ತುಮಕೂರು: ಕೊರೊನ ವೈರಸ್ ಹರಡುತ್ತಿರೋ ಭೀತಿಯಿಂದ ಜನರು ಬೆಚ್ಚಿಬಿದ್ದಿದ್ದರೆ, ಇನ್ನೊಂದೆಡೆ ತುಮಕೂರು ಜಿಲ್ಲೆಯಲ್ಲಿ ಚಿರತೆ ಬೋನಿನಲ್ಲಿ ಸೆರೆಯಾಗಿದೆ.
ತಾಲೂಕಿನ ಚೆನ್ನಿಗಪ್ಪನ ಪಾಳ್ಯದಲ್ಲಿ ಚಿರತೆ ಸೆರೆ ಸಿಕ್ಕಿದೆ. ಕೊರೊನಾ ಭೀತಿಯ ನಡುವೆಯೂ ಸೆರೆಯಾದ ಚಿರತೆಯನ್ನು ನೋಡಲು ಸುತ್ತಮುತ್ತಲ ಪ್ರದೇಶದ ಜನರು ಮುಗಿಬಿದ್ದಿದ್ದರು. ಇದೇ ವೇಳೆ ಜನರನ್ನು ಚದುರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.