ETV Bharat / state

ನ್ಯಾಯಬೆಲೆ ಅಂಗಡಿಗಳಿಗೆ ಶಾಸಕರ ದಿಢೀರ್ ಭೇಟಿ, ಪರಿಶೀಲನೆ - ನ್ಯಾಯ ಬೆಲೆ ಅಂಗಡಿಗಳಿಗೆ ಶಾಸಕರ ದಿಢೀರ್ ಭೇಟಿ

ತುಮಕೂರಿನಲ್ಲಿ ಪಡಿತರ ವಿತರಣೆಗೆ ನ್ಯಾಯಬೆಲೆ ಅಂಗಡಿ ಮಾಲೀಕರು ಹಣ ಪಡೆಯುತ್ತಿದ್ದಾರೆ ಎಂಬ ದೂರಿನ ಮೇಲೆ ಶಾಸಕ ಜ್ಯೋತಿ ಗಣೇಶ್​ ದಿಢೀರ್​ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Fraud in ration shops
ನ್ಯಾಯಬೆಲೆ ಅಂಗಡಿಗಳಿಗೆ ಶಾಸಕರ ದಿಢೀರ್ ಭೇಟಿ
author img

By

Published : Apr 9, 2020, 4:59 PM IST

Updated : Apr 10, 2020, 9:57 AM IST

ತುಮಕೂರು: ಕೆಲ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಗೆ ಜನರಿಂದ ಹಣ ಪಡೆಯುತ್ತಿದ್ದಾರೆ ಎಂಬ ದೂರಿನ ಅನ್ವಯ ಶಾಸಕ ಜ್ಯೋತಿ ಗಣೇಶ್​​ ನ್ಯಾಯಬೆಲೆ ಅಂಗಡಿಗಳಿಗೆ ದಿಢೀರ್​ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೊರೊನಾ ಸೋಂಕಿನ ಹಿನ್ನೆಲೆ ಸಂಕಷ್ಟದಲ್ಲಿನ ಜನರಿಗೆ ಉಚಿತವಾಗಿ ಅಕ್ಕಿ ಮತ್ತು ಗೋಧಿ ವಿತರಿಸುವಂತೆ ಸರ್ಕಾರ ಸೂಚನೆ ನೀಡಿದ್ದರೂ ನ್ಯಾಯಬೆಲೆ ಅಂಗಡಿ ಮಾಲೀಕರು ವಂಚಿಸುವ ಪ್ರಕರಣಗಳು ಕೇಳಿಬರುತ್ತಿವೆ. ಅದಕ್ಕಾಗಿ ಪರಿಶೀಲನೆ ಮಾಡಲಾಗುತ್ತಿದೆ ಎಂದರು.

ನಗರದ 5 ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿದರು. ವಂಚನೆ ಕಂಡುಬಂದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

ತುಮಕೂರು: ಕೆಲ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಗೆ ಜನರಿಂದ ಹಣ ಪಡೆಯುತ್ತಿದ್ದಾರೆ ಎಂಬ ದೂರಿನ ಅನ್ವಯ ಶಾಸಕ ಜ್ಯೋತಿ ಗಣೇಶ್​​ ನ್ಯಾಯಬೆಲೆ ಅಂಗಡಿಗಳಿಗೆ ದಿಢೀರ್​ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೊರೊನಾ ಸೋಂಕಿನ ಹಿನ್ನೆಲೆ ಸಂಕಷ್ಟದಲ್ಲಿನ ಜನರಿಗೆ ಉಚಿತವಾಗಿ ಅಕ್ಕಿ ಮತ್ತು ಗೋಧಿ ವಿತರಿಸುವಂತೆ ಸರ್ಕಾರ ಸೂಚನೆ ನೀಡಿದ್ದರೂ ನ್ಯಾಯಬೆಲೆ ಅಂಗಡಿ ಮಾಲೀಕರು ವಂಚಿಸುವ ಪ್ರಕರಣಗಳು ಕೇಳಿಬರುತ್ತಿವೆ. ಅದಕ್ಕಾಗಿ ಪರಿಶೀಲನೆ ಮಾಡಲಾಗುತ್ತಿದೆ ಎಂದರು.

ನಗರದ 5 ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿದರು. ವಂಚನೆ ಕಂಡುಬಂದಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

Last Updated : Apr 10, 2020, 9:57 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.