ETV Bharat / state

ಹರ್ಷನ ಕುಟುಂಬಕ್ಕೆ ನೈತಿಕ ಬೆಂಬಲ ಅಗತ್ಯ ಇದೆ: ಸೊಗಡು ಶಿವಣ್ಣ - ಶಿವಮೊಗ್ಗದಲ್ಲಿ ಹತ್ಯೆಗೊಳಗಾದ ಹರ್ಷ ಅವರ ಕುಟುಂಬಕ್ಕೆ ಮಾಜಿ ಸಚಿವ ಸೊಗಡುಶಿವಣ್ಣ ಧನ ಸಹಾಯ ಮಾಡಿದರು.

ಈ ಹಿಂದೆ 29 ಮಂದಿ ಹಿಂದೂಪರ ಕಾರ್ಯಕರ್ತರು ಹತ್ಯೆಗೀಡಾಗಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಹೋರಾಟಗಾರರ ಕುಟುಂಬಗಳಿಗೆ ನೈತಿಕ ಬೆಂಬಲ ನೀಡಬೇಕಿದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದ್ದಾರೆ.

Former minister Sogadu sivanna
ಮಾಜಿ ಸಚಿವ ಸೊಗಡುಶಿವಣ್ಣ
author img

By

Published : Feb 27, 2022, 5:55 PM IST

ತುಮಕೂರು: ಶಿವಮೊಗ್ಗದಲ್ಲಿ ಫೆ. 20 ರಂದು ಹತ್ಯೆಗೀಡಾದ ಹರ್ಷ ಅವರ ಕುಟುಂಬಕ್ಕೆ ತಮ್ಮ ಒಂದು ತಿಂಗಳ ಗೌರವಧನವನ್ನು ನೀಡುವುದಾಗಿ ಮಾಜಿ ಸಚಿವ ಸೊಗಡು ಶಿವಣ್ಣ ತಿಳಿಸಿದ್ದಾರೆ.

ಮಾಜಿ ಸಚಿವ ಸೊಗಡುಶಿವಣ್ಣ

ನಗರದಲ್ಲಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ 29 ಮಂದಿ ಹಿಂದೂಪರ ಕಾರ್ಯಕರ್ತರ ಹತ್ಯೆಯಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಹೋರಾಟಗಾರರ ಕುಟುಂಬಗಳಿಗೆ ನೈತಿಕ ಬೆಂಬಲ ನೀಡುವ ಅವಶ್ಯಕತೆ ಇದೆ ಎಂದರು.

ಬಿಜೆಪಿ ಮುಖಂಡರು ಹರ್ಷ ಅವರ ಕುಟುಂಬಕ್ಕೆ ಸಹಾಯ ಮಾಡಿದ್ದಾರೆ. ಬೆಳೆದು ನಿಂತ ಮಗನನ್ನು ಕಳೆದುಕೊಂಡ ಕುಟುಂಬಕ್ಕೆ ಸಹಾಯವಾಗಿ ನಿಲ್ಲುವ ಅಗತ್ಯ ಇದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಉಕ್ರೇನ್‌ನಿಂದ ದೆಹಲಿಗೆ ಬಂದಿಳಿದ ದಾವಣಗೆರೆಯ ಇಬ್ಬರು ವಿದ್ಯಾರ್ಥಿಗಳು

ತುಮಕೂರು: ಶಿವಮೊಗ್ಗದಲ್ಲಿ ಫೆ. 20 ರಂದು ಹತ್ಯೆಗೀಡಾದ ಹರ್ಷ ಅವರ ಕುಟುಂಬಕ್ಕೆ ತಮ್ಮ ಒಂದು ತಿಂಗಳ ಗೌರವಧನವನ್ನು ನೀಡುವುದಾಗಿ ಮಾಜಿ ಸಚಿವ ಸೊಗಡು ಶಿವಣ್ಣ ತಿಳಿಸಿದ್ದಾರೆ.

ಮಾಜಿ ಸಚಿವ ಸೊಗಡುಶಿವಣ್ಣ

ನಗರದಲ್ಲಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ 29 ಮಂದಿ ಹಿಂದೂಪರ ಕಾರ್ಯಕರ್ತರ ಹತ್ಯೆಯಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಹೋರಾಟಗಾರರ ಕುಟುಂಬಗಳಿಗೆ ನೈತಿಕ ಬೆಂಬಲ ನೀಡುವ ಅವಶ್ಯಕತೆ ಇದೆ ಎಂದರು.

ಬಿಜೆಪಿ ಮುಖಂಡರು ಹರ್ಷ ಅವರ ಕುಟುಂಬಕ್ಕೆ ಸಹಾಯ ಮಾಡಿದ್ದಾರೆ. ಬೆಳೆದು ನಿಂತ ಮಗನನ್ನು ಕಳೆದುಕೊಂಡ ಕುಟುಂಬಕ್ಕೆ ಸಹಾಯವಾಗಿ ನಿಲ್ಲುವ ಅಗತ್ಯ ಇದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಉಕ್ರೇನ್‌ನಿಂದ ದೆಹಲಿಗೆ ಬಂದಿಳಿದ ದಾವಣಗೆರೆಯ ಇಬ್ಬರು ವಿದ್ಯಾರ್ಥಿಗಳು

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.