ETV Bharat / state

ಇಂದಿರಾ ಕ್ಯಾಂಟೀನ್​​​ ಹೆಸರು ಬದಲಿಸಲು ಆಗ್ರಹ: ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ - ತುಮಕೂರು

ರಾಜ್ಯದ ವಿವಿಧೆಡೆ ಅಸ್ತಿತ್ವಕ್ಕೆ ಬಂದಿದ್ದ ಇಂದಿರಾ ಕ್ಯಾಂಟೀನ್ ಮರುನಾಮಕರಣ ವಿಚಾರಕ್ಕೆ ಸಂಬಂಧಿಸಿದಂತೆ ತ್ರಿವಿಧ ದಾಸೋಹದ ಪರಿಕಲ್ಪನೆಗೆ ಹೆಸರಾಗಿದ್ದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಹೆಸರು ಇಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿಅಭಿಯಾನ ಆರಂಭಿಸಿದ್ದಾರೆ.

ಇಂದಿರಾ ಕ್ಯಾಂಟೀನ್​ ಮರುನಾಮಕರಣಕ್ಕೆ ಆಗ್ರಹ
author img

By

Published : Aug 10, 2019, 5:28 PM IST

Updated : Aug 10, 2019, 5:50 PM IST

ತುಮಕೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯದ ವಿವಿಧೆಡೆ ಅಸ್ತಿತ್ವಕ್ಕೆ ಬಂದಿದ್ದ ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿಅಭಿಯಾನ ಆರಂಭಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ಮರುನಾಮಕರಣ ವಿಚಾರಕ್ಕೆ ಸಂಬಂಧಿಸಿದಂತೆ ಇಂದಿರಾ ಬದಲು ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಹೆಸರನ್ನು ಇಡಬೇಕೆಂದು ನೆಟ್ಟಿಗರು ಆಗ್ರಹಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಭಕ್ತರು ಮತ್ತು ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತಿದ್ದಾರೆ. ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುತ್ತಿದ್ದಂತೆ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿದೆ. ತ್ರಿವಿಧ ದಾಸೋಹದ ಪರಿಕಲ್ಪನೆಗೆ ಹೆಸರಾಗಿದ್ದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಹೆಸರು ಇಡುವಂತೆ ಆಗ್ರಹಿಸಿ ಅಭಿಯಾನ ಶುರುವಾಗಿದೆ.

ಇಂದಿರಾ ಕ್ಯಾಂಟೀನ್​ ಮರುನಾಮಕರಣಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ

ಹಿಂದಿನ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಗಳಲ್ಲಿ ಒಂದಾದ ಇಂದಿರಾ ಕ್ಯಾಂಟೀನ್‍ನ ಹೆಸರು ಬದಲಾವಣೆ ಮಾಡುವ ಒತ್ತಾಯದ ಕೂಗು ಜೋರಾಗುತ್ತಿದೆ. ಒಂದೆಡೆ ಬಿಜೆಪಿ ಕಾರ್ಯಕರ್ತರು ಹಾಗೂ ಬಿಜೆಪಿ ಅಭಿಮಾನಿಗಳು ಯಾರು ಕೂಡ ಇಂದಿರಾ ಕ್ಯಾಂಟೀನ್​​ಗೆ ಹೋಗಿ ಉಪಹಾರ ಸೇವಿಸುತ್ತಿಲ್ಲ. ಇದು ಒಂದು ರೀತಿಯ ಮುಜುಗರಕ್ಕೆ ಈಡು ಮಾಡುತ್ತಿದೆ. ಹೀಗಾಗಿ ಎಲ್ಲಾ ಪಕ್ಷದವರು, ಎಲ್ಲಾ ಸಮುದಾಯದವರು ಸರ್ಕಾರದ ಯೋಜನೆಯ ಸೌಲಭ್ಯ ಪಡೆಯುವಂತೆ ಆಗಬೇಕಾಗಿದೆ. ಹೀಗಾಗಿ ಶ್ರೀ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ಇಟ್ಟರೆ ಸೂಕ್ತ ಎಂಬ ಮಾತುಗಳು ಬಿಜೆಪಿ ಕಾರ್ಯಕರ್ತರಿಂದ ವ್ಯಕ್ತವಾಗುತ್ತಿದೆ.

ತುಮಕೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯದ ವಿವಿಧೆಡೆ ಅಸ್ತಿತ್ವಕ್ಕೆ ಬಂದಿದ್ದ ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿಅಭಿಯಾನ ಆರಂಭಿಸಿದ್ದಾರೆ.

ಇಂದಿರಾ ಕ್ಯಾಂಟೀನ್ ಮರುನಾಮಕರಣ ವಿಚಾರಕ್ಕೆ ಸಂಬಂಧಿಸಿದಂತೆ ಇಂದಿರಾ ಬದಲು ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಹೆಸರನ್ನು ಇಡಬೇಕೆಂದು ನೆಟ್ಟಿಗರು ಆಗ್ರಹಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಭಕ್ತರು ಮತ್ತು ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತಿದ್ದಾರೆ. ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುತ್ತಿದ್ದಂತೆ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿದೆ. ತ್ರಿವಿಧ ದಾಸೋಹದ ಪರಿಕಲ್ಪನೆಗೆ ಹೆಸರಾಗಿದ್ದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಹೆಸರು ಇಡುವಂತೆ ಆಗ್ರಹಿಸಿ ಅಭಿಯಾನ ಶುರುವಾಗಿದೆ.

