ETV Bharat / state

ಲೋಕಸಭೆ ಚುನಾವಣೆ ವೇಳೆ ನನ್ನ ಫೋನ್​ ಕೂಡಾ ಕದ್ದಾಲಿಕೆ ಆಗಿದೆ: ಸಂಸದ ಬಸವರಾಜು

author img

By

Published : Oct 6, 2019, 5:07 PM IST

ತುಮಕೂರು ಲೋಕಸಭೆ ಚುನಾವಣೆ ವೇಳೆ ನನ್ನ ಫೋನ್​ ಕೂಡಾ ಕದ್ದಾಲಿಕೆ ಮಾಡಲಾಗಿತ್ತು ಎಂದು ತುಮಕೂರಿನಲ್ಲಿ ಸಂಸದ ಜಿ.ಎಸ್.ಬಸವರಾಜು ಹೇಳಿದ್ದಾರೆ.

ಸಂಸದ ಜಿ ಎಸ್ ಬಸವರಾಜು ಫೋನ್​ ಕದ್ದಾಲಿಕೆ

ತುಮಕೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಾನು ಬಿಜೆಪಿ ಅಭ್ಯರ್ಥಿ ಆಗಿದ್ದರಿಂದ ನನ್ನ ದೂರವಾಣಿಯನ್ನು ಕೂಡ ಕದ್ದಾಲಿಕೆ ಮಾಡಲಾಗಿತ್ತು ಎಂದು ತುಮಕೂರು ಸಂಸದ ಜಿ.ಎಸ್.ಬಸವರಾಜು ಹೇಳಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಅಂದಿನ ಸಿಎಂ ಕುಮಾರಸ್ವಾಮಿ ಅವರ ತಂದೆ ಹೆಚ್.ಡಿ.ದೇವೇಗೌಡರ ಎದುರಾಳಿಯಾಗಿದ್ದರಿಂದ ಚುನಾವಣೆ ವೇಳೆ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂಬ ವಿಷಯ ಗೊತ್ತಾಗಿತ್ತು ಎಂದರು. ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಫೋನ್​​ ಕೂಡ ಕದ್ದಾಲಿಕೆ ಮಾಡಲಾಗಿತ್ತು. ಅಂದಮೇಲೆ ಇನ್ನು ನಮ್ಮನ್ನು ಬಿಡುತ್ತಾರೆಯೇ ಎಂದು ಬಸವರಾಜು ಮಾರ್ಮಿಕವಾಗಿ ನುಡಿದರು.

ಸಂಸದ ಜಿ.ಎಸ್.ಬಸವರಾಜು

ಗುಬ್ಬಿ ವಿಧಾನಸಭಾ ಕ್ಷೇತ್ರ ಶಾಸಕ ಎಸ್.ಆರ್.ಶ್ರೀನಿವಾಸ್​ಗೆ ತಲೆಕೆಟ್ಟಿದೆ. ಅವರಷ್ಟು ಕೀಳುಮಟ್ಟಕ್ಕೆ ನಾನು ಇಳಿದು ಮಾತನಾಡುವುದಿಲ್ಲ. ಅವರ ಅಪ್ಪನಿಗೆ ಗೊತ್ತು ನಾನು ಏನು ಸಹಾಯ ಮಾಡಿದ್ದೇನೆ ಅಂತ. ಆ ಸಂದರ್ಭದಲ್ಲಿ ಶ್ರೀನಿವಾಸ್ ಚೆಡ್ಡಿ ಹಾಕಿಕೊಂಡು ತಿರುಗುತ್ತಿದ್ದ. ಆತ ನನ್ನ ಮುಂದೆ ಬಂದು ಮಾತನಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಹಿಂದಿನ ಸಮ್ಮಿಶ್ರ ಸರ್ಕಾರದಲ್ಲಿ ಖಜಾನೆಯನ್ನು ಖಾಲಿ ಮಾಡಿ ಹೋಗಲಾಗಿತ್ತು. ಯಡಿಯೂರಪ್ಪ ಸಿಎಂ ಆದ ನಂತರ ಖಜಾನೆಯಲ್ಲಿ ಸಮತೋಲನ ಕಾಪಾಡಿಕೊಂಡು ಬಂದಿದ್ದಾರೆ ಎಂದು ಹೇಳಿದರು.

ತುಮಕೂರು: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಾನು ಬಿಜೆಪಿ ಅಭ್ಯರ್ಥಿ ಆಗಿದ್ದರಿಂದ ನನ್ನ ದೂರವಾಣಿಯನ್ನು ಕೂಡ ಕದ್ದಾಲಿಕೆ ಮಾಡಲಾಗಿತ್ತು ಎಂದು ತುಮಕೂರು ಸಂಸದ ಜಿ.ಎಸ್.ಬಸವರಾಜು ಹೇಳಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಅಂದಿನ ಸಿಎಂ ಕುಮಾರಸ್ವಾಮಿ ಅವರ ತಂದೆ ಹೆಚ್.ಡಿ.ದೇವೇಗೌಡರ ಎದುರಾಳಿಯಾಗಿದ್ದರಿಂದ ಚುನಾವಣೆ ವೇಳೆ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂಬ ವಿಷಯ ಗೊತ್ತಾಗಿತ್ತು ಎಂದರು. ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಫೋನ್​​ ಕೂಡ ಕದ್ದಾಲಿಕೆ ಮಾಡಲಾಗಿತ್ತು. ಅಂದಮೇಲೆ ಇನ್ನು ನಮ್ಮನ್ನು ಬಿಡುತ್ತಾರೆಯೇ ಎಂದು ಬಸವರಾಜು ಮಾರ್ಮಿಕವಾಗಿ ನುಡಿದರು.

