ETV Bharat / state

ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪನೆಗೆ ಪ್ರಯತ್ನ: ಶಾಸಕ ಜ್ಯೋತಿಗಣೇಶ್

author img

By

Published : Oct 13, 2019, 6:30 PM IST

ತುಮಕೂರು ವಿಶ್ವವಿದ್ಯಾಲಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪನೆಗೆ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಜಿ.ಬಿ ಜ್ಯೋತಿಗಣೇಶ್ ತಿಳಿಸಿದ್ದಾರೆ.

ಜಿ.ಬಿ ಜ್ಯೋತಿಗಣೇಶ್

ತುಮಕೂರು: ಜಿಲ್ಲೆಯ ವಿಶ್ವವಿದ್ಯಾಲಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪನೆಗೆ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಜಿ.ಬಿ ಜ್ಯೋತಿಗಣೇಶ್ ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ನಗರದ ಬಾಲ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಾಲ್ಮೀಕಿ ರಚಿಸಿರುವ ದೇಶದ ಮಹಾಕಾವ್ಯಗಳಲ್ಲಿ ಒಂದಾದ ರಾಮಾಯಣ ಕೃತಿಗೆ 7 ಸಾವಿರ ವರ್ಷಗಳ ಇತಿಹಾಸವಿದೆ. ವಾಲ್ಮೀಕಿ ಹಾಗೂ ಇವರ ರಾಮಾಯಣ ಕೃತಿ ಬಗ್ಗೆ ಇತಿಹಾಸಕಾರರು ಇನ್ನೂ ವಿಶೇಷ ಅಧ್ಯಯನಗಳನ್ನು ನಡೆಸಬೇಕು. ಅವರು ನಡೆದು ಬಂದ ದಾರಿ ನಮ್ಮ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ನಮ್ಮೆಲ್ಲರದ್ದು ಎಂದರು.

ಈ ನಿಟ್ಟಿನಲ್ಲಿ ತುಮಕೂರು ವಿವಿಯಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಅಲ್ಲದೇ ವಾಲ್ಮೀಕಿ ಸಮುದಾಯದ ಏಳಿಗೆಗೆ ಹೋರಾಡಿದ ಮಹನೀಯರ ಹಾಗೂ ಉಲ್ಲೇಖವಿರುವ ಜಿಲ್ಲೆಯಲ್ಲಿನ ಶಿಲಾನ್ಯಾಸ, ಸ್ಥಳ, ಐತಿಹ್ಯಗಳನ್ನು ಕ್ರೋಢೀಕರಿಸಿ ಪುಸ್ತಕದ ರೂಪದಲ್ಲಿ ಹೊರತರಲಾಗುವುದು ಎಂದು ಹೇಳಿದ್ರು.

ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ

ಜಿಲ್ಲಾ ಪಂಚಾಯಿತಿ ಸದಸ್ಯೆ ಶಾಂತಲಾ ರಾಜಣ್ಣ ಮಾತನಾಡಿ, ವಾಲ್ಮೀಕಿ ಸಮುದಾಯದ ಅಭಿವೃದ್ಧಿಯಲ್ಲಿ ಯಾವುದೇ ಬದಲಾವಣೆ ಕಾಣದಿರುವುದು ವಿಷಾದನೀಯ ಸಂಗತಿ. ಕೇಂದ್ರ ಸರ್ಕಾರದಲ್ಲಿ ಉದ್ಯೋಗ ಮತ್ತು ಶಿಕ್ಷಣಕ್ಕೆ ನೀಡಿರುವ ಶೇ 7.5 ಮೀಸಲಾತಿಯನ್ನು ರಾಜ್ಯದಲ್ಲಿಯೂ ಕಲ್ಪಿಸಿದಾಗ ಮಾತ್ರ ನಮ್ಮ ಸಮಾಜ ಅಭಿವೃದ್ಧಿಯಾಗುತ್ತದೆ ಎಂದರು. ಜೊತೆಗೆ ಮರಳೂರು ದಿಣ್ಣೆಯಲ್ಲಿ ನಿರ್ಮಿಸಲಾಗುತ್ತಿರುವ ವಾಲ್ಮೀಕಿ ಸಮುದಾಯ ಭವನಕ್ಕೆ ಇನ್ನೂ ಹೆಚ್ಚಿನ ಅನುದಾನದ ಅವಶ್ಯಕತೆಯಿದ್ದು ಅದನ್ನು ಸಂಸದರು ಹಾಗೂ ಶಾಸಕರು ಕಟ್ಟಡದ ನಿರ್ಮಾಣಕ್ಕೆ ಬೇಕಾದಂತಹ ಅನುದಾನವನ್ನು ಬಿಡುಗಡೆಗೊಳಿಸಬೇಕು ಎಂದು ಮನವಿ ಮಾಡಿದರು.