ಇಂದಿರಾ ಕ್ಯಾಂಟೀನ್​ ಮರುನಾಮಕರಣಕ್ಕೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ

ಹಿಂದಿನ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಗಳಲ್ಲಿ ಒಂದಾದ ಇಂದಿರಾ ಕ್ಯಾಂಟೀನ್‍ನ ಹೆಸರು ಬದಲಾವಣೆ ಮಾಡುವ ಒತ್ತಾಯದ ಕೂಗು ಜೋರಾಗುತ್ತಿದೆ. ಒಂದೆಡೆ ಬಿಜೆಪಿ ಕಾರ್ಯಕರ್ತರು ಹಾಗೂ ಬಿಜೆಪಿ ಅಭಿಮಾನಿಗಳು ಯಾರು ಕೂಡ ಇಂದಿರಾ ಕ್ಯಾಂಟೀನ್​​ಗೆ ಹೋಗಿ ಉಪಹಾರ ಸೇವಿಸುತ್ತಿಲ್ಲ. ಇದು ಒಂದು ರೀತಿಯ ಮುಜುಗರಕ್ಕೆ ಈಡು ಮಾಡುತ್ತಿದೆ. ಹೀಗಾಗಿ ಎಲ್ಲಾ ಪಕ್ಷದವರು, ಎಲ್ಲಾ ಸಮುದಾಯದವರು ಸರ್ಕಾರದ ಯೋಜನೆಯ ಸೌಲಭ್ಯ ಪಡೆಯುವಂತೆ ಆಗಬೇಕಾಗಿದೆ. ಹೀಗಾಗಿ ಶ್ರೀ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ಇಟ್ಟರೆ ಸೂಕ್ತ ಎಂಬ ಮಾತುಗಳು ಬಿಜೆಪಿ ಕಾರ್ಯಕರ್ತರಿಂದ ವ್ಯಕ್ತವಾಗುತ್ತಿದೆ.

Intro:ಇಂದಿರಾ ಕ್ಯಾಂಟೀನ್ ಗೆ ಶ್ರೀ ಶಿವಕುಮಾರ ಸ್ವಾಮೀಜಿ ಹೆಸರು ನಾಮಕರಣ ಮಾಡಲು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭ.....

ತುಮಕೂರು
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜ್ಯದ ವಿವಿಧೆಡೆ ಅಸ್ತಿತ್ವಕ್ಕೆ ಬಂದಿದ್ದ ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಗಿದೆ. ಮುಖ್ಯವಾಗಿ ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ಇಡಬೇಕೆಂದು ನೆಟ್ಟಿಗರು ಆಗ್ರಹಿಸುತ್ತಿದ್ದಾರೆ.
ಇಂದಿರಾ ಕ್ಯಾಂಟೀನ್ ಮರುನಾಮಕರಣ ವಿಚಾರ
ಇಂದಿರಾ ಬಂದಲು ಶ್ರೀ ಶಿವಕುಮಾರ ಸ್ವಾಮೀಜಿ ಹೆಸರಿಡಲು ಆಗ್ರಹಿಸಿ
ಸಾಮಾಜಿಕ ಜಾಲತಾಣಗಳ ಮೂಲಕ ಮುಖ್ಯಮಂತ್ರಿಗಳಿಗೆ ಭಕ್ತರು ಮತ್ತು ಬಿಜೆಪಿ ಕಾರ್ಯಕರ್ತರು ಮನವಿ ಮಾಡುತ್ತಿದ್ದಾರೆ.
ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುತಿದ್ದಂತೆ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರ ಮುನ್ನಲೆಗೆ ಬಂದಿದೆ. ತ್ರಿವಿಧ ದಾಸೋಹದ ಪರಿಕಲ್ಪನೆ ಹೆಸರಾಗಿದ್ದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಹೆಸರು ಇಡುವಂತೆ ಅಭಿಯಾನ ಶುರುವಾಗಿದೆ.
ಹಿಂದಿನ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಗಳಲ್ಲಿ ಒಂದಾದ ಇಂದಿರಾ ಕ್ಯಾಂಟೀನ್‍ನ ಹೆಸರು ಬದಲಾವಣೆ ಮಾಡುವಂತೆ ಒತ್ತಾಯದ ಕೂಗು ಜೋರಾಗುತ್ತಿದೆ. ಒಂದೆಡೆ ಬಿಜೆಪಿ ಕಾರ್ಯಕರ್ತರು ಹಾಗೂ ಬಿಜೆಪಿ ಅಭಿಮಾನಿಗಳು ಯಾರು ಕೂಡ ಇಂದಿರಾ ಕ್ಯಾಂಟೀನ್ ಗೆ ಹೋಗಿ ಉಪಹಾರ ಸೇವಿಸುತ್ತಿಲ್ಲ ಒಂದು ರೀತಿ ಮುಜುಗರಕ್ಕೆ ಈಡು ಮಾಡುತ್ತಿದೆ. ಹೀಗಾಗಿ ಇದು ಎಲ್ಲಾ ಪಕ್ಷದವರು ಎಲ್ಲಾ ಸಮುದಾಯದವರು ಸರ್ಕಾರದ ಯೋಜನೆಯ ಸೌಲಭ್ಯ ಪಡೆಯುವಂತೆ ಆಗಬೇಕಾಗಿದೆ ಹೀಗಾಗಿ ಶ್ರೀ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ಇಟ್ಟರೆ ಸೂಕ್ತ ಎಂಬ ಮಾತುಗಳು ಬಿಜೆಪಿ ಕಾರ್ಯಕರ್ತರಿಂದ ವ್ಯಕ್ತವಾಗುತ್ತಿದೆ.
ಬೈಟ್ : ರಮೇಶ್, ಬಿಜೆಪಿ ಕಾರ್ಯಕರ್ತ.Body:ತುಮಕೂರುConclusion:
Last Updated : Aug 10, 2019, 5:50 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.