ಸಂಸದ ಜಿ.ಎಸ್.ಬಸವರಾಜು

ಗುಬ್ಬಿ ವಿಧಾನಸಭಾ ಕ್ಷೇತ್ರ ಶಾಸಕ ಎಸ್.ಆರ್.ಶ್ರೀನಿವಾಸ್​ಗೆ ತಲೆಕೆಟ್ಟಿದೆ. ಅವರಷ್ಟು ಕೀಳುಮಟ್ಟಕ್ಕೆ ನಾನು ಇಳಿದು ಮಾತನಾಡುವುದಿಲ್ಲ. ಅವರ ಅಪ್ಪನಿಗೆ ಗೊತ್ತು ನಾನು ಏನು ಸಹಾಯ ಮಾಡಿದ್ದೇನೆ ಅಂತ. ಆ ಸಂದರ್ಭದಲ್ಲಿ ಶ್ರೀನಿವಾಸ್ ಚೆಡ್ಡಿ ಹಾಕಿಕೊಂಡು ತಿರುಗುತ್ತಿದ್ದ. ಆತ ನನ್ನ ಮುಂದೆ ಬಂದು ಮಾತನಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಹಿಂದಿನ ಸಮ್ಮಿಶ್ರ ಸರ್ಕಾರದಲ್ಲಿ ಖಜಾನೆಯನ್ನು ಖಾಲಿ ಮಾಡಿ ಹೋಗಲಾಗಿತ್ತು. ಯಡಿಯೂರಪ್ಪ ಸಿಎಂ ಆದ ನಂತರ ಖಜಾನೆಯಲ್ಲಿ ಸಮತೋಲನ ಕಾಪಾಡಿಕೊಂಡು ಬಂದಿದ್ದಾರೆ ಎಂದು ಹೇಳಿದರು.

Intro:ತುಮಕೂರು ಲೋಕಸಭೆ ಚುನಾವಣೆ ವೇಳೆ ನನ್ನ ಫೋನನ್ನು ಕದ್ದಾಲಿಕೆ ಮಾಡಲಾಗಿತ್ತು.... ಸಂಸದ ಜಿ ಎಸ್ ಬಸವರಾಜು....
ತುಮಕೂರು
ತುಮಕೂರು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಾನು ಬಿಜೆಪಿ ಅಭ್ಯರ್ಥಿ ಆಗಿದ್ದರಿಂದ ನನ್ನ ದೂರವಾಣಿಯನ್ನು ಕೂಡ ಕದ್ದಾಲಿಕೆ ಮಾಡಲಾಗಿತ್ತು ಎಂದು ತುಮಕೂರು ಸಂಸದ ಜಿ ಎಸ್ ಬಸವರಾಜು ತಿಳಿಸಿದ್ದಾರೆ .
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ತಂದೆ ಹೆಚ್ ಡಿ ದೇವೇಗೌಡರ ಎದುರಾಳಿ ಯಾಗಿದ್ದರಿಂದ ಚುನಾವಣೆ ವೇಳೆ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂಬ ವಿಷಯ ಗೊತ್ತಾಗಿತ್ತು ಎಂದರು.
ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರ ಫೋನನ್ನು ಕೂಡ ಕದ್ದಾಲಿಕೆ ಮಾಡಲಾಗಿತ್ತು ಅವರ ಶ್ರೀಗಳ ಫೋನ್ ಏಕೆ ಮಾಡಿದ್ದಾರೆ ಇನ್ನು ನಮ್ಮನ್ನು ಬಿಡುತ್ತಾರೆ ಎಂದು ಮಾರ್ಮಿಕವಾಗಿ ನುಡಿದರು.
ಗುಬ್ಬಿ ವಿಧಾನಸಭಾ ಕ್ಷೇತ್ರ ಶಾಸಕ ಎಸ್ಆರ್ ಶ್ರೀನಿವಾಸ್ ಗೆ ತಲೆಕೆಟ್ಟಿದೆ. ಅವರಷ್ಟು ಕೀಳುಮಟ್ಟಕ್ಕೆ ನಾನು ಇಳಿದು ಮಾತನಾಡುವುದಿಲ್ಲ. ಅವರ ಅಪ್ಪನಿಗೆ ಗೊತ್ತು ನಾನು ಏನು ಸಹಾಯ ಮಾಡಿದ್ದೇನೆ ಅಂತ. ಆ ಸಂದರ್ಭದಲ್ಲಿ ಶ್ರೀನಿವಾಸ್ ಚೆಡ್ಡಿ ಹಾಕಿಕೊಂಡು ತಿರುಗುತ್ತಿದ್ದ. ಆತ ನನ್ನ ಮುಂದೆ ಬಂದು ಮಾತನಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಿಂದಿನ ಸಮ್ಮಿಶ್ರ ಸರ್ಕಾರದಲ್ಲಿ ಖಜಾನೆಯನ್ನು ಖಾಲಿಮಾಡಿ ಹೋಗಲಾಗಿತ್ತು ಯಡಿಯೂರಪ್ಪ ಮುಖ್ಯಮಂತ್ರಿಯಾದ ನಂತರ ಖಜಾನೆಯಲ್ಲಿ ಸಮತೋಲನ ಕಾಪಾಡಿಕೊಂಡು ಬಂದಿದ್ದಾರೆ ಎಂದು ಹೇಳಿದರು.
ಬೈಟ್: ಜಿಎಸ್ ಬಸವರಾಜ್, ತುಮಕೂರು ಸಂಸದ



Body:ತುಮಕೂರು


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.