ETV Bharat / state

ಮತ್ತೆ ಟ್ರಸ್ಟ್​ ವ್ಯಾಪ್ತಿಗೊಳಪಟ್ಟ ಗೊರವನಹಳ್ಳಿ ಲಕ್ಷ್ಮಿ ದೇವಾಲಯ ಆಡಳಿತ!

author img

By

Published : Mar 4, 2021, 8:36 AM IST

Updated : Mar 4, 2021, 10:27 AM IST

ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಪ್ರಸಿದ್ಧ ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯದ ಆಡಳಿತ ಮತ್ತೆ ಚಾರಿಟಬಲ್​ ಟ್ರಸ್ಟ್​ ವ್ಯಾಪ್ತಿಗೆ ಒಳಪಟ್ಟಿದೆ.

Goravanahalli
ಗೊರವನಹಳ್ಳಿ ಲಕ್ಷ್ಮೀ ದೇವಾಲಯ

ತುಮಕೂರು: ಆಡಳಿತ ಮಂಡಳಿಯಲ್ಲಿನ ಅನೇಕ ವಿವಾದದಿಂದಾಗಿ ಆರು ವರ್ಷಗಳ ಹಿಂದೆ ಸರ್ಕಾರದ ಹಿಡಿತಕ್ಕೆ ಒಳಪಟ್ಟಿದ್ದ ಗೋರವನಹಳ್ಳಿ ವರಮಹಾಲಕ್ಷ್ಮಿ ದೇವಾಲಯವನ್ನು ಇದೀಗ ನ್ಯಾಯಾಲಯದ ಆದೇಶದಂತೆ ಟ್ರಸ್ಟಿಗೆ ವಹಿಸಲಾಗಿದೆ.

ರಾಜ್ಯದ ಪ್ರಸಿದ್ದ ಲಕ್ಷ್ಮಿ ದೇವಾಲಯಕ್ಕೆ ರಾಜ್ಯ ಮಾತ್ರವಲ್ಲದೇ ನೆರೆ ರಾಜ್ಯಗಳಿಂದ ಅನೇಕ ಭಕ್ತರು ಆಗಮಿಸಿ ದೇವಿ ದರ್ಶನ ಪಡೆಯುತ್ತಾರೆ. ಈ ದೇವಾಲಯ ಆರು ವರ್ಷಗಳ ಹಿಂದೆ ಮಧುಗಿರಿ ಉಪವಿಭಾಗಾಧಿಕಾರಿ ಆಡಳಿತಕ್ಕೆ ಒಳಪಟ್ಟಿತ್ತು. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಪ್ರಸಿದ್ಧ ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯದ ಆಡಳಿತವನ್ನು ಹೈಕೋರ್ಟ್​ ನ ಆದೇಶದ ಮೇರೆಗೆ ಇದೀಗ ಮತ್ತೆ ಮಹಾಲಕ್ಷ್ಮಿ ಚಾರಿಟಬಲ್ ಟ್ರಸ್ಟ್‌ಗೆ ಹಸ್ತಾಂತರಿಸಲಾಗಿದೆ.

ಗೊರವನಹಳ್ಳಿ ಲಕ್ಷ್ಮಿ ದೇವಾಲಯ

ಈ ಹಿಂದೆ ದೇವಾಲಯದ ಟ್ರಸ್ಟ್​ನ ಸುಪರ್ದಿಯಲ್ಲಿತ್ತು. 2015ರ ಮಾರ್ಚ್‌ನಲ್ಲಿ ಮಹಾಲಕ್ಷ್ಮಿ ಚಾರಿಟಬಲ್ ಟ್ರಸ್ಟ್‌ನಲ್ಲಿ ಉಂಟಾದ ವಿವಾದದಿಂದಾಗಿ ತಹಶೀಲ್ದಾರ್ ವರದಿ ಆಧಾರದಲ್ಲಿ ದೇವಾಲಯದ ಆಡಳಿತವನ್ನು ಧಾರ್ಮಿಕ ದತ್ತಿ ಇಲಾಖೆಗೆ ವಹಿಸಿಕೊಂಡಿತ್ತು. ಬಳಿಕ ಇದರ ಜವಾಬ್ದಾರಿಯನ್ನು ಮಧುಗಿರಿ ಉಪವಿಭಾಗಾಧಿಕಾರಿಗಳಿಗೆ ನೀಡಲಾಗಿತ್ತು. ನಂತರ ಅದೇ ಉಪವಿಭಾಗಾಧಿಕಾರಿಯನ್ನು ಈ ದೇವಾಲಯದ ಆಡಳಿತ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿತ್ತು. ಇದೀಗ ಸತತ ಆರು ವರ್ಷಗಳ ಬಳಿಕ ಈ ದೇವಾಲಯವನ್ನು ಮತ್ತೆ ಮಹಾಲಕ್ಷ್ಮಿ ದೇವಾಲಯದ ಆಡಳಿತ ಮಂಡಳಿಗೆ ಹಸ್ತಾಂತರಿಸುವಂತೆ ಹೈಕೋರ್ಟ್ ಆದೇಶ ನೀಡಿದೆ.

