ETV Bharat / state

ಅಭಿಮಾನಿಗಳು ಸಿಡಿಸಿದ ಪಟಾಕಿ ಕಿಡಿ ತಗುಲಿ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಕಣ್ಣಿಗೆ ಗಾಯ

author img

By

Published : Jun 11, 2023, 11:11 AM IST

Updated : Jun 11, 2023, 12:54 PM IST

ಮಹಿಳೆಯರಿಗೆ ಉಚಿತ ಪ್ರಯಾಣದ ಅನುಕೂಲ ನೀಡುವ ಶಕ್ತಿ ಯೋಜನೆಗೆ ಚಾಲನೆ ನೀಡಲು ತುಮಕೂರಿನಿಂದ ಹಾಸನಕ್ಕೆ ಹೊರಟ ಸಚಿವ ಕೆ.ಎನ್‌.ರಾಜಣ್ಣ ಅವರ ಕಣ್ಣಿಗೆ ಅಭಿಮಾನಿಗಳು ಸಿಡಿಸಿದ ಪಟಾಕಿ ಕಿಡಿ ತಗುಲಿತು.

ಪಟಾಕಿ ಸಿಡಿದು ಸಚಿವ ರಾಜಣ್ಣರ ಕಣ್ಣಿಗೆ ಗಾಯ
ಪಟಾಕಿ ಸಿಡಿದು ಸಚಿವ ರಾಜಣ್ಣರ ಕಣ್ಣಿಗೆ ಗಾಯ
ಕೆ.ಎನ್‌.ರಾಜಣ್ಣ ಕಣ್ಣಿಗೆ ಪಟಾಕಿ ಕಿಡಿ ತಗುಲಿ ಗಾಯ

ತುಮಕೂರು: ಸಹಕಾರಿ ಇಲಾಖೆ ಸಚಿವ ಕೆ.ಎನ್. ರಾಜಣ್ಣ ಅವರ ಕಣ್ಣಿಗೆ ಪಟಾಕಿ ಕಿಡಿ ತಗುಲಿ ಗಾಯವಾಗಿರುವ ಘಟನೆ ಕುಣಿಗಲ್ ಪಟ್ಟಣದ ಹುಚ್ಚ ಮಾಸ್ತಿಗೌಡ ವೃತ್ತದಲ್ಲಿ ಇಂದು (ಭಾನುವಾರ) ಬೆಳಗ್ಗೆ ನಡೆದಿದೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ರಾಜಣ್ಣ ಶಕ್ತಿ ಯೋಜನೆಗೆ ಚಾಲನೆ ನೀಡಲು ತುಮಕೂರಿನಿಂದ ಕುಣಿಗಲ್ ಮಾರ್ಗವಾಗಿ ಹಾಸನಕ್ಕೆ ತೆರಳುತ್ತಿದ್ದರು. ಈ ಬಗ್ಗೆ ವಿಷಯ ತಿಳಿದ ಸಚಿವರ ಅಭಿಮಾನಿಗಳು, ಹಿತೈಷಿಗಳು, ಕಾಂಗ್ರೆಸ್ ಕಾರ್ಯಕರ್ತರು ಹುಚ್ಚ ಮಾಸ್ತಿಗೌಡ ಸರ್ಕಲ್ ಬಳಿ ಕಾರು ತಡೆದು ಪುಷ್ಪಮಾಲೆ‌ ಹಾಕಿ ಅಭಿನಂದಿಸಿದ್ದಾರೆ. ಬಳಿಕ ಸಮೀಪದಲ್ಲೇ ಪಟಾಕಿ ಹಚ್ಚಿ ಸಿಡಿಸಿದ್ದಾರೆ.

ಈ ಸಂದರ್ಭದಲ್ಲಿ ಸಚಿವರು ಧರಿಸಿದ್ದ ಕನ್ನಡಕ ತೆಗೆಯುವುದೂ ಪಟಾಕಿ ಸಿಡಿಯುವುದೂ ಒಂದೇ ಸಮಯದಲ್ಲಿ ಜರುಗಿದೆ. ಪಟಾಕಿಯ ಕಿಡಿ ನೇರವಾಗಿ ಬಲ ಕಣ್ಣಿಗೆ ತಗುಲಿದೆ. ತಕ್ಷದ ಖಾಸಗಿ ಆಸ್ಪತ್ರೆಯೊಂದಕ್ಕೆ ತೆರಳಿ ನೇತ್ರ ತಜ್ಞ ಡಾ. ರವಿಕುಮಾರ್ ಅವರಿಂದ ಚಿಕಿತ್ಸೆ ಪಡೆದು, ಹಾಸನಕ್ಕೆ ತೆರಳಿದರು.

