ETV Bharat / state

ರೈತನ ಶವದ ಮುಂದೆ ಫೋಟೋ... ಟೀಕೆಗೆ ಗುರಿಯಾದ ಶಿರಾ ಶಾಸಕರು

author img

By

Published : Apr 9, 2020, 5:10 PM IST

Updated : Apr 11, 2020, 1:41 PM IST

ಜಮೀನಿನಲ್ಲಿ ನೇಣಿಗೆ ಶರಣಾಗಿದ್ದ ರೈತನ ಶವದ ಎದುರು ಶಿರಾ ಶಾಸಕ ಸತ್ಯನಾರಾಯಣ ನಿಂತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗಿವೆ.

MLA Satyanarayan
ಶಾಸಕ ಸತ್ಯನಾರಾಯಣ

ತುಮಕೂರು: ಸಾಲಬಾಧೆ ತಾಳಲಾರದೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ರೈತನ ಶವದ ಎದುರು ಶಿರಾ ಶಾಸಕ ಸತ್ಯನಾರಾಯಣ್ ನಿಂತಿರುವ ಫೋಟೋಗಳು ಸಾಕಷ್ಟು ಟೀಕೆಗೆ ಒಳಗಾಗಿದೆ.

ತುಮಕೂರು ಜಿಲ್ಲೆ ಶಿರಾ ತಾಲೂಕು ದೇವರಹಳ್ಳಿಯಲ್ಲಿ ಗ್ರಾಮದಲ್ಲಿ ರೈತ ಗಂಗಾಧರ್ (60) ಎಂಬುವರು ತಮ್ಮ ಜಮೀನಿನಲ್ಲಿದ್ದ ಮರಕ್ಕೆ ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ರು. ವಿಷಯ ತಿಳಿದು ಸ್ಥಳಕ್ಕೆ ಶಿರಾ ಶಾಸಕ ಸತ್ಯನಾರಾಯಣ ಭೇಟಿ ನೀಡಿದ್ದರು. ಈ ವೇಳೆ ಶವದ ಮುಂದೆ ಇತರರೊಂದಿಗೆ ಶಾಸಕರು ಇದ್ದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿದ್ದು, ಜನರಿಂದ ಆಕ್ರೋಶ ವ್ಯಕ್ತವಾಗಿದೆ.

4.17 ಎಕರೆ ಜಮೀನು ಹೊಂದಿರುವ ರೈತ‌ ಗಂಗಾಧರ್ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಸಂಬಂಧಿಸಿದಂತೆ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು: ಸಾಲಬಾಧೆ ತಾಳಲಾರದೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ರೈತನ ಶವದ ಎದುರು ಶಿರಾ ಶಾಸಕ ಸತ್ಯನಾರಾಯಣ್ ನಿಂತಿರುವ ಫೋಟೋಗಳು ಸಾಕಷ್ಟು ಟೀಕೆಗೆ ಒಳಗಾಗಿದೆ.

ತುಮಕೂರು ಜಿಲ್ಲೆ ಶಿರಾ ತಾಲೂಕು ದೇವರಹಳ್ಳಿಯಲ್ಲಿ ಗ್ರಾಮದಲ್ಲಿ ರೈತ ಗಂಗಾಧರ್ (60) ಎಂಬುವರು ತಮ್ಮ ಜಮೀನಿನಲ್ಲಿದ್ದ ಮರಕ್ಕೆ ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ರು. ವಿಷಯ ತಿಳಿದು ಸ್ಥಳಕ್ಕೆ ಶಿರಾ ಶಾಸಕ ಸತ್ಯನಾರಾಯಣ ಭೇಟಿ ನೀಡಿದ್ದರು. ಈ ವೇಳೆ ಶವದ ಮುಂದೆ ಇತರರೊಂದಿಗೆ ಶಾಸಕರು ಇದ್ದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿದ್ದು, ಜನರಿಂದ ಆಕ್ರೋಶ ವ್ಯಕ್ತವಾಗಿದೆ.

4.17 ಎಕರೆ ಜಮೀನು ಹೊಂದಿರುವ ರೈತ‌ ಗಂಗಾಧರ್ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಸಂಬಂಧಿಸಿದಂತೆ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Apr 11, 2020, 1:41 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.