರುವಂತಹ ದುಸ್ಥಿತಿ ನನಗೆ ಬಂದಿಲ್ಲ. ಇಂತಹ ವದಂತಿಗಳಿಗೆಲ್ಲ ಕಾರ್ಯಕರ್ತರು ಕಿವಿಗೊಡಬಾರದು ಮತ್ತು ಧೃತಿಗೆಡಬಾರದು ಎಂದು ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.

ಚಿಕ್ಕನಾಯಕನಹಳ್ಳಿಯಲ್ಲಿ ಭಾನುವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಸೋಲು, ಗೆಲುವು ಸಹಜ. ನಾನು ನಾಲ್ಕು ದಶಕಗಳಿಂದ ರಾಜಕೀಯ ಜೀವನದಲ್ಲಿದ್ದೇನೆ. ನನ್ನ ಸೋಲಿಗೆ ಯಾರನ್ನೂ ಹೊಣೆ ಮಾಡುವುದಿಲ್ಲ. ಅದು ನನ್ನ ಹಣೆಬರಹ. ಸೋತಾಗ ಒಂದಷ್ಟು ದಿನ ಮನಸ್ಸಿಗೆ ನೋವು ಆಗುವುದು ಸಹಜ ಎಂದರು.

ಅಧಿಕಾರಕ್ಕೋಸ್ಕರ ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರುವಂತಹ ದುಸ್ಥಿತಿ ನನಗೆ ಬಂದಿಲ್ಲ. ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಪಕ್ಷಕ್ಕೆ ಚಿರಋಣಿ. ಅಂದಿನ ಕಾಲದಲ್ಲಿ ಮೈಸೂರಿನಲ್ಲಿ ಸಾಕಷ್ಟು ವಿರೋಧವನ್ನು ಮಾಡಿಕೊಂಡು ಕಾಂಗ್ರೆಸ್ ವಿರೋಧಿಸಿಕೊಂಡು ಬಂದಿದ್ದೇನೆ, ಮುಂದೆಯೂ ವಿರೋಧಿಸುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ : ಡಬಲ್​​ ಇಂಜಿನ್ ಸರ್ಕಾರ ಏನು ಮಾಡಿದೆ ಎಂದ ಪ್ರತಿಪಕ್ಷಗಳಿಗೆ ಟಕ್ಕರ್ ಕೊಟ್ಟ ಮಾಧುಸ್ವಾಮಿ..!

ಚಿಕ್ಕನಾಯಕನಹಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಜೆ. ಸಿ. ಮಾಧುಸ್ವಾಮಿ

ತುಮಕೂರು : ನಾನು ಚುನಾವಣೆಯಲ್ಲಿ ಸೋತಾಕ್ಷಣ ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂಬುದು ಸುಳ್ಳು. ಇಂತಹ ವದಂತಿಯನ್ನು ಹಬ್ಬಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ, ಕಾಂಗ್ರೆಸ್ ಸೇರುವಂತಹ ದುಸ್ಥಿತಿ ನನಗೆ ಬಂದಿಲ್ಲ. ಇಂತಹ ವದಂತಿಗಳಿಗೆಲ್ಲ ಕಾರ್ಯಕರ್ತರು ಕಿವಿಗೊಡಬಾರದು ಮತ್ತು ಧೃತಿಗೆಡಬಾರದು ಎಂದು ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.

ಚಿಕ್ಕನಾಯಕನಹಳ್ಳಿಯಲ್ಲಿ ಭಾನುವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಸೋಲು, ಗೆಲುವು ಸಹಜ. ನಾನು ನಾಲ್ಕು ದಶಕಗಳಿಂದ ರಾಜಕೀಯ ಜೀವನದಲ್ಲಿದ್ದೇನೆ. ನನ್ನ ಸೋಲಿಗೆ ಯಾರನ್ನೂ ಹೊಣೆ ಮಾಡುವುದಿಲ್ಲ. ಅದು ನನ್ನ ಹಣೆಬರಹ. ಸೋತಾಗ ಒಂದಷ್ಟು ದಿನ ಮನಸ್ಸಿಗೆ ನೋವು ಆಗುವುದು ಸಹಜ ಎಂದರು.

ಅಧಿಕಾರಕ್ಕೋಸ್ಕರ ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಸೇರುವಂತಹ ದುಸ್ಥಿತಿ ನನಗೆ ಬಂದಿಲ್ಲ. ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಪಕ್ಷಕ್ಕೆ ಚಿರಋಣಿ. ಅಂದಿನ ಕಾಲದಲ್ಲಿ ಮೈಸೂರಿನಲ್ಲಿ ಸಾಕಷ್ಟು ವಿರೋಧವನ್ನು ಮಾಡಿಕೊಂಡು ಕಾಂಗ್ರೆಸ್ ವಿರೋಧಿಸಿಕೊಂಡು ಬಂದಿದ್ದೇನೆ, ಮುಂದೆಯೂ ವಿರೋಧಿಸುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ : ಡಬಲ್​​ ಇಂಜಿನ್ ಸರ್ಕಾರ ಏನು ಮಾಡಿದೆ ಎಂದ ಪ್ರತಿಪಕ್ಷಗಳಿಗೆ ಟಕ್ಕರ್ ಕೊಟ್ಟ ಮಾಧುಸ್ವಾಮಿ..!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.