ETV Bharat / state

ಸಿಎಎ, ಎನ್​ಆರ್​ಸಿ ವಿರೋಧಿಸಿ ಎನ್ಎಸ್​​​ಯುಐ ಪ್ರತಿಭಟನೆ

author img

By

Published : Jan 15, 2020, 6:59 AM IST

ಜೆಎನ್​ಯು ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಮೇಲೆ ಹಲ್ಲೆ ನಡೆಸಿರುವವರನ್ನು ಬಂಧಿಸಲು ಆಗ್ರಹಿಸಿ ಎನ್ಎಸ್​​​ಯುಐ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

nsui-protest-against-central-government
nsui-protest-against-central-government

ಹಾಸನ: ಜೆಎನ್​ಯು ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಎಬಿವಿಪಿ ಗೂಂಡಾಗಳನ್ನು ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಎನ್ಎಸ್​​​ಯುಐ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಹಾಸ್ಟೆಲ್ ಶುಲ್ಕ ಹೆಚ್ಚಳ, ಪೌರತ್ವ (ತಿದ್ದುಪಡಿ) ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಸಿ ಜೆಎನ್​​ಯು ವಿಶ್ವವಿದ್ಯಾಲಯದಲ್ಲಿ ಎರಡು ತಿಂಗಳಿಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಆ ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಎಬಿವಿಪಿ ಸಂಘಟನೆ ಮುಖಂಡರು, ಕಾರ್ಯಕರ್ತರು, ಗೂಂಡಾಗಳಂತೆ ವರ್ತಿಸುತ್ತಿದ್ದಾರೆ. ಇದಕ್ಕೆ ಬಿಜೆಪಿ ಮತ್ತು ಸಂಘ ಪರಿವಾರದ ಬೆಂಬಲವಿದೆ.

ತೀವ್ರ ಗಾಯಗೊಂಡಿರುವ ಜೆಎನ್​ಯು ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆ ಆಯಿಷಿ ಘೋಷ್​​ಗೆ ಸೂಕ್ತ ಚಿಕಿತ್ಸೆ ನೀಡಬೇಕು. ಘಟನೆ ಕುರಿತು ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

ಹಾಸನ: ಜೆಎನ್​ಯು ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಎಬಿವಿಪಿ ಗೂಂಡಾಗಳನ್ನು ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಎನ್ಎಸ್​​​ಯುಐ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಹಾಸ್ಟೆಲ್ ಶುಲ್ಕ ಹೆಚ್ಚಳ, ಪೌರತ್ವ (ತಿದ್ದುಪಡಿ) ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಸಿ ಜೆಎನ್​​ಯು ವಿಶ್ವವಿದ್ಯಾಲಯದಲ್ಲಿ ಎರಡು ತಿಂಗಳಿಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಆ ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಂಡು ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಎಬಿವಿಪಿ ಸಂಘಟನೆ ಮುಖಂಡರು, ಕಾರ್ಯಕರ್ತರು, ಗೂಂಡಾಗಳಂತೆ ವರ್ತಿಸುತ್ತಿದ್ದಾರೆ. ಇದಕ್ಕೆ ಬಿಜೆಪಿ ಮತ್ತು ಸಂಘ ಪರಿವಾರದ ಬೆಂಬಲವಿದೆ.

ತೀವ್ರ ಗಾಯಗೊಂಡಿರುವ ಜೆಎನ್​ಯು ವಿದ್ಯಾರ್ಥಿ ಸಂಘಟನೆ ಅಧ್ಯಕ್ಷೆ ಆಯಿಷಿ ಘೋಷ್​​ಗೆ ಸೂಕ್ತ ಚಿಕಿತ್ಸೆ ನೀಡಬೇಕು. ಘಟನೆ ಕುರಿತು ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

