ತುಮಕೂರು : ಗ್ರಾಮಾಂತರ ಮಾಜಿ ಶಾಸಕ ಸುರೇಶ್ ಗೌಡ ಹಿಂದಿನ ಸೋಲನ್ನು ಅರಗಿಸಿಕೊಳ್ಳಲಾಗದೆ, ವಿಚಿತ್ರವಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್ ತರಾಟೆಗೆ ತೆಗೆದುಕೊಂಡಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ದೇವೇಗೌಡರ ಸ್ಪರ್ಧೆಯಿಂದ ದೊಡ್ಡ ಶಾಕ್ ನೀಡಿದ್ದಾರೆ. ನನ್ನ ತಂದೆ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರ ಆರೋಗ್ಯ ಸುಧಾರಿಸಿದ್ರೆ ಸಾಕು ಅನ್ನೋ ಯೋಚನೆಯಲ್ಲಿದ್ದೇವೆ ಎಂದರು.
ಬಿಜೆಪಿ ಮುಖಂಡರು ಮಾಜಿ ಶಾಸಕ ಸುರೇಶ ಗೌಡರನ್ನು ಕರೆದು ಬುದ್ಧಿ ಹೇಳಬೇಕು. ಚುನಾವಣೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಸುರೇಶ್ ಗೌಡ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ತಿಳಿಸಿದರು.
ಅಲ್ಲದೆ ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡುವುದಾಗಿ ತಿಳಿಸಿದರು. ನಮ್ಮ ಕುಟುಂಬ ಹಾಗೂ ದೇವೇಗೌಡ, ಕುಮಾರಸ್ವಾಮಿ ಮಾತನಾಡಿದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.