ತುಮಕೂರು : ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬರಲಿರುವ ಸಚಿವ ಸಂಪುಟದಲ್ಲಿ ಜೆ ಸಿ ಮಧುಸ್ವಾಮಿ ಸಚಿವರಾಗಿ, ಜಿಲ್ಲೆಯ ಉಸ್ತುವಾರಿಯಾಗಿ ಮುಂದುವರೆದರೆ ಒಳ್ಳೆಯದು ಎಂದು ಗುಬ್ಬಿ ಜೆಡಿಎಸ್ ಶಾಸಕ ಶ್ರೀನಿವಾಸ ಪ್ರತಿಕ್ರಿಯಿಸಿದ್ದಾರೆ.
ಗುಬ್ಬಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿಪರ ಚಿಂತನೆಗಳ ದೃಷ್ಟಿಯಿಂದ ಮಾಧುಸ್ವಾಮಿ ಮುಂದುವರೆಯಬೇಕು ಎಂದು ಹೇಳಿದ್ದಾರೆ. ನಾನು ವೈಯಕ್ತಿಕವಾಗಿ ಮಾಧುಸ್ವಾಮಿಯವರು ಮುಂದುವರೆಯಬೇಕು ಎಂದು ಹೇಳುತ್ತಿಲ್ಲ.
ಬದಲಾಗಿ ಜಿಲ್ಲೆಯಲ್ಲಿ ಬಹುತೇಕ ಕೆರೆಗಳಿಗೆ ನೀರು ತುಂಬಿಸುವ ಉತ್ತಮ ಯೋಜನೆಯನ್ನು ಅವರು ರೂಪಿಸಿದ್ದಾರೆ, ಅದು ಸಂಪೂರ್ಣವಾಗಿ ಅನುಷ್ಠಾನವಾಗಬೇಕಿದೆ. ಹೀಗಾಗಿ, ಅವರೇ ಮುಂದುವರೆಯಬೇಕು ಎಂದು ಹೇಳುತ್ತೇನೆ ಎಂದು ತಿಳಿಸಿದರು. ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮಾಧುಸ್ವಾಮಿ ಮುಂದುವರೆಯಲಿ ಎಂದು ಹೇಳುತ್ತೇನೆ ಎಂದು ಪುನರುಚ್ಛರಿಸಿದರು.
ಇದನ್ನೂ ಓದಿ:ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ: ಕೆ.ಎಸ್. ಈಶ್ವರಪ್ಪ