ETV Bharat / state

ಸಿದ್ದಗಂಗಾ ದೇವರ ಗದ್ದುಗೆ ದರ್ಶನ ಪಡೆಯುತ್ತಿರುವ ಲೋಕಸಭಾ ಸ್ಪರ್ಧಾಕಾಂಕ್ಷಿಗಳು - undefined

ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳು ಬಂದು ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದಾರೆ.

ಶಿವಕುಮಾರ ಸ್ವಾಮೀಜಿ ಗದ್ದುಗೆ
author img

By

Published : Mar 20, 2019, 11:49 PM IST

ತುಮಕೂರು : ಲೋಕಸಭಾ ಚುನಾವಣೆ ಘೋಷಣೆಯಾದ ನಂತರ ಪಕ್ಷಭೇದ ಮರೆತು ಸ್ಪರ್ಧಾಕಾಂಕ್ಷಿಗಳು ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಬಂದು ನಮಸ್ಕರಿಸುತ್ತಿದ್ದಾರೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೇಂದ್ರ ಸಚಿವ ಸದಾನಂದ ಗೌಡ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿನಿ ಅನಂತಕುಮಾರ್ ಅದೇ ರೀತಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳು ಬಂದು ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದಾರೆ.

ಶಿವಕುಮಾರ ಸ್ವಾಮೀಜಿ ಅವರ ತ್ರಿವಿಧ ದಾಸೋಹದ ಪರಿಕಲ್ಪನೆ ಇಂದಿಗೂ ಕೂಡ ಮುಂದುವರಿದಿದೆ. ಮಠದ ವಿದ್ಯಾರ್ಥಿಗಳಿಗೆ ಪೂರಕವಾದ ಶಿಕ್ಷಣ ವ್ಯವಸ್ಥೆಯೊಂದಿಗೆ ಉಳಿಸಿ ಬೆಳೆಸಿಕೊಂಡು ಹೋಗಬೇಕಾಗಿರುವ ಬಹುದೊಡ್ಡ ಜವಾಬ್ದಾರಿ ತಮ್ಮ ಮುಂದೆ ಇದೆ ಎನ್ನುತ್ತಾರೆ ಶ್ರೀ ಸಿದ್ದಲಿಂಗ ಸ್ವಾಮೀಜಿ.

ಮಠಕ್ಕೆ ಬರುವ ಭಕ್ತರು ಯಾವುದೇ ಜಾತಿ ಗುರುತಿಸಿಕೊಳ್ಳದೆ ಇಂದಿಗೂ ಕೂಡ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಮಠದಲ್ಲಿ ಬೃಹತ್ ಪ್ರಾರ್ಥನಾ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳಿಸಬೇಕಿದೆ ಮತ್ತು ಮಠದ ಆವರಣದಲ್ಲಿ ಶಿವಕುಮಾರ ಸ್ವಾಮೀಜಿ ಅವರ ಪುತ್ಥಳಿಯನ್ನು ನಿರ್ಮಿಸುವ ಜವಾಬ್ದಾರಿ ಕೂಡ ತಮ್ಮ ಮುಂದಿದೆ ಎಂದು ತಿಳಿಸಿದ್ದಾರೆ.

ಶ್ರೀ ಸಿದ್ದಲಿಂಗ ಸ್ವಾಮೀಜಿ

ತುಮಕೂರು : ಲೋಕಸಭಾ ಚುನಾವಣೆ ಘೋಷಣೆಯಾದ ನಂತರ ಪಕ್ಷಭೇದ ಮರೆತು ಸ್ಪರ್ಧಾಕಾಂಕ್ಷಿಗಳು ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಬಂದು ನಮಸ್ಕರಿಸುತ್ತಿದ್ದಾರೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೇಂದ್ರ ಸಚಿವ ಸದಾನಂದ ಗೌಡ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿನಿ ಅನಂತಕುಮಾರ್ ಅದೇ ರೀತಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳು ಬಂದು ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದಾರೆ.

ಶಿವಕುಮಾರ ಸ್ವಾಮೀಜಿ ಅವರ ತ್ರಿವಿಧ ದಾಸೋಹದ ಪರಿಕಲ್ಪನೆ ಇಂದಿಗೂ ಕೂಡ ಮುಂದುವರಿದಿದೆ. ಮಠದ ವಿದ್ಯಾರ್ಥಿಗಳಿಗೆ ಪೂರಕವಾದ ಶಿಕ್ಷಣ ವ್ಯವಸ್ಥೆಯೊಂದಿಗೆ ಉಳಿಸಿ ಬೆಳೆಸಿಕೊಂಡು ಹೋಗಬೇಕಾಗಿರುವ ಬಹುದೊಡ್ಡ ಜವಾಬ್ದಾರಿ ತಮ್ಮ ಮುಂದೆ ಇದೆ ಎನ್ನುತ್ತಾರೆ ಶ್ರೀ ಸಿದ್ದಲಿಂಗ ಸ್ವಾಮೀಜಿ.

ಮಠಕ್ಕೆ ಬರುವ ಭಕ್ತರು ಯಾವುದೇ ಜಾತಿ ಗುರುತಿಸಿಕೊಳ್ಳದೆ ಇಂದಿಗೂ ಕೂಡ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಮಠದಲ್ಲಿ ಬೃಹತ್ ಪ್ರಾರ್ಥನಾ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳಿಸಬೇಕಿದೆ ಮತ್ತು ಮಠದ ಆವರಣದಲ್ಲಿ ಶಿವಕುಮಾರ ಸ್ವಾಮೀಜಿ ಅವರ ಪುತ್ಥಳಿಯನ್ನು ನಿರ್ಮಿಸುವ ಜವಾಬ್ದಾರಿ ಕೂಡ ತಮ್ಮ ಮುಂದಿದೆ ಎಂದು ತಿಳಿಸಿದ್ದಾರೆ.