Tumakuru news
ತುಮಕೂರು ಜಿಲ್ಲೆಯಲ್ಲಿ14 ಲಕ್ಷ ಪ್ರಯಾಣಿಕರಿಗೆ ಶಕ್ತಿ ಯೋಜನೆಯ ಲಾಭ ಸಿಗಲಿದೆ.

ಜಿಲ್ಲೆಯ 14 ಲಕ್ಷ ಮಹಿಳಾ ಪ್ರಯಾಣಿಕರಿಗೆ 'ಶಕ್ತಿ' : ತುಮಕೂರು ಜಿಲ್ಲೆಯಲ್ಲಿಂದು ಶಕ್ತಿ ಯೋಜನೆಗೆ ಚಾಲನೆ ದೊರೆಯಲಿದೆ. ಬಾಲಕಿಯರು, ಯುವತಿಯರು ಸೇರಿದಂತೆ ಜಿಲ್ಲೆಯ ಸುಮಾರು 14 ಲಕ್ಷ ಮಹಿಳೆಯರು ಈ ಯೋಜನೆಯ ಫಲಾನುಭವಿಗಳಾಗಲಿದ್ದಾರೆ ಎಂದು ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿರುವ 7 ಕೆಎಸ್‌ಆರ್‌ಟಿಸಿ ಸಾರಿಗೆ ಘಟಕಗಳಿಂದ‌‌ ನಿತ್ಯ 560 ಬಸ್ಸುಗಳು ಸಂಚರಿಸುತ್ತಿದ್ದು ಪ್ರತಿನಿತ್ಯ 1 ಲಕ್ಷ ಮಹಿಳಾ ಪ್ರಯಾಣಿಕರು ಓಡಾಡುತ್ತಾರೆ.

ತುಮಕೂರು ಜಿಲ್ಲಾಡಳಿದಿಂದ ಯೋಜನೆಯ ಅಧಿಕೃತ ಜಾರಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ತುಮಕೂರು ಬಸ್ ನಿಲ್ದಾಣದಲ್ಲಿ ಮಹಿಳೆಯರಿಗೆ ಶೂನ್ಯ ಟಿಕೆಟ್​ ನೀಡುವ ಮೂಲಕ ಉಸ್ತುವಾರಿ ಸಚಿವ ಜಿ. ಪರಮೇಶ್ವರ್ ಚಾಲನೆ ನೀಡಲಿದ್ದಾರೆ. ಇನ್ನೊಂದೆಡೆ, ಯೋಜನೆ ಕುರಿತು ಖಾಸಗಿ ಬಸ್ ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ.

ಶಕ್ತಿ ಯೋಜನೆಯಿಂದಾಗಿ ಮಹಿಳಾ ಪ್ರಯಾಣಿಕರು ಸರ್ಕಾರಿ ಬಸ್​ಗಳಲ್ಲೇ ಹೆಚ್ಚಾಗಿ ಓಡಾಡಲಿದ್ದಾರೆ. ಇದರಿಂದ ಖಾಸಗಿ ಬಸ್​ಗಳಿಗೆ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಲಿದೆ. ಬಸ್ ವ್ಯವಹಾರವನ್ನೇ ಸ್ಥಗಿತಗೊಳಿಸುವ ಸ್ಥಿತಿ ನಿರ್ಮಾಣವಾಗಲಿದೆ ಎಂದು ಖಾಸಗಿ ಬಸ್ ಮಾಲಕರು ಹೇಳಿದ್ದಾರೆ. ನಮ್ಮ ಸ್ಥಿತಿ ಅವಲೋಕಿಸಿ ಸರ್ಕಾರ ನಮಗೂ ಪರಿಹಾರ ಮಾರ್ಗ ತೋರಿಸಬೇಕಿದೆ ಎಂದು ಆಗ್ರಹಿಸಿದ್ದಾರೆ.