ಇನ್ನೂ ಈ ನಿರ್ಧಾರದ ವಿರುದ್ಧ ಟ್ರಸ್ಟ್ ಸದಸ್ಯರು ಹೈಕೋರ್ಟ್ ಮೊರೆ ಹೋಗಿದ್ದರು. ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ನಿಯಮಾನುಸಾರ ದೇವಾಲಯದ ಆಡಳಿತವನ್ನು ಕಳೆದ ಆರು ವರ್ಷಗಳಿಂದ ಮಧುಗಿರಿ ಉಪವಿಭಾಗಾಧಿಕಾರಿಗಳ ಆಡಳಿತದಲ್ಲೇ ನಡೆಸಲಾಗುತ್ತಿತ್ತು. ಕಾಯ್ದೆಯ ಅನುಸಾರ ದೇವಸ್ಥಾನವನ್ನು ಘೋಷಿತ ಸಂಸ್ಥೆಯೆಂದು ಅಂತಿಮ ತೀರ್ಪು ನೀಡುವವರೆಗೆ ದೇವಾಲಯದ ಆಡಳಿತವನ್ನು ಟ್ರಸ್ಟ್ ವಹಿಸಿಕೊಳ್ಳಬಹುದು. ಆದರೆ, ಸಾರ್ವಜನಿಕರ ವಂತಿಗೆ ಸೇರಿದಂತೆ ಇತರ ಮಹತ್ವದ ತೀರ್ಮಾನ ತೆಗೆದುಕೊಳ್ಳದಂತೆ ಷರತ್ತು ವಿಧಿಸಿದೆ.

ದೇವಾಲಯದ ದಾಖಲೆ ಪತ್ರಗಳನ್ನು ಪ್ರತಿ ತಿಂಗಳು ಜಿಲ್ಲಾಧಿಕಾರಿ ಗಮನಕ್ಕೆ ತರುವಂತೆ ಆದೇಶಿಸಿದೆ. ಮಧುಗಿರಿ ಉಪವಿಭಾಗಾಧಿಕಾರಿ ಸೋಮಪ್ಪ ಕಡಕೊಳ ಅವರು ದೇವಾಲಯದ ಸಂಪೂರ್ಣ ಆಡಳಿತವನ್ನು ಟ್ರಸ್ಟ್ ಅಧ್ಯಕ್ಷ ಟಿ.ಆರ್.ಶ್ರೀರಂಗಯ್ಯ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿದ್ದಾರೆ.

ಇಲ್ಲಿಯವರೆಗೆ ನಡೆಯುತ್ತಿದ್ದ ದೇವಾಲಯದ ಪ್ರತಿಯೊಂದು ಕಾರ್ಯಕ್ರಮಗಳು ಮತ್ತಷ್ಟು ಉತ್ಸಾಹದಿಂದ ನಡೆಯಲಿದೆ ಎಂದು ಭಕ್ತರು ತಮ್ಮ ಆಶಯ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ಮೊದಲಿನಂತೆ ಇದೀಗ ದೇವಾಲಯದ ಆಡಳಿತವನ್ನು ಮಹಾಲಕ್ಷ್ಮಿ ದೇವಸ್ಥಾನದ ಟ್ರಸ್ಟ್ ವಹಿಸಿಕೊಂಡಿದ್ದು, ಮತ್ತೆ ಯಾವುದೇ ಭಿನ್ನಾಭಿಪ್ರಾಯಗಳಿಗೆ ಎಡೆಮಾಡಿ ಕೊಡದಂತೆ ಆಡಳಿತವನ್ನು ಮುಂದುವರಿಸಿಕೊಂಡು ಹೋಗುವ ವಿಶ್ವಾಸ ಆಡಳಿತ ಮಂಡಳಿಯದ್ದಾಗಿದೆ.