ಶ್ರೀ ಸಿದ್ದಲಿಂಗ ಸ್ವಾಮೀಜಿ
Intro:ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆಯುತ್ತಿರುವ ಲೋಕಸಭಾ ಸ್ಪರ್ಧಾಕಾಂಕ್ಷಿಗಳು.......

ತುಮಕೂರು
ತ್ರಿವಿಧ ದಾಸೋಹಕ್ಕೆ ಹೆಸರುವಾಸಿಯಾಗಿರುವ ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ನಿಸ್ವಾರ್ಥ ಸೇವೆ ಪ್ರತಿಯೊಂದು ವರ್ಗವನ್ನು ಸೆಳೆಯುತ್ತಿತ್ತು. ಜನಪ್ರತಿನಿಧಿಗಳು, ಸಾಹಿತಿಗಳು, ಚಿಂತಕರು, ಹೋರಾಟಗಾರರು ಹೀಗೆ ವಿವಿಧ ಕ್ಷೇತ್ರಗಳ ಜನರು ಮತ್ತು ಮುಖಂಡರು ಬಂದು ಶಿವಕುಮಾರ ಸ್ವಾಮಿಯ ಆಶೀರ್ವಾದ ಪಡೆದು ಹೋಗುತ್ತಿದ್ದರು.

ಇಂದಿಗೂ ಕೂಡ ಅದೇ ರೀತಿಯಾದ ಪರಿಪಾಠವನ್ನು ಪ್ರಮುಖವಾಗಿ ರಾಜಕೀಯ ಕ್ಷೇತ್ರದ ಗಣ್ಯರು ಮುಂದುವರಿಸಿಕೊಂಡು ಬಂದಿದ್ದಾರೆ. ಶಿವಕುಮಾರ ಸ್ವಾಮೀಜಿ ಶಿವೈಕ್ಯರಾದ ನಂತರವೂ ಗದ್ದುಗೆ ಬಳಿ ಬಂದು ಪ್ರಾರ್ಥನೆ ಸಲ್ಲಿಸಿ ಆಶೀರ್ವಾದ ಪಡೆಯುತ್ತಿದ್ದಾರೆ.

ಲೋಕಸಭಾ ಚುನಾವಣೆ ಘೋಷಣೆಯಾದ ನಂತರ ಪಕ್ಷಭೇದ ಮರೆತು ಸ್ಪರ್ಧಾಕಾಂಕ್ಷಿಗಳು ಗದ್ದುಗೆಗೆ ಬಂದು ನಮಸ್ಕರಿಸುತ್ತಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೇಂದ್ರ ಸಚಿವ ಸದಾನಂದ ಗೌಡ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿನಿ ಅನಂತ್ ಕುಮಾರ್ ಅದೇ ರೀತಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ವಿವಿಧ ಕ್ಷೇತ್ರದ ಅಭ್ಯರ್ಥಿಗಳು ಬಂದು ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದಾರೆ .




Body:ಶಿವಕುಮಾರ ಸ್ವಾಮೀಜಿ ಅವರ ತ್ರಿವಿಧ ದಾಸೋಹದ ಪರಿಕಲ್ಪನೆ ಇಂದಿಗೂ ಕೂಡ ಅನೂಚಾನವಾಗಿ ಮುಂದುವರಿದಿದೆ. ಮಠದ ವಿದ್ಯಾರ್ಥಿಗಳಿಗೆ ಪೂರಕವಾದ ಶಿಕ್ಷಣ ವ್ಯವಸ್ಥೆಯೊಂದಿಗೆ ಉಳಿಸಿ ಬೆಳೆಸಿಕೊಂಡು ಹೋಗಬೇಕಾಗಿರುವ ಬಹುದೊಡ್ಡ ಜವಾಬ್ದಾರಿ ತಮ್ಮ ಮುಂದೆ ಇದೆ ಎನ್ನುತ್ತಾರೆ ಶ್ರೀ ಸಿದ್ದಲಿಂಗ ಸ್ವಾಮೀಜಿ.

ಮಠಕ್ಕೆ ಬರುವ ಭಕ್ತರು ಯಾವುದೇ ಜಾತಿ ಭೇದ ಗುರುತಿಸಿಕೊಳ್ಳದೆ ಇಂದಿಗೂ ಕೂಡ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದು ಪುನೀತ ರಾಗುತ್ತಿದ್ದಾರೆ. ಮಠದಲ್ಲಿ ಬೃಹತ್ ಪ್ರಾರ್ಥನಾ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳಿಸಬೇಕಿದೆ ಮತ್ತು ಮಠದ ಆವರಣದಲ್ಲಿ ಶಿವಕುಮಾರ ಸ್ವಾಮೀಜಿ ಅವರ ಪುತ್ಥಳಿಯನ್ನು ನಿರ್ಮಿಸುವ ಜವಾಬ್ದಾರಿ ಕೂಡ ತಮ್ಮ ಮುಂದಿದೆ ಎಂದು ತಿಳಿಸಿದ್ದಾರೆ


Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.