ತುಮಕೂರು: ಜಿಲ್ಲೆಯ ವಿಶ್ವವಿದ್ಯಾಲಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪನೆಗೆ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಜಿ.ಬಿ ಜ್ಯೋತಿಗಣೇಶ್ ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ನಗರದ ಬಾಲ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಾಲ್ಮೀಕಿ ರಚಿಸಿರುವ ದೇಶದ ಮಹಾಕಾವ್ಯಗಳಲ್ಲಿ ಒಂದಾದ ರಾಮಾಯಣ ಕೃತಿಗೆ 7 ಸಾವಿರ ವರ್ಷಗಳ ಇತಿಹಾಸವಿದೆ. ವಾಲ್ಮೀಕಿ ಹಾಗೂ ಇವರ ರಾಮಾಯಣ ಕೃತಿ ಬಗ್ಗೆ ಇತಿಹಾಸಕಾರರು ಇನ್ನೂ ವಿಶೇಷ ಅಧ್ಯಯನಗಳನ್ನು ನಡೆಸಬೇಕು. ಅವರು ನಡೆದು ಬಂದ ದಾರಿ ನಮ್ಮ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ನಮ್ಮೆಲ್ಲರದ್ದು ಎಂದರು.

ಈ ನಿಟ್ಟಿನಲ್ಲಿ ತುಮಕೂರು ವಿವಿಯಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಅಲ್ಲದೇ ವಾಲ್ಮೀಕಿ ಸಮುದಾಯದ ಏಳಿಗೆಗೆ ಹೋರಾಡಿದ ಮಹನೀಯರ ಹಾಗೂ ಉಲ್ಲೇಖವಿರುವ ಜಿಲ್ಲೆಯಲ್ಲಿನ ಶಿಲಾನ್ಯಾಸ, ಸ್ಥಳ, ಐತಿಹ್ಯಗಳನ್ನು ಕ್ರೋಢೀಕರಿಸಿ ಪುಸ್ತಕದ ರೂಪದಲ್ಲಿ ಹೊರತರಲಾಗುವುದು ಎಂದು ಹೇಳಿದ್ರು.

ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ

ಜಿಲ್ಲಾ ಪಂಚಾಯಿತಿ ಸದಸ್ಯೆ ಶಾಂತಲಾ ರಾಜಣ್ಣ ಮಾತನಾಡಿ, ವಾಲ್ಮೀಕಿ ಸಮುದಾಯದ ಅಭಿವೃದ್ಧಿಯಲ್ಲಿ ಯಾವುದೇ ಬದಲಾವಣೆ ಕಾಣದಿರುವುದು ವಿಷಾದನೀಯ ಸಂಗತಿ. ಕೇಂದ್ರ ಸರ್ಕಾರದಲ್ಲಿ ಉದ್ಯೋಗ ಮತ್ತು ಶಿಕ್ಷಣಕ್ಕೆ ನೀಡಿರುವ ಶೇ 7.5 ಮೀಸಲಾತಿಯನ್ನು ರಾಜ್ಯದಲ್ಲಿಯೂ ಕಲ್ಪಿಸಿದಾಗ ಮಾತ್ರ ನಮ್ಮ ಸಮಾಜ ಅಭಿವೃದ್ಧಿಯಾಗುತ್ತದೆ ಎಂದರು. ಜೊತೆಗೆ ಮರಳೂರು ದಿಣ್ಣೆಯಲ್ಲಿ ನಿರ್ಮಿಸಲಾಗುತ್ತಿರುವ ವಾಲ್ಮೀಕಿ ಸಮುದಾಯ ಭವನಕ್ಕೆ ಇನ್ನೂ ಹೆಚ್ಚಿನ ಅನುದಾನದ ಅವಶ್ಯಕತೆಯಿದ್ದು ಅದನ್ನು ಸಂಸದರು ಹಾಗೂ ಶಾಸಕರು ಕಟ್ಟಡದ ನಿರ್ಮಾಣಕ್ಕೆ ಬೇಕಾದಂತಹ ಅನುದಾನವನ್ನು ಬಿಡುಗಡೆಗೊಳಿಸಬೇಕು ಎಂದು ಮನವಿ ಮಾಡಿದರು.

Intro:ತುಮಕೂರು: ತುಮಕೂರು ವಿಶ್ವವಿದ್ಯಾಲಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪನೆಗೆ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಜಿ.ಬಿ ಜ್ಯೋತಿಗಣೇಶ್ ತಿಳಿಸಿದರು.


