ತುಮಕೂರು: ಕೊರೊನಾದಿಂದ ಮೃತಪಟ್ಟ ಅನಾಥ ವ್ಯಕ್ತಿಯ ಶವವನ್ನು ಮುಸ್ಲಿಂ ಸಮುದಾಯದ 15 ಜನ ಸೇರಿ ಅಂತ್ಯ ಸಂಸ್ಕಾರ ಮಾಡಿ ಮಾನವೀಯತೆ ಮೆರೆದಿದ್ದಾರೆ.
ತುರುವೇಕೆರೆ ತಾಲೂಕಿನ ಬಾಂಸಂದ್ರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮುಸ್ಲಿಂ ಸಮುದಾಯ ಭವನದ ವಾರಿಯರ್ಸ್ ತಂಡ ಈ ಕಾರ್ಯ ಕೈಗೊಂಡಿದೆ.
ಕೊರೊನಾ ಸೋಂಕಿನಿಂದ ಮೃತಪಟ್ಟ ಶವಗಳನ್ನು ಅಂತ್ಯ ಸಂಸ್ಕಾರ ಮಾಡುವ ವೇಳೆ ಸಂಬಂಧಿಗಳೇ ಸಮೀಪ ಸುಳಿಯಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ಮಾನವೀಯ ಮೌಲ್ಯಗಳನ್ನು ಹೊಂದಿರುವ ಜನರು ಸೋಂಕಿನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.