ತುಮಕೂರು: ಆಡಳಿತ ಮಂಡಳಿಯಲ್ಲಿನ ಅನೇಕ ವಿವಾದದಿಂದಾಗಿ ಆರು ವರ್ಷಗಳ ಹಿಂದೆ ಸರ್ಕಾರದ ಹಿಡಿತಕ್ಕೆ ಒಳಪಟ್ಟಿದ್ದ ಗೋರವನಹಳ್ಳಿ ವರಮಹಾಲಕ್ಷ್ಮಿ ದೇವಾಲಯವನ್ನು ಇದೀಗ ನ್ಯಾಯಾಲಯದ ಆದೇಶದಂತೆ ಟ್ರಸ್ಟಿಗೆ ವಹಿಸಲಾಗಿದೆ.

ರಾಜ್ಯದ ಪ್ರಸಿದ್ದ ಲಕ್ಷ್ಮಿ ದೇವಾಲಯಕ್ಕೆ ರಾಜ್ಯ ಮಾತ್ರವಲ್ಲದೇ ನೆರೆ ರಾಜ್ಯಗಳಿಂದ ಅನೇಕ ಭಕ್ತರು ಆಗಮಿಸಿ ದೇವಿ ದರ್ಶನ ಪಡೆಯುತ್ತಾರೆ. ಈ ದೇವಾಲಯ ಆರು ವರ್ಷಗಳ ಹಿಂದೆ ಮಧುಗಿರಿ ಉಪವಿಭಾಗಾಧಿಕಾರಿ ಆಡಳಿತಕ್ಕೆ ಒಳಪಟ್ಟಿತ್ತು. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಪ್ರಸಿದ್ಧ ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯದ ಆಡಳಿತವನ್ನು ಹೈಕೋರ್ಟ್​ ನ ಆದೇಶದ ಮೇರೆಗೆ ಇದೀಗ ಮತ್ತೆ ಮಹಾಲಕ್ಷ್ಮಿ ಚಾರಿಟಬಲ್ ಟ್ರಸ್ಟ್‌ಗೆ ಹಸ್ತಾಂತರಿಸಲಾಗಿದೆ.

ಗೊರವನಹಳ್ಳಿ ಲಕ್ಷ್ಮಿ ದೇವಾಲಯ

ಈ ಹಿಂದೆ ದೇವಾಲಯದ ಟ್ರಸ್ಟ್​ನ ಸುಪರ್ದಿಯಲ್ಲಿತ್ತು. 2015ರ ಮಾರ್ಚ್‌ನಲ್ಲಿ ಮಹಾಲಕ್ಷ್ಮಿ ಚಾರಿಟಬಲ್ ಟ್ರಸ್ಟ್‌ನಲ್ಲಿ ಉಂಟಾದ ವಿವಾದದಿಂದಾಗಿ ತಹಶೀಲ್ದಾರ್ ವರದಿ ಆಧಾರದಲ್ಲಿ ದೇವಾಲಯದ ಆಡಳಿತವನ್ನು ಧಾರ್ಮಿಕ ದತ್ತಿ ಇಲಾಖೆಗೆ ವಹಿಸಿಕೊಂಡಿತ್ತು. ಬಳಿಕ ಇದರ ಜವಾಬ್ದಾರಿಯನ್ನು ಮಧುಗಿರಿ ಉಪವಿಭಾಗಾಧಿಕಾರಿಗಳಿಗೆ ನೀಡಲಾಗಿತ್ತು. ನಂತರ ಅದೇ ಉಪವಿಭಾಗಾಧಿಕಾರಿಯನ್ನು ಈ ದೇವಾಲಯದ ಆಡಳಿತ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿತ್ತು. ಇದೀಗ ಸತತ ಆರು ವರ್ಷಗಳ ಬಳಿಕ ಈ ದೇವಾಲಯವನ್ನು ಮತ್ತೆ ಮಹಾಲಕ್ಷ್ಮಿ ದೇವಾಲಯದ ಆಡಳಿತ ಮಂಡಳಿಗೆ ಹಸ್ತಾಂತರಿಸುವಂತೆ ಹೈಕೋರ್ಟ್ ಆದೇಶ ನೀಡಿದೆ.

