ತುಮಕೂರು : ನಗರದ ಹೊರವಲಯದ ಕ್ಯಾತ್ಸಂದ್ರ ಟೋಲ್ ಬಳಿ ಅನುಮತಿಯಿಲ್ಲದೆ ಪ್ರಯಾಣಿಕರನ್ನು ತುಂಬಿಕೊಂಡು ಸಂಚರಿಸುತ್ತಿದ್ದ ಎರಡು ಖಾಸಗಿ ಬಸ್'ಗಳನ್ನು ತುಮಕೂರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ರಾಜ್ಯಾದ್ಯಂತ ಕೋವಿಡ್ ನಿಯಮಗಳು ಜಾರಿಯಲ್ಲಿದ್ದು, ಖಾಸಗಿ ಬಸ್ ಸಂಚಾರ ಸ್ಥಗಿತವಿದೆ.
ಈ ನಡುವೆ ಸರ್ಕಾರ ಅಥವಾ ಸಾರಿಗೆ ಇಲಾಖೆಯಿಂದ ಪೂರ್ವಾನುಮತಿಯಿಲ್ಲದೆ ಹೊರ ರಾಜ್ಯಕ್ಕೆ ಸೇರಿದ ಎರಡು ಬಸ್ಸುಗಳು ಪ್ರಯಾಣಿಕರನ್ನು ತುಂಬಿಕೊಂಡು ರಾಜಸ್ಥಾನಕ್ಕೆ ತೆರಳುತ್ತಿದ್ದವು. ಈ ಬಗ್ಗೆ ಮಾಹಿತಿ ಸಂಗ್ರಹಿಸಿದ ಸಾರಿಗೆ ಇಲಾಖೆ ಅಧಿಕಾರಿಗಳು ಕ್ಯಾತ್ಸಂದ್ರ ಟೋಲ್ ಬಳಿ ಬಸ್'ಗಳನ್ನು ಅಡ್ಡಗಟ್ಟಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.