Body:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಂಯುಕ್ತಾಶ್ರಯದಲ್ಲಿ ನಗರದ ಬಾಲ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಾಲ್ಮೀಕಿ ರಚಿಸಿರುವ, ದೇಶದ ಮಹಾಕಾವ್ಯಗಳಲ್ಲಿ ಒಂದಾದ ರಾಮಾಯಣ ಕೃತಿಗೆ ಏಳು ಸಾವಿರ ವರ್ಷಗಳ ಇತಿಹಾಸವಿದೆ. ವಾಲ್ಮೀಕಿ ಹಾಗೂ ಇವರ ರಾಮಾಯಣ ಕೃತಿ ಬಗ್ಗೆ ಇತಿಹಾಸಕಾರರು ಇನ್ನೂ ಅಧ್ಯಯನಗಳನ್ನು ನಡೆಸಬೇಕು. ಅವರು ನಡೆದು ಬಂದ ದಾರಿ ನಮ್ಮ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ನಮ್ಮೆಲ್ಲರದ್ದು, ಈ ನಿಟ್ಟಿನಲ್ಲಿ ತುಮಕೂರು ವಿವಿಯಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು, ಅಲ್ಲದೆ ವಾಲ್ಮೀಕಿ ಸಮುದಾಯದ ಏಳಿಗೆಗೆ ಹೋರಾಡಿದ ಮಹನೀಯರ ಹಾಗೂ ಉಲ್ಲೇಖವಿರುವ ಜಿಲ್ಲೆಯಲ್ಲಿನ ಶಿಲಾನ್ಯಾಸ, ಸ್ಥಳ, ಐತಿಹ್ಯಗಳನ್ನು ಕ್ರೂಢೀಕರಿಸಿ ಪುಸ್ತಕದ ರೂಪದಲ್ಲಿ ಹೊರತರಲಾಗುವುದು ಎಂದರು.
ಬೈಟ್: ಜಿ.ಬಿ ಜ್ಯೋತಿಗಣೇಶ್, ಶಾಸಕ
ಜಿಲ್ಲಾ ಪಂಚಾಯಿತಿ ಸದಸ್ಯೆ ಶಾಂತಲಾ ರಾಜಣ್ಣ ಮಾತನಾಡಿ, ವಾಲ್ಮೀಕಿ ಸಮುದಾಯದ ಅಭಿವೃದ್ಧಿಯಲ್ಲಿ ಯಾವುದೇ ಬದಲಾವಣೆ ಕಾಣದಿರುವುದು ವಿಷಾದನೀಯ ಸಂಗತಿ. ಕೇಂದ್ರ ಸರ್ಕಾರದಲ್ಲಿ ಉದ್ಯೋಗ ಮತ್ತು ಶಿಕ್ಷಣಕ್ಕೆ ನೀಡಿರುವ ಶೇ 7.5 ಮೀಸಲಾತಿಯನ್ನು ರಾಜ್ಯದಲ್ಲಿಯೂ ಕಲ್ಪಿಸಿದಾಗ ಮಾತ್ರ ನಮ್ಮ ಸಮಾಜ ಅಭಿವೃದ್ಧಿಯಾಗುತ್ತದೆ ಎಂದರು. ಜೊತೆಗೆ ಮರಳೂರು ದಿಣ್ಣೆಯಲ್ಲಿ ನಿರ್ಮಿಸಲಾಗುತ್ತಿರುವ ವಾಲ್ಮೀಕಿ ಸಮುದಾಯ ಭವನಕ್ಕೆ ಇನ್ನೂ ಹೆಚ್ಚಿನ ಅನುದಾನದ ಅವಶ್ಯಕತೆಯಿದ್ದು ಅದನ್ನು ಸಂಸದರು ಹಾಗೂ ಶಾಸಕರು ಕಟ್ಟಡದ ನಿರ್ಮಾಣಕ್ಕೆ ಬೇಕಾದಂತಹ ಅನುದಾನವನ್ನು ಬಿಡುಗಡೆಗೊಳಿಸಬೇಕು ಎಂದು ಮನವಿ ಮಾಡಿದರು, ಇನ್ನು ಸಮುದಾಯದ ಜಾತಿ ಪ್ರಮಾಣಪತ್ರವನ್ನು ನಕಲಿ ಮಾಡಲಾಗುತ್ತಿದೆ, ಜೊತೆಗೆ ಬೇರೆ ಸಮುದಾಯದವರನ್ನು ನಮ್ಮ ಸಮುದಾಯಕ್ಕೆ ಸೇರಿಸುವುದರಿಂದ ನಮಗೆ ತೊಂದರೆಯಾಗುತ್ತದೆ ಎಂದರು.
ಬೈಟ್:ಶಾಂತಲಾ ರಾಜಣ್ಣ, ಜಿ.ಪಂ ಸದಸ್ಯೆ


Conclusion:ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸದ ಜಿ.ಎಸ್ ಬಸವರಾಜು ವಹಿಸಿದ್ದರು, ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಸಲ್ಲಿಸಿದ ಗಣ್ಯರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ವಂಶಿಕೃಷ್ಣ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರೇಮ ಮುಂತಾದವರು ಹಾಜರಿದ್ದರು.

ವರದಿ
ಸುಧಾಕರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.