ಇನ್ನೂ ಈ ನಿರ್ಧಾರದ ವಿರುದ್ಧ ಟ್ರಸ್ಟ್ ಸದಸ್ಯರು ಹೈಕೋರ್ಟ್ ಮೊರೆ ಹೋಗಿದ್ದರು. ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ನಿಯಮಾನುಸಾರ ದೇವಾಲಯದ ಆಡಳಿತವನ್ನು ಕಳೆದ ಆರು ವರ್ಷಗಳಿಂದ ಮಧುಗಿರಿ ಉಪವಿಭಾಗಾಧಿಕಾರಿಗಳ ಆಡಳಿತದಲ್ಲೇ ನಡೆಸಲಾಗುತ್ತಿತ್ತು. ಕಾಯ್ದೆಯ ಅನುಸಾರ ದೇವಸ್ಥಾನವನ್ನು ಘೋಷಿತ ಸಂಸ್ಥೆಯೆಂದು ಅಂತಿಮ ತೀರ್ಪು ನೀಡುವವರೆಗೆ ದೇವಾಲಯದ ಆಡಳಿತವನ್ನು ಟ್ರಸ್ಟ್ ವಹಿಸಿಕೊಳ್ಳಬಹುದು. ಆದರೆ, ಸಾರ್ವಜನಿಕರ ವಂತಿಗೆ ಸೇರಿದಂತೆ ಇತರ ಮಹತ್ವದ ತೀರ್ಮಾನ ತೆಗೆದುಕೊಳ್ಳದಂತೆ ಷರತ್ತು ವಿಧಿಸಿದೆ.

ದೇವಾಲಯದ ದಾಖಲೆ ಪತ್ರಗಳನ್ನು ಪ್ರತಿ ತಿಂಗಳು ಜಿಲ್ಲಾಧಿಕಾರಿ ಗಮನಕ್ಕೆ ತರುವಂತೆ ಆದೇಶಿಸಿದೆ. ಮಧುಗಿರಿ ಉಪವಿಭಾಗಾಧಿಕಾರಿ ಸೋಮಪ್ಪ ಕಡಕೊಳ ಅವರು ದೇವಾಲಯದ ಸಂಪೂರ್ಣ ಆಡಳಿತವನ್ನು ಟ್ರಸ್ಟ್ ಅಧ್ಯಕ್ಷ ಟಿ.ಆರ್.ಶ್ರೀರಂಗಯ್ಯ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿದ್ದಾರೆ.

ಇಲ್ಲಿಯವರೆಗೆ ನಡೆಯುತ್ತಿದ್ದ ದೇವಾಲಯದ ಪ್ರತಿಯೊಂದು ಕಾರ್ಯಕ್ರಮಗಳು ಮತ್ತಷ್ಟು ಉತ್ಸಾಹದಿಂದ ನಡೆಯಲಿದೆ ಎಂದು ಭಕ್ತರು ತಮ್ಮ ಆಶಯ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ಮೊದಲಿನಂತೆ ಇದೀಗ ದೇವಾಲಯದ ಆಡಳಿತವನ್ನು ಮಹಾಲಕ್ಷ್ಮಿ ದೇವಸ್ಥಾನದ ಟ್ರಸ್ಟ್ ವಹಿಸಿಕೊಂಡಿದ್ದು, ಮತ್ತೆ ಯಾವುದೇ ಭಿನ್ನಾಭಿಪ್ರಾಯಗಳಿಗೆ ಎಡೆಮಾಡಿ ಕೊಡದಂತೆ ಆಡಳಿತವನ್ನು ಮುಂದುವರಿಸಿಕೊಂಡು ಹೋಗುವ ವಿಶ್ವಾಸ ಆಡಳಿತ ಮಂಡಳಿಯದ್ದಾಗಿದೆ.

Last Updated : Mar 4, 2021, 10:27 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.