ಶಕ್ತಿ ಯೋಜನೆ ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿದ್ದು, ಮಧ್ಯಾಹ್ನ 1 ಗಂಟೆಯಿಂದಲೇ ರಾಜ್ಯದ ಮಹಿಳೆಯರು ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಓಡಾಡಬಹುದು. 12 ಗಂಟೆಗೆ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅದ್ಧೂರಿ ಚಾಲನೆ ನೀಡುವರು. ವಿಧಾನಸೌಧದ ಮುಂಭಾಗ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ: Congress Guarantee Scheme: ಇಂದು ಮಧ್ಯಾಹ್ನದಿಂದಲೇ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ... ಶಕ್ತಿ ಯೋಜನೆ ಅದ್ಧೂರಿ ಚಾಲನೆಗೆ ಸಿದ್ಧತೆ

ಕೆ.ಎನ್‌.ರಾಜಣ್ಣ ಕಣ್ಣಿಗೆ ಪಟಾಕಿ ಕಿಡಿ ತಗುಲಿ ಗಾಯ

ತುಮಕೂರು: ಸಹಕಾರಿ ಇಲಾಖೆ ಸಚಿವ ಕೆ.ಎನ್. ರಾಜಣ್ಣ ಅವರ ಕಣ್ಣಿಗೆ ಪಟಾಕಿ ಕಿಡಿ ತಗುಲಿ ಗಾಯವಾಗಿರುವ ಘಟನೆ ಕುಣಿಗಲ್ ಪಟ್ಟಣದ ಹುಚ್ಚ ಮಾಸ್ತಿಗೌಡ ವೃತ್ತದಲ್ಲಿ ಇಂದು (ಭಾನುವಾರ) ಬೆಳಗ್ಗೆ ನಡೆದಿದೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ರಾಜಣ್ಣ ಶಕ್ತಿ ಯೋಜನೆಗೆ ಚಾಲನೆ ನೀಡಲು ತುಮಕೂರಿನಿಂದ ಕುಣಿಗಲ್ ಮಾರ್ಗವಾಗಿ ಹಾಸನಕ್ಕೆ ತೆರಳುತ್ತಿದ್ದರು. ಈ ಬಗ್ಗೆ ವಿಷಯ ತಿಳಿದ ಸಚಿವರ ಅಭಿಮಾನಿಗಳು, ಹಿತೈಷಿಗಳು, ಕಾಂಗ್ರೆಸ್ ಕಾರ್ಯಕರ್ತರು ಹುಚ್ಚ ಮಾಸ್ತಿಗೌಡ ಸರ್ಕಲ್ ಬಳಿ ಕಾರು ತಡೆದು ಪುಷ್ಪಮಾಲೆ‌ ಹಾಕಿ ಅಭಿನಂದಿಸಿದ್ದಾರೆ. ಬಳಿಕ ಸಮೀಪದಲ್ಲೇ ಪಟಾಕಿ ಹಚ್ಚಿ ಸಿಡಿಸಿದ್ದಾರೆ.

ಈ ಸಂದರ್ಭದಲ್ಲಿ ಸಚಿವರು ಧರಿಸಿದ್ದ ಕನ್ನಡಕ ತೆಗೆಯುವುದೂ ಪಟಾಕಿ ಸಿಡಿಯುವುದೂ ಒಂದೇ ಸಮಯದಲ್ಲಿ ಜರುಗಿದೆ. ಪಟಾಕಿಯ ಕಿಡಿ ನೇರವಾಗಿ ಬಲ ಕಣ್ಣಿಗೆ ತಗುಲಿದೆ. ತಕ್ಷದ ಖಾಸಗಿ ಆಸ್ಪತ್ರೆಯೊಂದಕ್ಕೆ ತೆರಳಿ ನೇತ್ರ ತಜ್ಞ ಡಾ. ರವಿಕುಮಾರ್ ಅವರಿಂದ ಚಿಕಿತ್ಸೆ ಪಡೆದು, ಹಾಸನಕ್ಕೆ ತೆರಳಿದರು.

Tumakuru news
ತುಮಕೂರು ಜಿಲ್ಲೆಯಲ್ಲಿ14 ಲಕ್ಷ ಪ್ರಯಾಣಿಕರಿಗೆ ಶಕ್ತಿ ಯೋಜನೆಯ ಲಾಭ ಸಿಗಲಿದೆ.

