ETV Bharat / state

ಮಧುಗಿರಿಯಲ್ಲಿ ಹಿಂಡು ಹಿಂಡಾಗಿ ಕಾಣಿಸಿಕೊಳ್ಳುತ್ತಿರೋ ಕರಡಿಗಳು... ಆತಂಕದಲ್ಲಿ ಜನ

author img

By

Published : Jun 25, 2019, 2:53 PM IST

ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿಯ ಸಮೀಪದ ವೀರಣ್ಣನ ಬೆಟ್ಟದಲ್ಲಿ ಕರಡಿಗಳು ವಾಸವಾಗಿವೆ. ರಾತ್ರಿ ಹಾಗೂ ಬೆಳಗಿನ ಜಾವ ಆಹಾರ ಅರಸಿ ಸುತ್ತಮುತ್ತಲಿನ ಗ್ರಾಮಗಳಿಗೆ ಹಿಂಡು ಹಿಂಡಾಗಿ ಲಗ್ಗೆ ಇಡುತ್ತಿವೆ. ಹೀಗಾಗಿ ಗ್ರಾಮಸ್ಥರು ಆತಂಕದಲ್ಲಿದ್ದಾರೆ.

ಹಿಂಡು ಹಿಂಡಾಗಿ ಕಾಣಿಸಿಕೊಳ್ಳುತ್ತಿರೋ ಕರಡಿಗಳು

ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಕರಡಿ ಸಂಖ್ಯೆ ಹೆಚ್ಚಿದೆ. ನಿತ್ಯ ಹಿಂಡು ಹಿಂಡಾಗಿ ಕಾಣಿಸಿಕೊಳ್ಳತೊಡಗಿರುವುದರಿಂದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಮಧುಗಿರಿ ತಾಲೂಕು ಚಿನ್ನೇನಹಳ್ಳಿಯ ಸಮೀಪದ ವೀರಣ್ಣನ ಬೆಟ್ಟದಲ್ಲಿ ಕರಡಿಗಳು ವಾಸವಾಗಿದ್ದು, ರಾತ್ರಿ ಹಾಗೂ ಬೆಳಗಿನ ಜಾವ ಆಹಾರ ಅರಸಿ ಸುತ್ತಮುತ್ತಲಿನ ಗ್ರಾಮಗಳಿಗೆ ಹಿಂಡು ಹಿಂಡಾಗಿ ಲಗ್ಗೆ ಇಡುತ್ತಿವೆ. ರಸ್ತೆ, ಹೊಲ, ಕೆರೆ, ಗಿಡಗಳ ಪೊದೆ ಸೇರಿದಂತೆ ಎಲ್ಲೆಂದರಲ್ಲಿ ಕರಡಿಗಳು ಪ್ರತ್ಯಕ್ಷವಾಗುತ್ತಿವೆ.

ಹಿಂಡು ಹಿಂಡಾಗಿ ಕಾಣಿಸಿಕೊಳ್ಳುತ್ತಿರೋ ಕರಡಿಗಳು

ಕತ್ತಲಾದರೆ ಸಾಕು, ಭೀತಿಯಿಂದ ಜನರು ಮನೆಯಿಂದ ಹೊರಬರಲು ಸಹ ಹೆದರುವಂತಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಕರಡಿ ಸಂಖ್ಯೆ ಹೆಚ್ಚಿದೆ. ನಿತ್ಯ ಹಿಂಡು ಹಿಂಡಾಗಿ ಕಾಣಿಸಿಕೊಳ್ಳತೊಡಗಿರುವುದರಿಂದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಮಧುಗಿರಿ ತಾಲೂಕು ಚಿನ್ನೇನಹಳ್ಳಿಯ ಸಮೀಪದ ವೀರಣ್ಣನ ಬೆಟ್ಟದಲ್ಲಿ ಕರಡಿಗಳು ವಾಸವಾಗಿದ್ದು, ರಾತ್ರಿ ಹಾಗೂ ಬೆಳಗಿನ ಜಾವ ಆಹಾರ ಅರಸಿ ಸುತ್ತಮುತ್ತಲಿನ ಗ್ರಾಮಗಳಿಗೆ ಹಿಂಡು ಹಿಂಡಾಗಿ ಲಗ್ಗೆ ಇಡುತ್ತಿವೆ. ರಸ್ತೆ, ಹೊಲ, ಕೆರೆ, ಗಿಡಗಳ ಪೊದೆ ಸೇರಿದಂತೆ ಎಲ್ಲೆಂದರಲ್ಲಿ ಕರಡಿಗಳು ಪ್ರತ್ಯಕ್ಷವಾಗುತ್ತಿವೆ.

ಹಿಂಡು ಹಿಂಡಾಗಿ ಕಾಣಿಸಿಕೊಳ್ಳುತ್ತಿರೋ ಕರಡಿಗಳು

ಕತ್ತಲಾದರೆ ಸಾಕು, ಭೀತಿಯಿಂದ ಜನರು ಮನೆಯಿಂದ ಹೊರಬರಲು ಸಹ ಹೆದರುವಂತಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Intro:ಹಿಂಡು ಹಿಂಡಾಗಿ ಕಾಣಿಸಿಕೊಳ್ಳುತ್ತಿರೋ ಕರಡಿಗಳು.... ಆತಂಕದಲ್ಲಿ ಗ್ರಾಮಸ್ಥರು.....

ತುಮಕೂರು
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕರಡಿ ಸಂಖ್ಯೆ ಹೆಚ್ಚಿದ್ದು ನಿತ್ಯ ಹಿಂಡು ಹಿಂದಾಗಿ ಕಾಣಿಸಿಕೊಳ್ಳತೊಡಗಿರುವುದರಿಂದ ಜನರಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ.
ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿಯ ಸಮೀಪದ ವೀರಣ್ಣನ ಬೆಟ್ಟದಲ್ಲಿ ಕರಡಿಗಳು ವಾಸ ವಾಗಿದ್ದು, ರಾತ್ರಿ ಬೆಳಗಿನ ಜಾವ ಆಹಾರ ಅರಸಿ ಬರುವ ಕರಡಿಗಳು ಸುತ್ತಮುತ್ತಲಿನ ಗ್ರಾಮಗಳಿಗೆ ಹಿಂಡು ಹಿಂಡಾಗಿ ಲಗ್ಗೆ ಇಡುತ್ತಿವೆ. ರಸ್ತೆ, ಹೊಲ, ಕೆರೆ,ಕುಂಟೆ,ಗಿಡಗಳ ಪೊದೆಯಲ್ಲಿ ಎಲ್ಲೆಂದರಲ್ಲಿ ಕರಡಿಗಳು ಪ್ರತ್ಯಕ್ಷವಾಗುತ್ತಿವೆ.
ಕತ್ತಲಾದರೆ ಸಾಕು ಬೀತಿಯಿಂದ ಜನರು ಮನೆಯಿಂದ ಹೊರಬರಲು ಹೆದರುವಂತಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಇತ್ತ ಗಮನಹರಿಸಬೇಕೆಂದು ಆಗ್ರಹಿಸಿದ್ದಾರೆ.Body:TumakuruConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.