ETV Bharat / state

ನಮಾಜ್ ವೇಳೆಯೇ ಹೃದಯಘಾತಕ್ಕೆ ಒಳಗಾಗಿ ಪ್ರಾಣಬಿಟ್ಟ ಪತ್ರಕರ್ತ

author img

By

Published : Aug 1, 2020, 6:15 PM IST

15 ವರ್ಷಗಳಿಂದ ಕುಣಿಗಲ್ ತಾಲೂಕು ಸಂಯುಕ್ತ ಕರ್ನಾಟಕ ಪತ್ರಿಕೆ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು. ಹಲವು ದಿನಗಳಿಂದ ಉಸಿರಾಟದ ತೊಂದರೆ ಹಿನ್ನೆಲೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು..

Journalist
ಪತ್ರಕರ್ತ

ತುಮಕೂರು : ಬಕ್ರೀದ್ ಹಬ್ಬದ ಹಿನ್ನೆಲೆ ಮನೆಯಲ್ಲಿಯೇ ನಮಾಜ್ ಮಾಡುತ್ತಿದ್ದ ಪತ್ರಕರ್ತರೊಬ್ಬರು ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಫಯಾಜ್ ಉಲ್ಲಾಖಾನ್ (54)ಮೃತ ದುರ್ದೈವಿ. ಇಂದು ಬೆಳಗ್ಗೆ ಸುಮಾರು 11 ಗಂಟೆ ಸಂದರ್ಭದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆ ಪ್ರಾರ್ಥನೆಯಲ್ಲಿ ತೊಡಗಿದ್ದರು. ಈ ವೇಳೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಪ್ರಾಣ ಬಿಟ್ಟಿದ್ದಾರೆ.

15 ವರ್ಷಗಳಿಂದ ಕುಣಿಗಲ್ ತಾಲೂಕು ಸಂಯುಕ್ತ ಕರ್ನಾಟಕ ಪತ್ರಿಕೆ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು. ಹಲವು ದಿನಗಳಿಂದ ಉಸಿರಾಟದ ತೊಂದರೆ ಹಿನ್ನೆಲೆ ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇಂದು ಕೂಡ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುವ ಸಿದ್ಧತೆಯಲ್ಲಿ ತೊಡಗಿದ್ದರು. ಆದರೆ, ದುರದೃಷ್ಟವಶಾತ್ ಬಕ್ರೀದ್ ಹಬ್ಬದ ದಿನವೇ ಹೃದಯಾಘಾತಕ್ಕೊಳಗಾಗಿ ಪ್ರಾಣ ಬಿಟ್ಟಿದ್ದಾರೆ. ಫಯಾಜ್ ಅವರ ನಿಧನಕ್ಕೆ ಜಿಲ್ಲಾ ಪತ್ರಕರ್ತರ ಸಂಘ ಸಂತಾಪ ಸೂಚಿಸಿದೆ.

ತುಮಕೂರು : ಬಕ್ರೀದ್ ಹಬ್ಬದ ಹಿನ್ನೆಲೆ ಮನೆಯಲ್ಲಿಯೇ ನಮಾಜ್ ಮಾಡುತ್ತಿದ್ದ ಪತ್ರಕರ್ತರೊಬ್ಬರು ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಫಯಾಜ್ ಉಲ್ಲಾಖಾನ್ (54)ಮೃತ ದುರ್ದೈವಿ. ಇಂದು ಬೆಳಗ್ಗೆ ಸುಮಾರು 11 ಗಂಟೆ ಸಂದರ್ಭದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆ ಪ್ರಾರ್ಥನೆಯಲ್ಲಿ ತೊಡಗಿದ್ದರು. ಈ ವೇಳೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಪ್ರಾಣ ಬಿಟ್ಟಿದ್ದಾರೆ.

15 ವರ್ಷಗಳಿಂದ ಕುಣಿಗಲ್ ತಾಲೂಕು ಸಂಯುಕ್ತ ಕರ್ನಾಟಕ ಪತ್ರಿಕೆ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು. ಹಲವು ದಿನಗಳಿಂದ ಉಸಿರಾಟದ ತೊಂದರೆ ಹಿನ್ನೆಲೆ ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇಂದು ಕೂಡ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುವ ಸಿದ್ಧತೆಯಲ್ಲಿ ತೊಡಗಿದ್ದರು. ಆದರೆ, ದುರದೃಷ್ಟವಶಾತ್ ಬಕ್ರೀದ್ ಹಬ್ಬದ ದಿನವೇ ಹೃದಯಾಘಾತಕ್ಕೊಳಗಾಗಿ ಪ್ರಾಣ ಬಿಟ್ಟಿದ್ದಾರೆ. ಫಯಾಜ್ ಅವರ ನಿಧನಕ್ಕೆ ಜಿಲ್ಲಾ ಪತ್ರಕರ್ತರ ಸಂಘ ಸಂತಾಪ ಸೂಚಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.