Intro:ಹಾಸನ: ಪ್ರಾಧ್ಯಾಪಕರ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಎ.ಬಿ.ವಿ.ಪಿ. ಗೂಂಡಾಗಳನ್ನು ಬಂಧಿಸಿ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ಎನ್.ಎಸ್.ಯು.ಐ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
     ದೆಹಲಿಯ ಜೆ.ಎನ್.ಯು ನಲ್ಲಿ ಕಳೆದ ಒಂದು ದಿವಸಗಳ ಹಿಂದೆ ವಿದ್ಯಾರ್ಥಿ ಸಂಘದ ಮುಖಂಡರು ಸೇರಿದಂತೆ ವಿದ್ಯಾರ್ಥಿಗಳು ಪ್ರಾಧ್ಯಾಪಕರ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಎ.ಬಿ.ವಿ.ಪಿ. ಗೂಂಡಾಗಳನ್ನು ಬಂಧಿಸಿ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸುತ್ತಿದೆ ಹಾಸ್ಟೆಲ್ ಶುಲ್ಕ ಹೆಚ್ಚಳ, ಪೌರತ್ವ (ತಿದ್ದುಪಡಿ) ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ರಾಷ್ಟ್ರೀಯ ಜನಸಂಖ್ಯಾ ನೊಂದಣಿ ವಿಚಾರಗಳನ್ನು ವಿರೋಧಿಸಿ ಜಿ.ಎಸ್.ಯು.ಗಳಲ್ಲಿ ಕಳೆದೆರಡು ತಿಂಗಳಿನಿಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು.
 ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನೇ ಗುರಿಯಾಗಿಟ್ಟುಕೊಂಡು ರಾತ್ರಿ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರೆನ್ನದೇ ಮನಸೋ ಇಚ್ಛೆ ಹಲ್ಲೆ ನಡೆಸಿರುವುದು ಅತ್ಯಂತ ಕ್ರೂರ ಮತ್ತು ಖಂಡನೀಯ ಎಂದರು.
 ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಎಬಿವಿಪಿ ಸಂಘಟನೆಯ ಮುಖಂಡರು, ಕಾರ್ಯಕರ್ತರು, ಗೂಂಡಾಗಳಂತೆ ವರ್ತಿಸುತ್ತಿದ್ದಾರೆ. ಇವರಿಗೆ ಬಿಜೆಪಿ ಮತ್ತು ಸಂಘ ಪರಿವಾರದವರ ಬೆಂಬಲವೂ ಇದೆ. ಆದರೇ ದೇಶದ ಪ್ರತಿಷ್ಠಿತ ವಿದ್ಯಾ ಕೇಂದ್ರವಾದ ಜೆ.ಎನ್.ಯು. ನಲ್ಲಿ ವಿದ್ಯಾರ್ಥಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದರು. ನಿನ್ನೆ ವಿದ್ಯಾರ್ಥಿಗಳನ್ನು ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿ, ವಿವಿ ಆವರಣದಲ್ಲಿ ಆತಂಕ ಸೃಷ್ಟಿಸಿಲಾಗಿದೆ ಎಂದರು.
ಘಟನೆಯಲ್ಲಿ ತೀವ್ರ ಗಾಯಗೊಂಡಿರುವ ಜೆ.ಎನ್.ಯು. ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷೆ ಆಯಿಸಿ ಘೋಷ್ ಮತ್ತಿತರರಿಗೆ ಸೂಕ್ತ ಚಿಕಿತ್ಸೆ ನೀಡಿ ರಕ್ಷಣೆ ಒದಗಿಸಬೇಕು. ಘಟನೆಯ ಕುರಿತು ಉನ್ನತ ಮಟ್ಟದ ತನಿಖೆ ಆಗಬೇಕು. ಕೂಡಲೆ ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ ಪ್ರತಿಭಟನಾನಿರತರ ಮೇಲೆ ನಡೆಯುತ್ತಿರುವ ಹಲ್ಲೆಗಳನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು. ಈ ಎಲ್ಲಾ ಘಟನೆಗಳನ್ನು ನೋಡಿದರೆ ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೋ ಅಥವಾ ಯಾವುದೋ ಸರ್ವಾಧಿಕಾರಿ ವ್ಯವಸ್ಥೆಯಲ್ಲಿದ್ದೇವೆಯೇ ಎಂಬ ಅನುಮಾನ ಬರುತ್ತದೆ . ಕೂಡಲೇ ರಾಷ್ಟ್ರಪತಿಗಳು ದೇಶದಲ್ಲಿ ಉಂಟಾಗಿರುವ ಪ್ರಕ್ಷುಬ್ಧ ಪರಿಸ್ಥಿತಿ ಸರಿ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮನವಿ ಮಾಡಿದರು.

ಬೈಟ್ : ರಂಜಿತ್ ಗೊರೂರು, ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.  






Body:0


Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.