ಜಿಲ್ಲೆಯ 14 ಲಕ್ಷ ಮಹಿಳಾ ಪ್ರಯಾಣಿಕರಿಗೆ 'ಶಕ್ತಿ' : ತುಮಕೂರು ಜಿಲ್ಲೆಯಲ್ಲಿಂದು ಶಕ್ತಿ ಯೋಜನೆಗೆ ಚಾಲನೆ ದೊರೆಯಲಿದೆ. ಬಾಲಕಿಯರು, ಯುವತಿಯರು ಸೇರಿದಂತೆ ಜಿಲ್ಲೆಯ ಸುಮಾರು 14 ಲಕ್ಷ ಮಹಿಳೆಯರು ಈ ಯೋಜನೆಯ ಫಲಾನುಭವಿಗಳಾಗಲಿದ್ದಾರೆ ಎಂದು ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿರುವ 7 ಕೆಎಸ್‌ಆರ್‌ಟಿಸಿ ಸಾರಿಗೆ ಘಟಕಗಳಿಂದ‌‌ ನಿತ್ಯ 560 ಬಸ್ಸುಗಳು ಸಂಚರಿಸುತ್ತಿದ್ದು ಪ್ರತಿನಿತ್ಯ 1 ಲಕ್ಷ ಮಹಿಳಾ ಪ್ರಯಾಣಿಕರು ಓಡಾಡುತ್ತಾರೆ.

ತುಮಕೂರು ಜಿಲ್ಲಾಡಳಿದಿಂದ ಯೋಜನೆಯ ಅಧಿಕೃತ ಜಾರಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ತುಮಕೂರು ಬಸ್ ನಿಲ್ದಾಣದಲ್ಲಿ ಮಹಿಳೆಯರಿಗೆ ಶೂನ್ಯ ಟಿಕೆಟ್​ ನೀಡುವ ಮೂಲಕ ಉಸ್ತುವಾರಿ ಸಚಿವ ಜಿ. ಪರಮೇಶ್ವರ್ ಚಾಲನೆ ನೀಡಲಿದ್ದಾರೆ. ಇನ್ನೊಂದೆಡೆ, ಯೋಜನೆ ಕುರಿತು ಖಾಸಗಿ ಬಸ್ ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ.

ಶಕ್ತಿ ಯೋಜನೆಯಿಂದಾಗಿ ಮಹಿಳಾ ಪ್ರಯಾಣಿಕರು ಸರ್ಕಾರಿ ಬಸ್​ಗಳಲ್ಲೇ ಹೆಚ್ಚಾಗಿ ಓಡಾಡಲಿದ್ದಾರೆ. ಇದರಿಂದ ಖಾಸಗಿ ಬಸ್​ಗಳಿಗೆ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಲಿದೆ. ಬಸ್ ವ್ಯವಹಾರವನ್ನೇ ಸ್ಥಗಿತಗೊಳಿಸುವ ಸ್ಥಿತಿ ನಿರ್ಮಾಣವಾಗಲಿದೆ ಎಂದು ಖಾಸಗಿ ಬಸ್ ಮಾಲಕರು ಹೇಳಿದ್ದಾರೆ. ನಮ್ಮ ಸ್ಥಿತಿ ಅವಲೋಕಿಸಿ ಸರ್ಕಾರ ನಮಗೂ ಪರಿಹಾರ ಮಾರ್ಗ ತೋರಿಸಬೇಕಿದೆ ಎಂದು ಆಗ್ರಹಿಸಿದ್ದಾರೆ.

ಶಕ್ತಿ ಯೋಜನೆ ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿದ್ದು, ಮಧ್ಯಾಹ್ನ 1 ಗಂಟೆಯಿಂದಲೇ ರಾಜ್ಯದ ಮಹಿಳೆಯರು ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಓಡಾಡಬಹುದು. 12 ಗಂಟೆಗೆ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅದ್ಧೂರಿ ಚಾಲನೆ ನೀಡುವರು. ವಿಧಾನಸೌಧದ ಮುಂಭಾಗ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ: Congress Guarantee Scheme: ಇಂದು ಮಧ್ಯಾಹ್ನದಿಂದಲೇ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ... ಶಕ್ತಿ ಯೋಜನೆ ಅದ್ಧೂರಿ ಚಾಲನೆಗೆ ಸಿದ್ಧತೆ

Last Updated : Jun 11, 2023, 12:54 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.