ತುಮಕೂರು: ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿಪಕ್ಷದವರು ದುರುಪಯೋಗ ಮಾಡಿಕೊಂಡು ಹಿಟ್ಲರ್ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಸಂಸದ ಜಿ.ಎಸ್.ಬಸವರಾಜು ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಕಿಸ್ತಾನ ಸೇರಿದಂತೆ ವಿದೇಶದಲ್ಲಿ ಬೌದ್ಧರು, ಜೈನರು, ಸಿಖ್ಖರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಅವರಿಗೆ ಭಾರತದಲ್ಲಿ ಪೌರತ್ವ ನೀಡುವ ಮೂಲಕ ನ್ಯಾಯ ಒದಗಿಸಿಕೊಡಲು ಈ ಕಾಯ್ದೆ ಸಹಕಾರಿಯಾಗಲಿದೆ ಎಂದರು.