ETV Bharat / state

ತಿಪಟೂರು ಬಳಿ ಭೀಕರ ಅಪಘಾತ: ಯುವತಿ ತಲೆ ಮೇಲೆ ಹರಿದ ಲಾರಿ - Tumakuru

ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ಯುವತಿ ಸ್ಥಳದಲ್ಲೇ ಮೃತಪಟ್ಟು, ಯುವಕನೋರ್ವ ಗಂಭೀರ ಗಾಯಗೊಂಡಿದ್ದಾನೆ. ಗಾಯಾಳುವನ್ನು ತಿಪಟೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ.. ಯುವತಿ ಸಾವು
author img

By

Published : May 28, 2019, 4:04 PM IST

ತುಮಕೂರು: ತಿಪಟೂರು ತಾಲೂಕಿನ ರಂಗನಾಥಪುರ ಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ಯುವತಿ ಮೃತಪಟ್ಟು ಯುವಕನೋರ್ವ ಗಂಭೀರ ಗಾಯಗೊಂಡಿದ್ದಾನೆ.

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ.. ಯುವತಿ ಸಾವು

ಮೃತ ಯುವತಿಯನ್ನು ದ್ರಾಕ್ಷಾಯಿಣಿ 20 ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಹೊಳಲ್ಕೆರೆಗೆ ದ್ರಾಕ್ಷಾಯಿಣಿ, ಏಳುಕೋಟಿ ಎಂಬ ಯುವಕನೊಂದಿಗೆ ಬೈಕ್​ನಲ್ಲಿ ತೆರಳುತ್ತಿದ್ದಳು. ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ತಲೆ ಮೇಲೆ ಲಾರಿ ಹರಿದಿದ್ದರಿಂದ ಆಕೆ ಸ್ಥಳದಲ್ಲೇ ಅಸುನೀಗಿದ್ದಾಳೆ.

ಗಾಯಗೊಂಡಿರುವ ಏಳುಕೋಟಿ ಎಂಬ ಯುವಕನನ್ನು ಚಿಕಿತ್ಸೆಗಾಗಿ ತಿಪಟೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದ್ರಾಕ್ಷಾಯಿಣಿ ಬೆಂಗಳೂರಿನ ಪೆಟ್ರೋಲ್ ಬಂಕ್​ನಲ್ಲಿ ಕೆಲಸ ಮಾಡುತ್ತಿದ್ದಳು. ಯುವಕ ಏಳುಕೋಟಿ ಕೂಡ ಬೆಂಗಳೂರಿನಲ್ಲೇ ಕೆಲಸ ಮಾಡುತ್ತಿದ್ದ. ಹೊಳಲ್ಕೆರೆಯಲ್ಲಿ ನಡೆಯಲಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಬ್ಬರು ಬೈಕ್​ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತ ಕುರಿತು ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು: ತಿಪಟೂರು ತಾಲೂಕಿನ ರಂಗನಾಥಪುರ ಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿದ್ದ ಯುವತಿ ಮೃತಪಟ್ಟು ಯುವಕನೋರ್ವ ಗಂಭೀರ ಗಾಯಗೊಂಡಿದ್ದಾನೆ.

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ.. ಯುವತಿ ಸಾವು

ಮೃತ ಯುವತಿಯನ್ನು ದ್ರಾಕ್ಷಾಯಿಣಿ 20 ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಹೊಳಲ್ಕೆರೆಗೆ ದ್ರಾಕ್ಷಾಯಿಣಿ, ಏಳುಕೋಟಿ ಎಂಬ ಯುವಕನೊಂದಿಗೆ ಬೈಕ್​ನಲ್ಲಿ ತೆರಳುತ್ತಿದ್ದಳು. ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ತಲೆ ಮೇಲೆ ಲಾರಿ ಹರಿದಿದ್ದರಿಂದ ಆಕೆ ಸ್ಥಳದಲ್ಲೇ ಅಸುನೀಗಿದ್ದಾಳೆ.

ಗಾಯಗೊಂಡಿರುವ ಏಳುಕೋಟಿ ಎಂಬ ಯುವಕನನ್ನು ಚಿಕಿತ್ಸೆಗಾಗಿ ತಿಪಟೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದ್ರಾಕ್ಷಾಯಿಣಿ ಬೆಂಗಳೂರಿನ ಪೆಟ್ರೋಲ್ ಬಂಕ್​ನಲ್ಲಿ ಕೆಲಸ ಮಾಡುತ್ತಿದ್ದಳು. ಯುವಕ ಏಳುಕೋಟಿ ಕೂಡ ಬೆಂಗಳೂರಿನಲ್ಲೇ ಕೆಲಸ ಮಾಡುತ್ತಿದ್ದ. ಹೊಳಲ್ಕೆರೆಯಲ್ಲಿ ನಡೆಯಲಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಬ್ಬರು ಬೈಕ್​ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತ ಕುರಿತು ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಲಾರಿ ಡಿಕ್ಕಿ ಬೈಕ್ ನಲ್ಲಿದ್ದ ಯುವತಿ ಸಾವು......

ತುಮಕೂರು
ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಯುವತಿ ಮೃತಪಟ್ಟು ಯುವಕನೊಬ್ಬನಿಗೆ ಗಂಭೀರ ಗಾಯಗಳಾಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ರಂಗನಾಥಪುರ ಗೇಟ್ ಬಳಿ ನಡೆದಿದೆ.
ಮೃತ ಯುವತಿಯನ್ನು ದ್ರಾಕ್ಷಾಯಿಣಿ 20 ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಹೊಳಲ್ಕೆರೆಗೆ ದ್ರಾಕ್ಷಾಯಿಣಿ ಯು ಏಳುಕೋಟಿ ಎಂಬ ಯುವಕನೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದಳು. ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ದ್ರಾಕ್ಷಾಯಿಣಿ ತಲೆ ಮೇಲೆ ಲಾರಿ ಹರಿದು ಇದರಿಂದ ಆಕೆ ಸ್ಥಳದಲ್ಲೇ ಅಸುನೀಗಿದ್ದಾರೆ.
ಗಾಯಗೊಂಡಿರುವ ಏಳುಕೋಟಿ ಎಂಬ ಯುವಕನನ್ನು ಚಿಕಿತ್ಸೆಗಾಗಿ ತಿಪಟೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ದ್ರಾಕ್ಷಾಯಿಣಿ ಬೆಂಗಳೂರಿನ ಪೆಟ್ರೋಲ್ ಬಂಕಿನಲ್ಲಿ ಕೆಲಸ ಮಾಡುತ್ತಿದ್ದಳು ಅಲ್ಲದೆ ಯುವಕ ಏಳುಕೋಟಿ ಕೂಡ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದನು. ಹೊಳಲ್ಕೆರೆಯಲ್ಲಿ ನಡೆಯಲಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇಬ್ಬರು ಬೈಕ್ನಲ್ಲಿ ತೆರಳುತ್ತಿದ್ದರು.
ಈ ಸಂಬಂಧ ತಿಪಟೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:TumakuruConclusion:

For All Latest Updates

TAGGED:

Tumakuru
ETV Bharat Logo

Copyright © 2025 Ushodaya Enterprises Pvt. Ltd., All Rights Reserved.