ತುಮಕೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇರುವ ಟೋಲ್ಗಳ ಮೂಲಕ ಸಾಗುವ ವಾಹನಗಳಿಗೆ ಕಡ್ಡಾಯವಾಗಿ ಫಾಸ್ಟ್ಟ್ಯಾಗ್ ಅಳವಡಿಕೆ ಮಾಡಬೇಕೆಂಬ ನಿಯಮ ಪಾಲನೆ ಮಾಡಲು ಸಾಧ್ಯವಾಗದಂತಹ ವಾಹನ ಚಾಲಕರು ಸಿಬ್ಬಂದಿಯೊಂದಿಗೆ ಜಟಾಪಟಿ ನಡೆಸುತ್ತಿರುವುದು ಸಾಮಾನ್ಯವಾಗಿದೆ.
ಓದಿ: ರಾಜ್ಯದಲ್ಲಿ 98% ಇಂಟರ್ನೆಟ್ ಸಂಪರ್ಕ ಸಂಪೂರ್ಣ ; 100% ಆಗಲು ಒತ್ತು!
ತುಮಕೂರು ಹೊರವಲಯದಲ್ಲಿ ಸ್ಥಳೀಯ ವಾಹನಗಳ ಚಾಲಕರು ಸಿಬ್ಬಂದಿಯೊಂದಿಗೆ ಜಟಾಪಟಿ ನಡೆಸುತ್ತಿದ್ದಾರೆ. ಸ್ಥಳೀಯವಾಗಿ ಸಂಚರಿಸುವಂತಹ ವಾಹನಗಳಿಗೂ ಫಾಸ್ಟ್ಟ್ಯಾಗ್ ಇಲ್ಲದಿದ್ದರೆ ದುಪ್ಪಟ್ಟು ಸುಂಕ ವಸೂಲಿಗೆ ಮುಂದಾಗಿರುವುದು ಗೊಂದಲ ಮೂಡಿಸಿದೆ.
ಹೀಗಾಗಿ ಸ್ಥಳೀಯ ವಾಹನಗಳು ಸಂಚರಿಸಲು ಸಹಕಾರಿಯಾಗುವಂತೆ ಪ್ರತ್ಯೇಕ ಸರ್ವಿಸ್ ರಸ್ತೆಯನ್ನು ನಿರ್ಮಾಣ ಮಾಡಬೇಕು. ಈ ಮೂಲಕ ಜನರಿಗೆ ಆಗುತ್ತಿರುವ ಕಿರಿಕಿರಿಯನ್ನು ತಪ್ಪಿಸಬೇಕು. ಪ್ರಸ್ತುತ ಕೊರೊನಾ ಹೆಮ್ಮಾರಿಯಿಂದ ಈಗಾಗಲೇ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಜನಸಾಮಾನ್ಯರು ಈ ಸಂದರ್ಭದಲ್ಲಿ ಬಳಕೆ ಕಡ್ಡಾಯ ಮಾಡಿರುವ ನಿಯಮ ಪಾಲನೆ ಮಾಡಲು ಸಾಧ್ಯವಾಗುತ್ತಿಲ್ಲ. ಕೇಂದ್ರ ಸರ್ಕಾರ ಇದನ್ನು ಅರಿತು ಪರಿಸ್ಥಿತಿಯನ್ನು ಅವಲೋಕಿಸಬೇಕು ಎನ್ನುತ್ತಾರೆ ಕೆಪಿಸಿಸಿ ರಾಜ್ಯ ವಕ್ತಾರ ಮುರುಳೀಧರ್ ಹಾಲಪ್ಪ.